ರಾಮನಗರ: ಕನಕಪುರ ತಾಲ್ಲೂಕಿನ ಹೊಸದುರ್ಗ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಏರಂಗೆರೆಯ ಮತಗಟ್ಟೆಯಲ್ಲಿ ಗಲಾಟೆ ನಡೆದಿದೆ.
ಅಭ್ಯರ್ಥಿಯೊಬ್ಬರ ಪತಿ ಮತದಾರರಿಗೆ ಕಣ್ಣು ಕಾಣಿಸುವುದಿಲ್ಲ. ಕೈ ಸರಿ ಇಲ್ಲ ಎಂಬಿತ್ಯಾದಿ ಕಾರಣಗಳನ್ನು ನೀಡಿ, ಮತದಾರರೊಂದಿಗೆ ತಾನೇ ಹೋಗಿ ಮತ ಚಲಾಯಿಸುತ್ತಿದ್ದ. ಇದಕ್ಕೆ ಎದುರಾಳಿ ಬಣದವರು ಆಕ್ಷೇಪ ವ್ಯಕ್ತಪಡಿಸಿದ್ದು, ಈ ವಿಚಾರದಲ್ಲಿ ಕೈಕೈ ಮಿಲಾಯಿಸುವ ಹಂತ ತಲುಪಿತು.
ಇದರಿಂದಾಗಿ ಮತದಾನ ಕೆಲ ಕಾಲ ಸ್ಥಗಿತಗೊಂಡಿತ್ತು. ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು. ನಂತರ ಮತದಾನ ಪ್ರಕ್ರಿಯೆ ಮುಂದುವರಿಯಿತು.