ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಲೆ-ಕಾಲೇಜು ಬಂದ್ ಮಾಡಿ: ಕುಮಾರಸ್ವಾಮಿ ಒತ್ತಾಯ

Last Updated 20 ಜನವರಿ 2022, 11:08 IST
ಅಕ್ಷರ ಗಾತ್ರ

ರಾಮನಗರ: ಕೋವಿಡ್ ನಿಯಂತ್ರಣ ಹಾಗೂ ಮಕ್ಕಳ ಆರೋಗ್ಯದ ದೃಷ್ಟಿಯಿಂದ ರಾಜ್ಯದಲ್ಲಿನ ಶಾಲೆ- ಕಾಲೇಜುಗಳನ್ನು ಕನಿಷ್ಠ 15 ದಿನ ಬಂದ್ ಮಾಡಬೇಕು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.‌ ಕುಮಾರಸ್ವಾಮಿ ಆಗ್ರಹಿಸಿದರು.

ಚನ್ನಪಟ್ಟಣದಲ್ಲಿ ಗುರುವಾರ ಪತ್ರಕರ್ತರ ಜೊತೆ ಮಾತನಾಡಿದರು. ಈಗಾಗಲೇ ಅನೇಕ ಕಾಲೇಜುಗಳಲ್ಲಿ ಪಾಸಿಟಿವ್ ದರ ಹೆಚ್ಚಾಗಿದೆ. ಸರ್ಕಾರದ ಮುಂದೆ ವಾಸ್ತವಾಂಶದ ವರದಿಗಳು ಇದ್ದು, ಅದನ್ನು ಆಧರಿಸಿ ನಿರ್ಧಾರ ಕೈಗೊಳ್ಳಬೇಕು ಎಂದರು.

ವಾರಾಂತ್ಯ ಕರ್ಫ್ಯೂ ಇಲ್ಲವೇ ಲಾಕ್ ಡೌನ್ ಮಾಡುವುದರಿಂದ ದುಡಿಯುವ ವರ್ಗಕ್ಕೆ ತೊಂದರೆ ಆಗಲಿದೆ. ರೈತರ ಉತ್ಪನ್ನಗಳಿಗೆ ಮಾರುಕಟ್ಟೆಯೂ ಇರುವುದಿಲ್ಲ. ಸರ್ಕಾರ ಇದನ್ನೆಲ್ಲ ಅರಿತು ತೀರ್ಮಾನ ಕೈಗೊಳ್ಳಬೇಕು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT