<p>ಹಲಗೂರು: ಸಮೀಪದ ಚಿಲ್ಲಾಪುರ ಗ್ರಾಮದ ಶ್ರೀ ಸಿದ್ದಪ್ಪಾಜಿ ದೇವಸ್ಥಾನದ ಮೊದಲ ವಾರ್ಷಿಕೋತ್ಸವ ಮತ್ತು ದೊಡ್ಡಮ್ಮ ತಾಯಿ ಗದ್ದುಗೆಗೆ ರಜತ ಕಲಶ, ಮುಖವಾಡ ಸ್ಥಾಪನೆ ಕಾರ್ಯಕ್ರಮ 27ರಂದು ನಡೆಯಲಿದೆ.</p>.<p>ಅಂದು ಬೆಳಿಗ್ಗೆ 9ರಿಂದ ವೇದ ಪಾರಾಯಣ, ಮಹಾ ಸಂಕಲ್ಪ, ಪುಣ್ಯಾಹ ವಾಚನ, ಮಾತೃಕಾ ಪೂಜೆ, ನವಗ್ರಹಾರಾಧನೆ, ಕಲಶಾರ್ಚನೆ, ಅಗ್ನಿಮುಖ, ಮಹಾ ಗಣಪತಿ ಹೋಮ, ನವಗ್ರಹಾಧಿ ಹೋಮ, ವಾಸ್ತು ಶಾಂತಿ, ಪರಿವಾರ, ದೇವತಾ ಹೋಮ ನಡೆಯಲಿದೆ.</p>.<p>ಸಿದ್ದಪ್ಪಾಜಿ ದೇವರ ಹೋಮ, ವಿಶ್ವಕರ್ಮ ಹೋಮ, ಎಲ್ಲಾ ದೇವರಿಗೆ ಅಭಿಷೇಕ ಅಲಂಕಾರ, ಜಯಾದಿ, ಪೂರ್ಣಾಹುತಿ, ಕಲಾಶಾಭಿಷೇಕ ಆಲಂಕಾರ, ಮಹಾ ಮಂಗಳಾರತಿ, ಮಂತ್ರ ಪುಷ್ಪ, ಅಷ್ಟಾವಧಾನ, ಶ್ರೀರಾಮ ನವಮಿ ಆಚರಣೆ ನಡೆಯಲಿದೆ. ಮಧ್ಯಾಹ್ನ ಭಕ್ತಾಧಿಗಳಿಗೆ ಪ್ರಸಾದ ವಿನಿಯೋಗ ಮತ್ತು ಅನ್ನ ಸಂತರ್ಪಣೆ ನಡೆಯಲಿದೆ.</p>.<p>ಹಲಗೂರು, ಚಿಲ್ಲಾಪುರ, ಒದುಬಸಪ್ಪನದೊಡ್ಡಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಎಚ್.ಕೆ.ಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260327-40-979196949</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಲಗೂರು: ಸಮೀಪದ ಚಿಲ್ಲಾಪುರ ಗ್ರಾಮದ ಶ್ರೀ ಸಿದ್ದಪ್ಪಾಜಿ ದೇವಸ್ಥಾನದ ಮೊದಲ ವಾರ್ಷಿಕೋತ್ಸವ ಮತ್ತು ದೊಡ್ಡಮ್ಮ ತಾಯಿ ಗದ್ದುಗೆಗೆ ರಜತ ಕಲಶ, ಮುಖವಾಡ ಸ್ಥಾಪನೆ ಕಾರ್ಯಕ್ರಮ 27ರಂದು ನಡೆಯಲಿದೆ.</p>.<p>ಅಂದು ಬೆಳಿಗ್ಗೆ 9ರಿಂದ ವೇದ ಪಾರಾಯಣ, ಮಹಾ ಸಂಕಲ್ಪ, ಪುಣ್ಯಾಹ ವಾಚನ, ಮಾತೃಕಾ ಪೂಜೆ, ನವಗ್ರಹಾರಾಧನೆ, ಕಲಶಾರ್ಚನೆ, ಅಗ್ನಿಮುಖ, ಮಹಾ ಗಣಪತಿ ಹೋಮ, ನವಗ್ರಹಾಧಿ ಹೋಮ, ವಾಸ್ತು ಶಾಂತಿ, ಪರಿವಾರ, ದೇವತಾ ಹೋಮ ನಡೆಯಲಿದೆ.</p>.<p>ಸಿದ್ದಪ್ಪಾಜಿ ದೇವರ ಹೋಮ, ವಿಶ್ವಕರ್ಮ ಹೋಮ, ಎಲ್ಲಾ ದೇವರಿಗೆ ಅಭಿಷೇಕ ಅಲಂಕಾರ, ಜಯಾದಿ, ಪೂರ್ಣಾಹುತಿ, ಕಲಾಶಾಭಿಷೇಕ ಆಲಂಕಾರ, ಮಹಾ ಮಂಗಳಾರತಿ, ಮಂತ್ರ ಪುಷ್ಪ, ಅಷ್ಟಾವಧಾನ, ಶ್ರೀರಾಮ ನವಮಿ ಆಚರಣೆ ನಡೆಯಲಿದೆ. ಮಧ್ಯಾಹ್ನ ಭಕ್ತಾಧಿಗಳಿಗೆ ಪ್ರಸಾದ ವಿನಿಯೋಗ ಮತ್ತು ಅನ್ನ ಸಂತರ್ಪಣೆ ನಡೆಯಲಿದೆ.</p>.<p>ಹಲಗೂರು, ಚಿಲ್ಲಾಪುರ, ಒದುಬಸಪ್ಪನದೊಡ್ಡಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಎಚ್.ಕೆ.ಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260327-40-979196949</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>