<p>ಕನಕಪುರ: ಕಸಬಾ ಹೋಬಳಿ ನಾರಾಯಣಪುರ ಗ್ರಾಮ ಪಂಚಾಯಿತಿಯಲ್ಲಿ ಮಂಗಳವಾರ ಸರ್ವ ಸದಸ್ಯರ ಸಾಮಾನ್ಯ ಸಭೆಯು ಪಂಚಾಯಿತಿ ಅಧ್ಯಕ್ಷ ಚಾಮುಂಡಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.</p>.<p>ಪಂಚಾಯತಿಯಲ್ಲಿನ ವರ್ಗ-1 ಮತ್ತು 15ನೇ ಹಣಕಾಸು ಹಾಗೂ ಹುಲಿಬಲೆ ಗ್ರಾಮದಲ್ಲಿನ ಪ್ರಧಾನ ಮಂತ್ರಿ ಗ್ರಾಮ ವಿಕಾಸ ಯೋಜನೆಯಡಿಯಲ್ಲಿ ಉಳಿದಿರುವಂತಹ ₹ 14.24ಲಕ್ಷ ಮೊತ್ತಕ್ಕೆ ಅನುಮೋದನೆ ಪಡೆಯಲಾಯಿತು.</p>.<p>ಪಂಚಾಯಿತಿಯಲ್ಲಿ ಎಲೆಕ್ಟ್ರಿಷಿಯನ್ ಮತ್ತು ಆಪರೇಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ತಿಮ್ಮಯ್ಯ ಅವರ ನೇಮಕ ಮಾಡಿಕೊಳ್ಳಲು ಜಿಲ್ಲಾ ಪಂಚಾಯಿತಿಗೆ ಶಿಫಾರಸು ಮಾಡಲು ಪಂಚಾಯಿತಿ ಅನುಮೋದನೆ ನೀಡಿತು.</p>.<p>ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಅಂಗಡಿ ಮಳಿಗೆಗಳಿಗೆ ಜನರಲ್ ಲೈಸೆನ್ಸ್ ನೀಡಲು ಸಭೆ ಒಪ್ಪಿಗೆ ಸೂಚಿಸಿತು.</p>.<p>ಕೆಲವು ಗ್ರಾಮಗಳಲ್ಲಿ ಬಳಕೆ ಮಾಡುತ್ತಿರುವ ಕುಡಿಯುವ ನೀರು ಯೋಗ್ಯವಾಗಿಲ್ಲ ಎಂದು ಗುಣಮಟ್ಟ ಪರೀಕ್ಷಕರು ವರದಿ ನೀಡಿದ್ದಾರೆ ಎಂದು ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮಹಾಂತೇಶ್ ಸಭೆಗೆ ತಿಳಿಸಿದರು.</p>.<p>ಸದಸ್ಯರು ಚರ್ಚೆ ಮಾಡಿ ನೀರು ಕುಡಿಯಲು ಯೋಗ್ಯವಾಗಿಲ್ಲದ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ಮಾಣ ಮಾಡಿ ಜನರಿಗೆ ಕುಡಿಯಲು ನೀರಿನ ವ್ಯವಸ್ಥೆ ಮಾಡಬೇಕೆಂದು ಸಲಹೆ ನೀಡಿದರು.</p>.<p>ಅಕ್ರಮವಾಗಿ ರೆಸಾರ್ಟ್ ನಡೆಸುತ್ತಿದ್ದು ರೆಸಾರ್ಟ್ ನಿರ್ಮಾಣಕ್ಕೆ ಪರವಾನಿಗೆಯನ್ನು ಪಡೆದಿಲ್ಲ, ಅವರು ಈಗ ಕಾನೂನು ಬದ್ಧವಾಗಿ ಲೈಸೆನ್ಸ್ ಪಡೆಯಲು ಮನವಿ ಮಾಡಿದ್ದಾರೆ ಎಂದು ಸಭೆಗೆ ತಿಳಿಸಿದರು.</p>.<p>ಜನರಲ್ ಲೈಸೆನ್ಸ್ ಮತ್ತು ರೆಸಾರ್ಟ್ ಕಟ್ಟಡದ ಅನುಮತಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಪಿಡಿಒ ಅವರು ಸದಸ್ಯರ ಗಮನಕ್ಕೆ ತಂದು ಚರ್ಚೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕನಕಪುರ: ಕಸಬಾ ಹೋಬಳಿ ನಾರಾಯಣಪುರ ಗ್ರಾಮ ಪಂಚಾಯಿತಿಯಲ್ಲಿ ಮಂಗಳವಾರ ಸರ್ವ ಸದಸ್ಯರ ಸಾಮಾನ್ಯ ಸಭೆಯು ಪಂಚಾಯಿತಿ ಅಧ್ಯಕ್ಷ ಚಾಮುಂಡಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.</p>.<p>ಪಂಚಾಯತಿಯಲ್ಲಿನ ವರ್ಗ-1 ಮತ್ತು 15ನೇ ಹಣಕಾಸು ಹಾಗೂ ಹುಲಿಬಲೆ ಗ್ರಾಮದಲ್ಲಿನ ಪ್ರಧಾನ ಮಂತ್ರಿ ಗ್ರಾಮ ವಿಕಾಸ ಯೋಜನೆಯಡಿಯಲ್ಲಿ ಉಳಿದಿರುವಂತಹ ₹ 14.24ಲಕ್ಷ ಮೊತ್ತಕ್ಕೆ ಅನುಮೋದನೆ ಪಡೆಯಲಾಯಿತು.</p>.<p>ಪಂಚಾಯಿತಿಯಲ್ಲಿ ಎಲೆಕ್ಟ್ರಿಷಿಯನ್ ಮತ್ತು ಆಪರೇಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ತಿಮ್ಮಯ್ಯ ಅವರ ನೇಮಕ ಮಾಡಿಕೊಳ್ಳಲು ಜಿಲ್ಲಾ ಪಂಚಾಯಿತಿಗೆ ಶಿಫಾರಸು ಮಾಡಲು ಪಂಚಾಯಿತಿ ಅನುಮೋದನೆ ನೀಡಿತು.</p>.<p>ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಅಂಗಡಿ ಮಳಿಗೆಗಳಿಗೆ ಜನರಲ್ ಲೈಸೆನ್ಸ್ ನೀಡಲು ಸಭೆ ಒಪ್ಪಿಗೆ ಸೂಚಿಸಿತು.</p>.<p>ಕೆಲವು ಗ್ರಾಮಗಳಲ್ಲಿ ಬಳಕೆ ಮಾಡುತ್ತಿರುವ ಕುಡಿಯುವ ನೀರು ಯೋಗ್ಯವಾಗಿಲ್ಲ ಎಂದು ಗುಣಮಟ್ಟ ಪರೀಕ್ಷಕರು ವರದಿ ನೀಡಿದ್ದಾರೆ ಎಂದು ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮಹಾಂತೇಶ್ ಸಭೆಗೆ ತಿಳಿಸಿದರು.</p>.<p>ಸದಸ್ಯರು ಚರ್ಚೆ ಮಾಡಿ ನೀರು ಕುಡಿಯಲು ಯೋಗ್ಯವಾಗಿಲ್ಲದ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ಮಾಣ ಮಾಡಿ ಜನರಿಗೆ ಕುಡಿಯಲು ನೀರಿನ ವ್ಯವಸ್ಥೆ ಮಾಡಬೇಕೆಂದು ಸಲಹೆ ನೀಡಿದರು.</p>.<p>ಅಕ್ರಮವಾಗಿ ರೆಸಾರ್ಟ್ ನಡೆಸುತ್ತಿದ್ದು ರೆಸಾರ್ಟ್ ನಿರ್ಮಾಣಕ್ಕೆ ಪರವಾನಿಗೆಯನ್ನು ಪಡೆದಿಲ್ಲ, ಅವರು ಈಗ ಕಾನೂನು ಬದ್ಧವಾಗಿ ಲೈಸೆನ್ಸ್ ಪಡೆಯಲು ಮನವಿ ಮಾಡಿದ್ದಾರೆ ಎಂದು ಸಭೆಗೆ ತಿಳಿಸಿದರು.</p>.<p>ಜನರಲ್ ಲೈಸೆನ್ಸ್ ಮತ್ತು ರೆಸಾರ್ಟ್ ಕಟ್ಟಡದ ಅನುಮತಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಪಿಡಿಒ ಅವರು ಸದಸ್ಯರ ಗಮನಕ್ಕೆ ತಂದು ಚರ್ಚೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>