ರಾಮನಗರ: ಕೋವಿಡ್ ನಿಯಂತ್ರಣ ಹಾಗೂ ಮಕ್ಕಳ ಆರೋಗ್ಯದ ದೃಷ್ಟಿಯಿಂದ ರಾಜ್ಯದಲ್ಲಿನ ಶಾಲೆ- ಕಾಲೇಜುಗಳನ್ನು ಕನಿಷ್ಠ 15 ದಿನ ಬಂದ್ ಮಾಡಬೇಕು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದರು.
ಚನ್ನಪಟ್ಟಣದಲ್ಲಿ ಗುರುವಾರ ಪತ್ರಕರ್ತರ ಜೊತೆ ಮಾತನಾಡಿದರು. ಈಗಾಗಲೇ ಅನೇಕ ಕಾಲೇಜುಗಳಲ್ಲಿ ಪಾಸಿಟಿವ್ ದರ ಹೆಚ್ಚಾಗಿದೆ. ಸರ್ಕಾರದ ಮುಂದೆ ವಾಸ್ತವಾಂಶದ ವರದಿಗಳು ಇದ್ದು, ಅದನ್ನು ಆಧರಿಸಿ ನಿರ್ಧಾರ ಕೈಗೊಳ್ಳಬೇಕು ಎಂದರು.
ವಾರಾಂತ್ಯ ಕರ್ಫ್ಯೂ ಇಲ್ಲವೇ ಲಾಕ್ ಡೌನ್ ಮಾಡುವುದರಿಂದ ದುಡಿಯುವ ವರ್ಗಕ್ಕೆ ತೊಂದರೆ ಆಗಲಿದೆ. ರೈತರ ಉತ್ಪನ್ನಗಳಿಗೆ ಮಾರುಕಟ್ಟೆಯೂ ಇರುವುದಿಲ್ಲ. ಸರ್ಕಾರ ಇದನ್ನೆಲ್ಲ ಅರಿತು ತೀರ್ಮಾನ ಕೈಗೊಳ್ಳಬೇಕು ಎಂದರು.