<p><strong>ಕನಕಪುರ:</strong> ಸಮಾಜದಲ್ಲಿ ಬದಲಾವಣೆ ಆಗಿದೆ. ಆದರೆ, ಬದಲಾದ ಸಮಾಜದಲ್ಲೂ ಸವಿತಾ ಸಮಾಜದ ಮೇಲಿನ ಭಾವನೆ ಮಾತ್ರ ಇನ್ನೂ ಬದಲಾಗಿಲ್ಲ ಎಂದು ಗ್ರೇಡ್-2 ತಹಶೀಲ್ದಾರ್ ಎಚ್.ಶಿವಕುಮಾರ್ ವಿಷಾದ ವ್ಯಕ್ತಪಡಿಸಿದರು.</p>.<p>ಇಲ್ಲಿನ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯಿಂದ ಶುಕ್ರವಾರ ನಡೆದ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಸವಿತಾ ಸಮಾಜ ಸಮಾಜದಲ್ಲಿ ತನ್ನದೇ ರೀತಿಯಲ್ಲಿ ಕಾರ್ಯ ನಿರ್ವಹಿಸಿ ಸಮಾಜದ ಒಂದು ಭಾಗವಾಗಿದ್ದಾರೆ. ಆದರೂ, ಸಮಾಜದವರನ್ನು ಕೀಳರಿಮೆಯಿಂದ ನೋಡುವುದನ್ನು ಮೋದಲು ಬಿಡಬೇಕು. ಅವರ ಮೇಲಿನ ಭಾವನೆ ಬದಲಾಗಬೇಕೆಂದು ಹೇಳಿದರು.</p>.<p>ಬಸವಣ್ಣ ಅವರು 12ನೇ ಶತಮಾನದಲ್ಲಿ ಅನುಭವ ಮಂಟಪ ಸ್ಥಾಪಿಸಿ ಹಡಪದ ಅಪ್ಪಣ್ಣ ಅವರನ್ನು ಆಪ್ತ ಕಾರ್ಯದರ್ಶಿಯಾಗಿ ನೇಮಕ ಮಾಡಿಕೊಂಡು ಜಾತಿಭೇದ ಹೋಗಲಾಡಿಸುವ ಕೆಲಸ ಮಾಡಿದರು. ಆದರೂ, ಸಮಾಜದಲ್ಲಿ ಜಾತಿ ವ್ಯವಸ್ಥೆ ನಿರ್ಮೂಲನೆ ಆಗಿಲ್ಲ ಎಂದರು.</p>.<p>ಧಮ್ಮ ದೀವಿಗೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಮಲ್ಲಿಕಾರ್ಜುನ್ ಮಾತನಾಡಿ, ಹಡಪದ ಅಪ್ಪಣ್ಣ ಬಸವಣ್ಣ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. ಯಾರೇ ಅನುಭವ ಮಂಟಪದ ಪ್ರವೇಶ ಪಡೆಯಬೇಕಿದ್ದರೂ ಹಡಪದ ಅಪ್ಪಣ್ಣ ಅವರನ್ನು ನೋಡಿಯೇ ಬರಬೇಕು ಎಂದು ಬಸವಣ್ಣ ಕಟ್ಟಾಜ್ಞೆ ಹೊರಡಿಸಿದ್ದರು ಎಂದು ತಿಳಿಸಿದರು.</p>.<p>ಹಡಪದ ಅಪ್ಪಣ್ಣ ಅವರ ಕೈಯಿಂದ ತಾಂಬೂಲ ಅರೆಸಿಕೊಂಡು ತಿನ್ನುತ್ತಿದ್ದ ಬಸವಣ್ಣ, ಅನಿಷ್ಟ ಜಾತಿ ಪದ್ಧತಿ ಆಚರಣೆಗೆ 12ನೇ ಶತಮಾನದಲ್ಲೇ ತಿಲಾಂಜಲಿ ಇಡುವ ಪ್ರಯತ್ನ ನಡೆಸಿದ್ದರು. ಸಮಾಜ ಈಗಲಾದರೂ ಬದಲಾಗಬೇಕು. ಜಾತಿ ವ್ಯವಸ್ಥೆ ಹೋಗಬೇಕು ಎಂದರು.</p>.<p>ವಿವಿಧ ಇಲಾಖೆ ಅಧಿಕಾರಿಗಳು, ಲೇಖಕರ ವೇದಿಕೆ ಅಧ್ಯಕ್ಷ ಕೂ.ಗಿ ಗಿರಿಯಪ್ಪ, ಸವಿತ ಸಮಾಜದ ಅಧ್ಯಕ್ಷ ಶಿವರಾಜು, ಪದಾಧಿಕಾರಿಗಳಾದ ಪ್ರೇಮ್ ಕುಮಾರ್, ವೈರಮುಡಿ ಹಾಗೂ ವಿವಿದ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ:</strong> ಸಮಾಜದಲ್ಲಿ ಬದಲಾವಣೆ ಆಗಿದೆ. ಆದರೆ, ಬದಲಾದ ಸಮಾಜದಲ್ಲೂ ಸವಿತಾ ಸಮಾಜದ ಮೇಲಿನ ಭಾವನೆ ಮಾತ್ರ ಇನ್ನೂ ಬದಲಾಗಿಲ್ಲ ಎಂದು ಗ್ರೇಡ್-2 ತಹಶೀಲ್ದಾರ್ ಎಚ್.ಶಿವಕುಮಾರ್ ವಿಷಾದ ವ್ಯಕ್ತಪಡಿಸಿದರು.</p>.<p>ಇಲ್ಲಿನ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯಿಂದ ಶುಕ್ರವಾರ ನಡೆದ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಸವಿತಾ ಸಮಾಜ ಸಮಾಜದಲ್ಲಿ ತನ್ನದೇ ರೀತಿಯಲ್ಲಿ ಕಾರ್ಯ ನಿರ್ವಹಿಸಿ ಸಮಾಜದ ಒಂದು ಭಾಗವಾಗಿದ್ದಾರೆ. ಆದರೂ, ಸಮಾಜದವರನ್ನು ಕೀಳರಿಮೆಯಿಂದ ನೋಡುವುದನ್ನು ಮೋದಲು ಬಿಡಬೇಕು. ಅವರ ಮೇಲಿನ ಭಾವನೆ ಬದಲಾಗಬೇಕೆಂದು ಹೇಳಿದರು.</p>.<p>ಬಸವಣ್ಣ ಅವರು 12ನೇ ಶತಮಾನದಲ್ಲಿ ಅನುಭವ ಮಂಟಪ ಸ್ಥಾಪಿಸಿ ಹಡಪದ ಅಪ್ಪಣ್ಣ ಅವರನ್ನು ಆಪ್ತ ಕಾರ್ಯದರ್ಶಿಯಾಗಿ ನೇಮಕ ಮಾಡಿಕೊಂಡು ಜಾತಿಭೇದ ಹೋಗಲಾಡಿಸುವ ಕೆಲಸ ಮಾಡಿದರು. ಆದರೂ, ಸಮಾಜದಲ್ಲಿ ಜಾತಿ ವ್ಯವಸ್ಥೆ ನಿರ್ಮೂಲನೆ ಆಗಿಲ್ಲ ಎಂದರು.</p>.<p>ಧಮ್ಮ ದೀವಿಗೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಮಲ್ಲಿಕಾರ್ಜುನ್ ಮಾತನಾಡಿ, ಹಡಪದ ಅಪ್ಪಣ್ಣ ಬಸವಣ್ಣ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. ಯಾರೇ ಅನುಭವ ಮಂಟಪದ ಪ್ರವೇಶ ಪಡೆಯಬೇಕಿದ್ದರೂ ಹಡಪದ ಅಪ್ಪಣ್ಣ ಅವರನ್ನು ನೋಡಿಯೇ ಬರಬೇಕು ಎಂದು ಬಸವಣ್ಣ ಕಟ್ಟಾಜ್ಞೆ ಹೊರಡಿಸಿದ್ದರು ಎಂದು ತಿಳಿಸಿದರು.</p>.<p>ಹಡಪದ ಅಪ್ಪಣ್ಣ ಅವರ ಕೈಯಿಂದ ತಾಂಬೂಲ ಅರೆಸಿಕೊಂಡು ತಿನ್ನುತ್ತಿದ್ದ ಬಸವಣ್ಣ, ಅನಿಷ್ಟ ಜಾತಿ ಪದ್ಧತಿ ಆಚರಣೆಗೆ 12ನೇ ಶತಮಾನದಲ್ಲೇ ತಿಲಾಂಜಲಿ ಇಡುವ ಪ್ರಯತ್ನ ನಡೆಸಿದ್ದರು. ಸಮಾಜ ಈಗಲಾದರೂ ಬದಲಾಗಬೇಕು. ಜಾತಿ ವ್ಯವಸ್ಥೆ ಹೋಗಬೇಕು ಎಂದರು.</p>.<p>ವಿವಿಧ ಇಲಾಖೆ ಅಧಿಕಾರಿಗಳು, ಲೇಖಕರ ವೇದಿಕೆ ಅಧ್ಯಕ್ಷ ಕೂ.ಗಿ ಗಿರಿಯಪ್ಪ, ಸವಿತ ಸಮಾಜದ ಅಧ್ಯಕ್ಷ ಶಿವರಾಜು, ಪದಾಧಿಕಾರಿಗಳಾದ ಪ್ರೇಮ್ ಕುಮಾರ್, ವೈರಮುಡಿ ಹಾಗೂ ವಿವಿದ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>