ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಮವಾರ ಹನುಮ ಜಯಂತಿ

Last Updated 7 ಡಿಸೆಂಬರ್ 2019, 12:04 IST
ಅಕ್ಷರ ಗಾತ್ರ

ಮಾಗಡಿ: ತಾಲ್ಲೂಕು ಕಾಳಾರಿ ಅಂಚೆ ವರದೋಹಳ್ಳಿ ವರದಾಂಜನೇಯ ಸ್ವಾಮಿ ದೇವಾಲಯದಲ್ಲಿ ಡಿ.9ರಂದು ಬೆಳಿಗ್ಗೆ 11.30ಕ್ಕೆ ಹನುಮ ಜಯಂತ್ಯುತ್ಸವ ನಡೆಯಲಿದೆ ಎಂದು ತಾಲ್ಲೂಕು ಜೆಡಿಎಸ್‌ ಮಹಿಳಾ ಘಟಕದ ಅಧ್ಯಕ್ಷೆ ಶೈಲಜಾ ತಿಳಿಸಿದ್ದಾರೆ.

ಶಾಸಕ ಎ.ಮಂಜುನಾಥ ಚಾಲನೆ ನೀಡಲಿದ್ದಾರೆ. ಕೆಂಪೇಗೌಡ ಅಭಿವೃದ್ಧಿ ಸಮಿತಿ ಅಧ್ಯಕ್ಷ ಎಚ್‌.ಎಂ.ಕೃಷ್ಣಮೂರ್ತಿ, ರಾಜ್ಯ ಜೆಡಿಎಸ್‌ ಪ್ರಧಾನ ಕಾರ್ಯದರ್ಶಿ ಕೆ.ಕೃಷ್ಣಮೂರ್ತಿ, ತಾಲ್ಲೂಕು ಜೆಡಿಎಸ್‌ ಅಧ್ಯಕ್ಷ ಎಂ.ರಾಮಣ್ಣ, ಭಕ್ತರು ಭಾಗವಹಿಸಲಿದ್ಧಾರೆ. ಮಧ್ಯಾಹ್ನ 12.30ಕ್ಕೆ ಸಾಮೂಹಿಕ ಅನ್ನದಾನ ನಡೆಯಲಿದೆ ಎಂದಿದ್ದಾರೆ.

ಜಯಂತಿ: ಪಟ್ಟಣದ ಹೊಸಪೇಟೆ ರಸ್ತೆ ಸೀತಾರಾಮಾಂಜನೇಯಸ್ವಾಮಿ ದೇವಾಲಯದಲ್ಲಿ ಡಿ.9ರಂದು ಬೆಳಿಗ್ಗೆ 9 ಗಂಟೆಗೆ ಹನುಮ ಜಯಂತಿ ನಡೆಯಲಿದೆ ಎಂದು ಅರ್ಚಕ ವೆಂಕಟೇಶ ಶರ್ಮ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT