<p><strong>ಕನಕಪುರ</strong>: ಶಾಸಕ ಜಿ.ಟಿ.ದೇವೇಗೌಡ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಸೋಮವಾರ ತಾಲ್ಲೂಕು ಕಚೇರಿ ಮುಂಭಾಗ ಒತ್ತಾಯಿಸಿ ತಹಶೀಲ್ದಾರ್ ಸಂಜಯ್.ಎಂ ಅವರ ಮೂಲಕ ಸ್ವೀಕರ್ಗೆ ಮನವಿ ಸಲ್ಲಿಸಿದರು. </p>.<p>‘ವಿಧಾನಸೌಧದಲ್ಲಿ ಜನಪ್ರತಿನಿಧಿಗಳ ಮುಂದೆ ದಲಿತರನ್ನು ಅವಮಾನಿಸಿರುವ ಶಾಸಕ ಜಿ.ಟಿ.ದೇವೇಗೌಡ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು. ರಾಜಕೀಯವಾಗಿ ಬೆಳೆಯಲು ದಲಿತರು ಬೇಕು. ಬೆಳೆದ ಮೇಲೆ ದಲಿತರನ್ನು ಅವಮಾನಿಸುವುದು ಖಂಡನೀಯ’ ಎಂದು ದಲಿತ ಮುಖಂಡ ರಾಂಪುರ ನಾಗೇಶ್ ಕಿಡಿ ಕಾರಿದರು.</p>.<p>‘ದಲಿತರನ್ನು ಅವಮಾನಿಸಿರುವ ಜಿ.ಟಿ.ದೇವೇಗೌಡ ಅವರು ಸಾರ್ವಜನಿಕರವಾಗಿ ಕ್ಷಮೆಯಾಚಿಸಬೇಕು. ಅವರ ವಿರುದ್ಧ ಸ್ಪೀಕರ್ ಶಿಸ್ತುಕ್ರಮ ಜರುಗಿಸಬೇಕು. ಅದಕ್ಕಾಗಿ ರಾಜ್ಯದ ಎಲ್ಲೆಡೆ ದಲಿತ ಮುಖಂಡರು ಒತ್ತಾಯದ ಮನವಿ ಪತ್ರವನ್ನು ಸ್ಪೀಕರ್ ಅವರಿಗೆ ಸಲ್ಲಿಸುತ್ತಿದ್ದೇವೆ’ ಎಂದರು.</p>.<p>ಒಂದು ವೇಳೆ ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸದಿದ್ದರೆ, ಸರ್ಕಾರವು ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸದಿದ್ದರೆ ಅವರ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದರು.</p>.<p>ತಹಶೀಲ್ದಾರ್ ಸಂಜಯ್.ಎಂ ದಲಿತ ಮುಖಂಡರಿಂದ ಮನವಿ ಪತ್ರ ಸ್ವೀಕರಿಸಿದರು.</p>.<p>ದಲಿತ ಮುಖಂಡರಾದ ಸಾತನೂರು ಮಲ್ಲಿಕಾರ್ಜುನ್, ಮುತ್ತುರಾಜು, ದಿನೇಶ್, ನಟರಾಜು, ನಲ್ಲಳ್ಳಿ ಶಿವು, ಸುರೇಶ್, ಗಿರೀಶ್, ಗಣೇಶ್, ಡಿ.ಕೆ.ಭರತ್ ಸೇರಿದಂತೆ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ</strong>: ಶಾಸಕ ಜಿ.ಟಿ.ದೇವೇಗೌಡ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಸೋಮವಾರ ತಾಲ್ಲೂಕು ಕಚೇರಿ ಮುಂಭಾಗ ಒತ್ತಾಯಿಸಿ ತಹಶೀಲ್ದಾರ್ ಸಂಜಯ್.ಎಂ ಅವರ ಮೂಲಕ ಸ್ವೀಕರ್ಗೆ ಮನವಿ ಸಲ್ಲಿಸಿದರು. </p>.<p>‘ವಿಧಾನಸೌಧದಲ್ಲಿ ಜನಪ್ರತಿನಿಧಿಗಳ ಮುಂದೆ ದಲಿತರನ್ನು ಅವಮಾನಿಸಿರುವ ಶಾಸಕ ಜಿ.ಟಿ.ದೇವೇಗೌಡ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು. ರಾಜಕೀಯವಾಗಿ ಬೆಳೆಯಲು ದಲಿತರು ಬೇಕು. ಬೆಳೆದ ಮೇಲೆ ದಲಿತರನ್ನು ಅವಮಾನಿಸುವುದು ಖಂಡನೀಯ’ ಎಂದು ದಲಿತ ಮುಖಂಡ ರಾಂಪುರ ನಾಗೇಶ್ ಕಿಡಿ ಕಾರಿದರು.</p>.<p>‘ದಲಿತರನ್ನು ಅವಮಾನಿಸಿರುವ ಜಿ.ಟಿ.ದೇವೇಗೌಡ ಅವರು ಸಾರ್ವಜನಿಕರವಾಗಿ ಕ್ಷಮೆಯಾಚಿಸಬೇಕು. ಅವರ ವಿರುದ್ಧ ಸ್ಪೀಕರ್ ಶಿಸ್ತುಕ್ರಮ ಜರುಗಿಸಬೇಕು. ಅದಕ್ಕಾಗಿ ರಾಜ್ಯದ ಎಲ್ಲೆಡೆ ದಲಿತ ಮುಖಂಡರು ಒತ್ತಾಯದ ಮನವಿ ಪತ್ರವನ್ನು ಸ್ಪೀಕರ್ ಅವರಿಗೆ ಸಲ್ಲಿಸುತ್ತಿದ್ದೇವೆ’ ಎಂದರು.</p>.<p>ಒಂದು ವೇಳೆ ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸದಿದ್ದರೆ, ಸರ್ಕಾರವು ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸದಿದ್ದರೆ ಅವರ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದರು.</p>.<p>ತಹಶೀಲ್ದಾರ್ ಸಂಜಯ್.ಎಂ ದಲಿತ ಮುಖಂಡರಿಂದ ಮನವಿ ಪತ್ರ ಸ್ವೀಕರಿಸಿದರು.</p>.<p>ದಲಿತ ಮುಖಂಡರಾದ ಸಾತನೂರು ಮಲ್ಲಿಕಾರ್ಜುನ್, ಮುತ್ತುರಾಜು, ದಿನೇಶ್, ನಟರಾಜು, ನಲ್ಲಳ್ಳಿ ಶಿವು, ಸುರೇಶ್, ಗಿರೀಶ್, ಗಣೇಶ್, ಡಿ.ಕೆ.ಭರತ್ ಸೇರಿದಂತೆ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>