ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೃದ್ಧಾಶ್ರಮಕ್ಕೆ ದಿನಸಿ ಕಿಟ್

Last Updated 4 ಸೆಪ್ಟೆಂಬರ್ 2021, 3:16 IST
ಅಕ್ಷರ ಗಾತ್ರ

ಚನ್ನಪಟ್ಟಣ: ‘ವೃದ್ಧರನ್ನು ಗೌರವದಿಂದ ಕಾಣುವ ಮನೋಭಾವ ಬೆಳೆಯಬೇಕು’ ಎಂದು ಬೆಂಗಳೂರಿನ ಪ್ರಭಾವತಿ ಫೌಂಡೇಷನ್ ಅಧ್ಯಕ್ಷೆ ಕೆ.ಆರ್. ಪ್ರಭಾವತಿ ಸಲಹೆ ನೀಡಿದರು.

ತಾಲ್ಲೂಕಿನ ದೇವರಹಳ್ಳಿಯ ಶ್ರೀಶಿರಡಿ ಸಾಯಿಬಾಬಾ ವೃದ್ಧಾಶ್ರಮಕ್ಕೆ ಫೌಂಡೇಷನ್ ವತಿಯಿಂದ ದಿನಸಿ ಕಿಟ್ ವಿತರಣೆ ಮಾಡಿ ಮಾತನಾಡಿ, ಇಂದು ವೃದ್ಧರನ್ನು ಅಗೌರವದಿಂದ ಕಾಣುವ ಮನೋಭಾವ ಹೆಚ್ಚಾಗುತ್ತಿದೆ. ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದರು.

ವೃದ್ಧಾಶ್ರಮದಲ್ಲಿರುವ ವೃದ್ಧರನ್ನು ದೇವರಂತೆ ಕಾಣಬೇಕು. ಅವರ ಜೀವನಕ್ಕೆ ನಮ್ಮ ಕೈಲಾದ ಸಹಾಯ ಸಹಕಾರ ಮಾಡಿದಾಗ ಮಾತ್ರ ದೇವರು ಮೆಚ್ಚುತ್ತಾನೆ. ಫೌಂಡೇಷನ್ ವತಿಯಿಂದ ರಾಜ್ಯದಲ್ಲಿರುವ ಎಲ್ಲಾ ವೃದ್ಧಾಶ್ರಮಗಳಿಗೆ ದಿನಸಿ ಕಿಟ್ ವಿತರಣೆ ಮಾಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಇತರೆ ಅವಶ್ಯಕ ಸೌಲಭ್ಯವನ್ನು ಫೌಂಡೇಷನ್ ವತಿಯಿಂದ ನೀಡಲು ಚಿಂತಿಸಲಾಗಿದೆ ಎಂದು ತಿಳಿಸಿದರು.

ಫೌಂಡೇಷನ್ ಕಾರ್ಯದರ್ಶಿ ಡಾ.ಎಂ.ಎಸ್. ಮಹೇಶ್ ಚಕ್ಕಲೂರು ಮಾತನಾಡಿದರು.

ಫೌಂಡೇಷನ್ ಪದಾಧಿಕಾರಿಗಳಾದ ಶಶಿಕಲಾ, ವಿನಯ್ ಕುಮಾರ್, ಮಂಜು, ಆಶ್ರಮದ ಸಂಸ್ಥಾಪಕ ಹರೀಶ್ ಹೆಗ್ಗಡೆ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT