<p><strong>ರಾಮನಗರ:</strong> ‘ದಿವಂಗತ ಎಚ್.ಎಲ್. ನಾಗೇಗೌಡರ ಸ್ಮರಣಾರ್ಥ ಜಾನಪದ ಲೋಕದಲ್ಲಿ ಲೋಕಸಿರಿ ಕಾರ್ಯಕ್ರಮವನ್ನು ಪ್ರತಿ ತಿಂಗಳ ಎರಡನೇ ಶನಿವಾರ ಹಮ್ಮಿಕೊಳ್ಳಲಾಗುತ್ತಿದ್ದು, ಇದೀಗ 64ರತ್ತ ಹೆಜ್ಜೆ ಇಟ್ಟಿರುವುದು ಹೆಮ್ಮೆಯ ವಿಚಾರ’ ಎಂದು ಜಾನಪದ ಲೋಕದ ಮ್ಯಾನೇಜಿಂಗ್ ಟ್ರಸ್ಟಿ ಆದಿತ್ಯ ನಂಜರಾಜ್ ತಿಳಿಸಿದರು.</p>.<p>ನಗರ ಹೊರವಲಯದಲ್ಲಿರುವ ಜಾನಪದ ಲೋಕದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಲೋಕಸಿರಿ- ತಿಂಗಳ ಅತಿಥಿ ಕಾರ್ಯಕ್ರಮವನ್ನು ಸಂಬಾಳ ಬಾರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ನಾಡಿನುದ್ದಕ್ಕೂ ಇರುವ ಜಾನಪದ ಕಲೆ ಮತ್ತು ಕಲಾವಿದರನ್ನು ಉಳಿಸಿ ಬೆಳೆಸುವ ನಾಡೋಜ ಎಚ್.ಎಲ್. ನಾಗೇಗೌಡರು ಜಾನಪದ ಲೋಕ ಸ್ಥಾಪಿಸಿದರು ಎಂದು ನುಡಿದರು.</p>.<p>ಹೃದ್ರೋಗ ತಜ್ಞ ಡಾ.ಶಿವಕುಮಾರ್ ಮಾತನಾಡಿ, ಗ್ರಾಮೀಣ ಸೊಗಡಿನ ಜಾನಪದ ಕಲೆಗಳನ್ನು ಉಳಿಸಿ ಬೆಳೆಸುವಲ್ಲಿ ಜಾನಪದ ಲೋಕವು ತನ್ನದೇ ಆದ ರೀತಿಯಲ್ಲಿ ಸಾರ್ಥಕಾದ ಸೇವೆ ಸಲ್ಲಿಸುತ್ತಿದೆ ಎಂದು ಬಣ್ಣಿಸಿದರು.</p>.<p>ಲೋಕಸಿರಿಯ ತಿಂಗಳ ಅತಿಥಿ ಸಂಬಾಳ ಕಲಾವಿದ ಮಲ್ಲಪ್ಪ ಬಾಳಪ್ಪ ಹೂಗಾರ ತಮ್ಮ ಪುತ್ರ ಹನುಮಂತ ಹೂಗಾರ ಜೊತೆಗೂಡಿ ಸಂಬಾಳ ಬಾರಿಸುವ ಮೂಲಕ ಕಲಾಸಕ್ತರು ಹಾಗೂ ಜಾನಪದ ಲೋಕದ ಪ್ರವಾಸಿಗರ ಮನಸೂರೆಗೊಂಡರು.</p>.<p>ಜಾನಪದ ಲೋಕದ ಮುಖ್ಯ ಆಡಳಿತಾಧಿಕಾರಿ ಸಿ.ಎನ್. ರುದ್ರಪ್ಪ, ಕ್ಯೂರೇಟರ್ ಡಾ.ರವಿ, ರಂಗ ಶಿಕ್ಷಕ ಪ್ರದೀಪ್ ಜಕ್ಕನಹಳ್ಳಿ, ಜಾನಪದ ಲೋಕದ ಸಿಬ್ಬಂದಿ ಹಾಗೂ ಆಸಕ್ತರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ:</strong> ‘ದಿವಂಗತ ಎಚ್.ಎಲ್. ನಾಗೇಗೌಡರ ಸ್ಮರಣಾರ್ಥ ಜಾನಪದ ಲೋಕದಲ್ಲಿ ಲೋಕಸಿರಿ ಕಾರ್ಯಕ್ರಮವನ್ನು ಪ್ರತಿ ತಿಂಗಳ ಎರಡನೇ ಶನಿವಾರ ಹಮ್ಮಿಕೊಳ್ಳಲಾಗುತ್ತಿದ್ದು, ಇದೀಗ 64ರತ್ತ ಹೆಜ್ಜೆ ಇಟ್ಟಿರುವುದು ಹೆಮ್ಮೆಯ ವಿಚಾರ’ ಎಂದು ಜಾನಪದ ಲೋಕದ ಮ್ಯಾನೇಜಿಂಗ್ ಟ್ರಸ್ಟಿ ಆದಿತ್ಯ ನಂಜರಾಜ್ ತಿಳಿಸಿದರು.</p>.<p>ನಗರ ಹೊರವಲಯದಲ್ಲಿರುವ ಜಾನಪದ ಲೋಕದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಲೋಕಸಿರಿ- ತಿಂಗಳ ಅತಿಥಿ ಕಾರ್ಯಕ್ರಮವನ್ನು ಸಂಬಾಳ ಬಾರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ನಾಡಿನುದ್ದಕ್ಕೂ ಇರುವ ಜಾನಪದ ಕಲೆ ಮತ್ತು ಕಲಾವಿದರನ್ನು ಉಳಿಸಿ ಬೆಳೆಸುವ ನಾಡೋಜ ಎಚ್.ಎಲ್. ನಾಗೇಗೌಡರು ಜಾನಪದ ಲೋಕ ಸ್ಥಾಪಿಸಿದರು ಎಂದು ನುಡಿದರು.</p>.<p>ಹೃದ್ರೋಗ ತಜ್ಞ ಡಾ.ಶಿವಕುಮಾರ್ ಮಾತನಾಡಿ, ಗ್ರಾಮೀಣ ಸೊಗಡಿನ ಜಾನಪದ ಕಲೆಗಳನ್ನು ಉಳಿಸಿ ಬೆಳೆಸುವಲ್ಲಿ ಜಾನಪದ ಲೋಕವು ತನ್ನದೇ ಆದ ರೀತಿಯಲ್ಲಿ ಸಾರ್ಥಕಾದ ಸೇವೆ ಸಲ್ಲಿಸುತ್ತಿದೆ ಎಂದು ಬಣ್ಣಿಸಿದರು.</p>.<p>ಲೋಕಸಿರಿಯ ತಿಂಗಳ ಅತಿಥಿ ಸಂಬಾಳ ಕಲಾವಿದ ಮಲ್ಲಪ್ಪ ಬಾಳಪ್ಪ ಹೂಗಾರ ತಮ್ಮ ಪುತ್ರ ಹನುಮಂತ ಹೂಗಾರ ಜೊತೆಗೂಡಿ ಸಂಬಾಳ ಬಾರಿಸುವ ಮೂಲಕ ಕಲಾಸಕ್ತರು ಹಾಗೂ ಜಾನಪದ ಲೋಕದ ಪ್ರವಾಸಿಗರ ಮನಸೂರೆಗೊಂಡರು.</p>.<p>ಜಾನಪದ ಲೋಕದ ಮುಖ್ಯ ಆಡಳಿತಾಧಿಕಾರಿ ಸಿ.ಎನ್. ರುದ್ರಪ್ಪ, ಕ್ಯೂರೇಟರ್ ಡಾ.ರವಿ, ರಂಗ ಶಿಕ್ಷಕ ಪ್ರದೀಪ್ ಜಕ್ಕನಹಳ್ಳಿ, ಜಾನಪದ ಲೋಕದ ಸಿಬ್ಬಂದಿ ಹಾಗೂ ಆಸಕ್ತರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>