<p><strong>ರಾಮನಗರ</strong>: ‘ಕೃಷಿ ಸಚಿವ ಚಲುವರಾಯಸ್ವಾಮಿ ಅವರ ವಿರುದ್ಧ ಲಂಚದ ಆರೋಪ ಮಾಡಿರುವವರು ಸಾಕ್ಷ್ಯ ನೀಡಬೇಕು. ಸುಮ್ಮನೆ ಆರೋಪ ಮಾಡಿ ಸುಮ್ಮನಾಗುವುದು ಸುಲಭ. ಅದನ್ನು ನಿರೂಪಿಸುವ ಸಾಕ್ಷ್ಯ ಒದಗಿಸಬೇಕು’ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದರು.</p><p>ಬಿಡದಿಯಲ್ಲಿ ಬುಧವಾರ ಈ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ‘ತಮ್ಮ ವಿರುದ್ಧದ ಆರೋಪದಲ್ಲಿ ಹುರುಳಿಲ್ಲ ಎಂದು ಚಲುವರಾಯಸ್ವಾಮಿ ಅವರು ಅಧಿವೇಶನದಲ್ಲೇ ಹೇಳಿದ್ದಾರೆ. ಆರೋಪ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ತನಿಖೆಗೆ ಆದೇಶಿಸಿದ್ದಾರೆ’ ಎಂದರು.</p><p>‘ಎಚ್.ಡಿ.ಕುಮಾರಸ್ವಾಮಿ ಅವರು ಆರೋಪಗಳನ್ನು ಮಾಡುವುದರಲ್ಲಿ ನಿಸ್ಸೀಮರು. ಅವರು ಎಂದಾದರೂ ಸಾಬೀತು ಮಾಡಿದ್ದಾರಾ? ತಮ್ಮ ಪೆನ್ ಡ್ರೈವ್ನಲ್ಲಿ ಏನಿದೆ ಎಂಬುದನ್ನು ಇದುವರೆಗೆ ತೋರಿಸಿಲ್ಲ. ಸಿದ್ದರಾಮಯ್ಯ ಅವರನ್ನು ಲಜ್ಜೆಗೆಟ್ಟ ಸಿಎಂ ಎಂದಿರುವುದು ಅವರ ಸಂಸ್ಕೃತಿಯನ್ನು ತೋರಿಸುತ್ತದೆ’ ಎಂದು ವಾಗ್ದಾಳಿ ನಡೆಸಿದರು.</p><p>‘ಹಿಂದಿನ ಬಿಜೆಪಿ ಸರ್ಕಾರ 40 ಪರ್ಸೆಂಟ್ ಪಡೆಯುತ್ತಿದೆ ಎಂದು ಹೇಳಿದ್ದು ಗುತ್ತಿಗೆದಾರರೇ ಹೊರತು ನಾವಲ್ಲ. ಆಗ ಅಧಿಕಾರದಲ್ಲಿದ್ದ ಬಿಜೆಪಿಯವರು ಆರೋಪದ ಕುರಿತು ತನಿಖೆ ಮಾಡಬಹುದಾಗಿತ್ತು. ಆದರೆ, ಮಾಡಲಿಲ್ಲ. ನಮ್ಮ ಸರ್ಕಾರ ಆ ಕುರಿತು ತನಿಖೆಗೆ ನಿರ್ಣಯಿಸಿದ್ದು, ಕಾನೂನು ಕ್ರಮ ಕೈಗೊಳ್ಳುತ್ತೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ</strong>: ‘ಕೃಷಿ ಸಚಿವ ಚಲುವರಾಯಸ್ವಾಮಿ ಅವರ ವಿರುದ್ಧ ಲಂಚದ ಆರೋಪ ಮಾಡಿರುವವರು ಸಾಕ್ಷ್ಯ ನೀಡಬೇಕು. ಸುಮ್ಮನೆ ಆರೋಪ ಮಾಡಿ ಸುಮ್ಮನಾಗುವುದು ಸುಲಭ. ಅದನ್ನು ನಿರೂಪಿಸುವ ಸಾಕ್ಷ್ಯ ಒದಗಿಸಬೇಕು’ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದರು.</p><p>ಬಿಡದಿಯಲ್ಲಿ ಬುಧವಾರ ಈ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ‘ತಮ್ಮ ವಿರುದ್ಧದ ಆರೋಪದಲ್ಲಿ ಹುರುಳಿಲ್ಲ ಎಂದು ಚಲುವರಾಯಸ್ವಾಮಿ ಅವರು ಅಧಿವೇಶನದಲ್ಲೇ ಹೇಳಿದ್ದಾರೆ. ಆರೋಪ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ತನಿಖೆಗೆ ಆದೇಶಿಸಿದ್ದಾರೆ’ ಎಂದರು.</p><p>‘ಎಚ್.ಡಿ.ಕುಮಾರಸ್ವಾಮಿ ಅವರು ಆರೋಪಗಳನ್ನು ಮಾಡುವುದರಲ್ಲಿ ನಿಸ್ಸೀಮರು. ಅವರು ಎಂದಾದರೂ ಸಾಬೀತು ಮಾಡಿದ್ದಾರಾ? ತಮ್ಮ ಪೆನ್ ಡ್ರೈವ್ನಲ್ಲಿ ಏನಿದೆ ಎಂಬುದನ್ನು ಇದುವರೆಗೆ ತೋರಿಸಿಲ್ಲ. ಸಿದ್ದರಾಮಯ್ಯ ಅವರನ್ನು ಲಜ್ಜೆಗೆಟ್ಟ ಸಿಎಂ ಎಂದಿರುವುದು ಅವರ ಸಂಸ್ಕೃತಿಯನ್ನು ತೋರಿಸುತ್ತದೆ’ ಎಂದು ವಾಗ್ದಾಳಿ ನಡೆಸಿದರು.</p><p>‘ಹಿಂದಿನ ಬಿಜೆಪಿ ಸರ್ಕಾರ 40 ಪರ್ಸೆಂಟ್ ಪಡೆಯುತ್ತಿದೆ ಎಂದು ಹೇಳಿದ್ದು ಗುತ್ತಿಗೆದಾರರೇ ಹೊರತು ನಾವಲ್ಲ. ಆಗ ಅಧಿಕಾರದಲ್ಲಿದ್ದ ಬಿಜೆಪಿಯವರು ಆರೋಪದ ಕುರಿತು ತನಿಖೆ ಮಾಡಬಹುದಾಗಿತ್ತು. ಆದರೆ, ಮಾಡಲಿಲ್ಲ. ನಮ್ಮ ಸರ್ಕಾರ ಆ ಕುರಿತು ತನಿಖೆಗೆ ನಿರ್ಣಯಿಸಿದ್ದು, ಕಾನೂನು ಕ್ರಮ ಕೈಗೊಳ್ಳುತ್ತೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>