<p><strong>ಹಾರೋಹಳ್ಳಿ</strong>: ತಾಲ್ಲೂಕಿನ ಭೈರಮಂಗಲ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ಅಂಬಿಗನಹಳ್ಳದಲ್ಲಿ ನಿರ್ಮಿಸುತ್ತಿರುವ ನಾಲೆಯ ಕಾಮಗಾರಿ ಕಳೆದ 6 ತಿಂಗಳಿಂದ ಕಾಮಗಾರಿ ಸ್ಥಗಿತಗೊಂಡಿದೆ. ಅರ್ಧಂಬರ್ಧ ಕಾಮಗಾರಿಯಿಂದ ನಾಲೆಯಲ್ಲಿ ನೀರು ಹರಿಯುತ್ತಿಲ್ಲ.</p><p>ಅಣೆದೊಡ್ಡಿಯಿಂದ ಕುರುಬರಹಳ್ಳಿಗೆ ವೃಷಭಾವತಿ ನದಿ ನೀರು ಹರಿಯುತ್ತಿದೆ. ನೀರು ಸರಾಗವಾಗಿ ಹರಿಯುವ ಸಲುವಾಗಿ ಸಣ್ಣ ನೀರಾವರಿ ಇಲಾಖೆ ವತಿಯಿಂದ ಈ ನಾಲೆ ನಿರ್ಮಿಸಲಾಗುತ್ತಿದೆ.</p><p>ನಾಲೆ ನಿರ್ಮಾಣದಿಂದ ನಾರಾಯಣಪುರ ಹೊನ್ನಾಲಗನದೊಡ್ಡಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಉಪಯೋಗವಾಗಲಿದೆ.</p><p>ಆದರೆ, ವಿವಿಧ ಕಾರಣಗಳಿಂದ ಇದೀಗ ಕಾಮಗಾರಿ ಅರ್ಧಕ್ಕೆ ನಿಂತಿದೆ. ಇದರಿಂದಾಗಿ ನೀರು ನಿಂತಲ್ಲೇ ನಿಂತಿದೆ. ಕಾಮಗಾರಿಯಿಂದಾಗಿ ಸುತ್ತಮುತ್ತಲಿನ ಕೃಷಿಕರಿಗೆ ಯಾವುದೇ ರೀತಿಯ ಪ್ರಯೋಜನವಾಗಿಲ್ಲ ಎಂದು ಎಂದು ಹೊನ್ನಾಲಗನದೊಡ್ಡಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p><p><strong>ನಿಂತಲ್ಲೇ ನಿಂತ ನೀರು: </strong>ಕಾಮಗಾರಿ ಸ್ಥಗಿತವಾಗಿದ್ದರಿಂದ ಹಲವು ತಿಂಗಳಿನಿಂದ ನಾಲೆಯಲ್ಲಿ ನೀರು ನಿಂತಲ್ಲೇ ನಿಂತಿದೆ. ಇದರಿಂದ ನೀರು ವಾಸನೆ ಬಂದು, ಹುಳುಗಳ ಆವಾಸಸ್ಥಾನವಾಗಿ ಮಾರ್ಪಟ್ಟಿದೆ. ಇದರಿಂದ ಸೊಳ್ಳೆಗಳು ಹೆಚ್ಚಾಗಿದ್ದು ಆರೋಗ್ಯ ಸಮಸ್ಯೆಯ ಆತಂಕ ಎದುರಾಗಿದೆ ಎಂದು ಗ್ರಾಮದ ಶೇಖರ್ ಆಕ್ರೋಶ ವ್ಯಕ್ತಪಡಿಸಿದರು.</p><p>ಕಾಮಗಾರಿ ನಿಂತಿದ್ದರೂ ಇದುವರೆಗೆ ಯಾರೂ ಆ ಬಗ್ಗೆ ಗಮನ ಹರಿಸಿಲ್ಲ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಕಾಮಗಾರಿಯನ್ನು ಆದಷ್ಟು ಬೇಗ ಶುರು ಮಾಡಿ ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿದರು.</p><p><strong>ಬೇಕಾಬಿಟ್ಟಿ ಕಾಮಗಾರಿ: </strong>ನಾಲೆ ನಿರ್ಮಿಸುವ ಸಲುವಾಗಿ ನಾರಾಯಣಪುರ ಗ್ರಾಮದಲ್ಲಿ ಕಾಮಗಾರಿಯನ್ನು ಅನುಷ್ಠಾನ ಮಾಡಲಾಗಿದೆ. ಆದರೆ, ಕಾಮಗಾರಿಯನ್ನು ಸರಿಯಾಗಿ ಮಾಡದೆ ಬೇಕಾಬಿಟ್ಟಿಯಾಗಿ ಮಾಡಲಾಗುತ್ತಿದೆ. </p><p>ಇದರಿಂದ ನೀರು ಸರಾಗವಾಗಿ ಹರಿಯದೆ ನಾಲೆಯ ಮೇಲೆಯೇ ನಿಲ್ಲುತ್ತಿದೆ ಎಂದು ಮತ್ತೊಬ್ಬ ಗ್ರಾಮಸ್ಥರ ಶಿವಣ್ಣ ದೂರಿದರು.</p><p>ಕಾಲುವೆಯಲ್ಲಿ ಹೆಚ್ಚಿನ ನೀರು ಹರಿದರೆ ಕಾಲುವೆಗೇ ಧಕ್ಕೆಯಾಗುವ ಸಾಧ್ಯತೆ ಇದೆ. ಹಾಗಾಗಿ, ಅಧಿಕಾರಿಗಳು ಕಾಮಗಾರಿಯ ಸಾಧಕ–ಬಾಧಕ ಎಲ್ಲದರ ಬಗ್ಗೆ ಗಮನ ಹರಿಸಿ ಈಗಲೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಕಾಮಗಾರಿ ನಡೆಸಬೇಕು ಎಂದು ಒತ್ತಾಯಿಸಿದರು.</p>.<p><strong>‘ಸಂಬಂಧಪಟ್ಟವರು ಗಮನ ಹರಿಸಲಿ’</strong></p><p>‘ಭೈರಮಂಗಲ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ನಾರಾಯಣಪುರ ಗ್ರಾಮದಲ್ಲಿ ನೀರು ಸರಾಗವಾಗಿ ಹರಿಯುವ ಸಲುವಾಗಿ ನಾಲೆ ನಿರ್ಮಾಣ ಕೈಗೆತ್ತಿಕೊಳ್ಳಲಾಗಿದೆ. ಕಾಮಗಾರಿಯಿಂದ ಈ ಭಾಗದ ರೈತರಿಗೆ ಅನುಕೂಲವಾಗಲಿದೆ. ಆದರೆ, ಕಾಮಗಾರಿ ಸರಿಯಾದ ರೀತಿಯಲ್ಲಿ ಅನುಷ್ಠಾನಗೊಳಿಸುವ ಕೆಲಸ ಮಾಡಬೇಕು. ಅರ್ಧಂಬರ್ಧ ಕಾಮಗಾರಿಯಿಂದ ನೀರು ಹರಿಯದೆ ನಿಂತಲ್ಲೇ ನಿಂತಿದೆ. ಕೂಡಲೇ ಸಂಬಂಧಪಟ್ಟವರು ಗಮನಹರಿಸಿ ಕೆಲಸ ಪುನರಾರಂಭಿಸಬೇಕು’ ಎಂದು ಹೊನ್ನಾಲಗನದೊಡ್ಡಿ ಗ್ರಾಮಸ್ಥ ಶೇಖರ್ ಒತ್ತಾಯಿಸಿದರು. </p><p><strong>₹2 ಕೋಟಿ ಮೊತ್ತದ ಕಾಮಗಾರಿ</strong></p><p>ನಾರಾಯಣಪುರ ಗ್ರಾಮದ ಅಂಬಿಗನಹಳ್ಳದಿಂದ ದೊಡ್ಡ ಕುರುಬರಹಳ್ಳಿವರೆಗಿನ ಈ ನಾಲೆಯನ್ನು ₹2 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. 2023ರಲ್ಲಿ ಆರಂಭವಾಗಿದ್ದ ಕಾಮಗಾರಿ 2024ರಲ್ಲಿ ಮುಗಿಯಬೇಕಿತ್ತು. ಆದರೆ, ವಿವಿಧ ಕಾರಣಗಳಿಗಾಗಿ ಅವಧಿ ಮುಗಿದರೂ ಪೂರ್ಣಗೊಂಡಿಲ್ಲ. ಈ ಭಾಗದ ಕೃಷಿ ಚಟುವಟಿಕೆಗಳಿಗೆ ಅನುಕೂಲ ಕಲ್ಪಿಸುವುದಕ್ಕಾಗಿ ನಿರ್ಮಿಸುತ್ತಿರುವ ನಾಲೆಯಿಂದ ನಾರಾಯಣಪುರ, ಹೊನ್ನಾಗಲದೊಡ್ಡಿ, ಕಡಸಿಕೊಪ್ಪ, ಸೋಟ್ಟೆನಹಳ್ಳಿ, ದೊಡ್ಡ ಕುರುಬಹಳ್ಳಿ, ಚಿಕ್ಕಕುರುಬಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಿಗೆ ಅನುಕೂಲವಾಗಲಿದೆ ಎಂದು ಮೂಲಗಳು ತಿಳಿಸಿವೆ.</p>.<div><blockquote>ಕಾಮಗಾರಿ ಅರ್ಧಕ್ಕೆ ಸ್ಥಗಿತಗೊಂಡಿರುವ ಕುರಿತು ಕೂಡಲೇ ಪರಿಶೀಲನೆ ನಡೆಸಿ, ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಲು ಸಂಬಂಧಪಟ್ಟ ಗುತ್ತಿಗೆದಾರರಿಗೆ ಸೂಚನೆ ನೀಡಲಾಗುವುದು </blockquote><span class="attribution">ಕೊಟ್ರೇಶ್,ಕಾರ್ಯನಿರ್ವಾಹಕ ಎಂಜಿನಿಯರ್, ಕಾವೇರಿ ನೀರಾವರಿ ನಿಗಮ, ಬೆಂಗಳೂರು ದಕ್ಷಿಣ ಜಿಲ್ಲೆ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾರೋಹಳ್ಳಿ</strong>: ತಾಲ್ಲೂಕಿನ ಭೈರಮಂಗಲ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ಅಂಬಿಗನಹಳ್ಳದಲ್ಲಿ ನಿರ್ಮಿಸುತ್ತಿರುವ ನಾಲೆಯ ಕಾಮಗಾರಿ ಕಳೆದ 6 ತಿಂಗಳಿಂದ ಕಾಮಗಾರಿ ಸ್ಥಗಿತಗೊಂಡಿದೆ. ಅರ್ಧಂಬರ್ಧ ಕಾಮಗಾರಿಯಿಂದ ನಾಲೆಯಲ್ಲಿ ನೀರು ಹರಿಯುತ್ತಿಲ್ಲ.</p><p>ಅಣೆದೊಡ್ಡಿಯಿಂದ ಕುರುಬರಹಳ್ಳಿಗೆ ವೃಷಭಾವತಿ ನದಿ ನೀರು ಹರಿಯುತ್ತಿದೆ. ನೀರು ಸರಾಗವಾಗಿ ಹರಿಯುವ ಸಲುವಾಗಿ ಸಣ್ಣ ನೀರಾವರಿ ಇಲಾಖೆ ವತಿಯಿಂದ ಈ ನಾಲೆ ನಿರ್ಮಿಸಲಾಗುತ್ತಿದೆ.</p><p>ನಾಲೆ ನಿರ್ಮಾಣದಿಂದ ನಾರಾಯಣಪುರ ಹೊನ್ನಾಲಗನದೊಡ್ಡಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಉಪಯೋಗವಾಗಲಿದೆ.</p><p>ಆದರೆ, ವಿವಿಧ ಕಾರಣಗಳಿಂದ ಇದೀಗ ಕಾಮಗಾರಿ ಅರ್ಧಕ್ಕೆ ನಿಂತಿದೆ. ಇದರಿಂದಾಗಿ ನೀರು ನಿಂತಲ್ಲೇ ನಿಂತಿದೆ. ಕಾಮಗಾರಿಯಿಂದಾಗಿ ಸುತ್ತಮುತ್ತಲಿನ ಕೃಷಿಕರಿಗೆ ಯಾವುದೇ ರೀತಿಯ ಪ್ರಯೋಜನವಾಗಿಲ್ಲ ಎಂದು ಎಂದು ಹೊನ್ನಾಲಗನದೊಡ್ಡಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p><p><strong>ನಿಂತಲ್ಲೇ ನಿಂತ ನೀರು: </strong>ಕಾಮಗಾರಿ ಸ್ಥಗಿತವಾಗಿದ್ದರಿಂದ ಹಲವು ತಿಂಗಳಿನಿಂದ ನಾಲೆಯಲ್ಲಿ ನೀರು ನಿಂತಲ್ಲೇ ನಿಂತಿದೆ. ಇದರಿಂದ ನೀರು ವಾಸನೆ ಬಂದು, ಹುಳುಗಳ ಆವಾಸಸ್ಥಾನವಾಗಿ ಮಾರ್ಪಟ್ಟಿದೆ. ಇದರಿಂದ ಸೊಳ್ಳೆಗಳು ಹೆಚ್ಚಾಗಿದ್ದು ಆರೋಗ್ಯ ಸಮಸ್ಯೆಯ ಆತಂಕ ಎದುರಾಗಿದೆ ಎಂದು ಗ್ರಾಮದ ಶೇಖರ್ ಆಕ್ರೋಶ ವ್ಯಕ್ತಪಡಿಸಿದರು.</p><p>ಕಾಮಗಾರಿ ನಿಂತಿದ್ದರೂ ಇದುವರೆಗೆ ಯಾರೂ ಆ ಬಗ್ಗೆ ಗಮನ ಹರಿಸಿಲ್ಲ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಕಾಮಗಾರಿಯನ್ನು ಆದಷ್ಟು ಬೇಗ ಶುರು ಮಾಡಿ ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿದರು.</p><p><strong>ಬೇಕಾಬಿಟ್ಟಿ ಕಾಮಗಾರಿ: </strong>ನಾಲೆ ನಿರ್ಮಿಸುವ ಸಲುವಾಗಿ ನಾರಾಯಣಪುರ ಗ್ರಾಮದಲ್ಲಿ ಕಾಮಗಾರಿಯನ್ನು ಅನುಷ್ಠಾನ ಮಾಡಲಾಗಿದೆ. ಆದರೆ, ಕಾಮಗಾರಿಯನ್ನು ಸರಿಯಾಗಿ ಮಾಡದೆ ಬೇಕಾಬಿಟ್ಟಿಯಾಗಿ ಮಾಡಲಾಗುತ್ತಿದೆ. </p><p>ಇದರಿಂದ ನೀರು ಸರಾಗವಾಗಿ ಹರಿಯದೆ ನಾಲೆಯ ಮೇಲೆಯೇ ನಿಲ್ಲುತ್ತಿದೆ ಎಂದು ಮತ್ತೊಬ್ಬ ಗ್ರಾಮಸ್ಥರ ಶಿವಣ್ಣ ದೂರಿದರು.</p><p>ಕಾಲುವೆಯಲ್ಲಿ ಹೆಚ್ಚಿನ ನೀರು ಹರಿದರೆ ಕಾಲುವೆಗೇ ಧಕ್ಕೆಯಾಗುವ ಸಾಧ್ಯತೆ ಇದೆ. ಹಾಗಾಗಿ, ಅಧಿಕಾರಿಗಳು ಕಾಮಗಾರಿಯ ಸಾಧಕ–ಬಾಧಕ ಎಲ್ಲದರ ಬಗ್ಗೆ ಗಮನ ಹರಿಸಿ ಈಗಲೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಕಾಮಗಾರಿ ನಡೆಸಬೇಕು ಎಂದು ಒತ್ತಾಯಿಸಿದರು.</p>.<p><strong>‘ಸಂಬಂಧಪಟ್ಟವರು ಗಮನ ಹರಿಸಲಿ’</strong></p><p>‘ಭೈರಮಂಗಲ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ನಾರಾಯಣಪುರ ಗ್ರಾಮದಲ್ಲಿ ನೀರು ಸರಾಗವಾಗಿ ಹರಿಯುವ ಸಲುವಾಗಿ ನಾಲೆ ನಿರ್ಮಾಣ ಕೈಗೆತ್ತಿಕೊಳ್ಳಲಾಗಿದೆ. ಕಾಮಗಾರಿಯಿಂದ ಈ ಭಾಗದ ರೈತರಿಗೆ ಅನುಕೂಲವಾಗಲಿದೆ. ಆದರೆ, ಕಾಮಗಾರಿ ಸರಿಯಾದ ರೀತಿಯಲ್ಲಿ ಅನುಷ್ಠಾನಗೊಳಿಸುವ ಕೆಲಸ ಮಾಡಬೇಕು. ಅರ್ಧಂಬರ್ಧ ಕಾಮಗಾರಿಯಿಂದ ನೀರು ಹರಿಯದೆ ನಿಂತಲ್ಲೇ ನಿಂತಿದೆ. ಕೂಡಲೇ ಸಂಬಂಧಪಟ್ಟವರು ಗಮನಹರಿಸಿ ಕೆಲಸ ಪುನರಾರಂಭಿಸಬೇಕು’ ಎಂದು ಹೊನ್ನಾಲಗನದೊಡ್ಡಿ ಗ್ರಾಮಸ್ಥ ಶೇಖರ್ ಒತ್ತಾಯಿಸಿದರು. </p><p><strong>₹2 ಕೋಟಿ ಮೊತ್ತದ ಕಾಮಗಾರಿ</strong></p><p>ನಾರಾಯಣಪುರ ಗ್ರಾಮದ ಅಂಬಿಗನಹಳ್ಳದಿಂದ ದೊಡ್ಡ ಕುರುಬರಹಳ್ಳಿವರೆಗಿನ ಈ ನಾಲೆಯನ್ನು ₹2 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. 2023ರಲ್ಲಿ ಆರಂಭವಾಗಿದ್ದ ಕಾಮಗಾರಿ 2024ರಲ್ಲಿ ಮುಗಿಯಬೇಕಿತ್ತು. ಆದರೆ, ವಿವಿಧ ಕಾರಣಗಳಿಗಾಗಿ ಅವಧಿ ಮುಗಿದರೂ ಪೂರ್ಣಗೊಂಡಿಲ್ಲ. ಈ ಭಾಗದ ಕೃಷಿ ಚಟುವಟಿಕೆಗಳಿಗೆ ಅನುಕೂಲ ಕಲ್ಪಿಸುವುದಕ್ಕಾಗಿ ನಿರ್ಮಿಸುತ್ತಿರುವ ನಾಲೆಯಿಂದ ನಾರಾಯಣಪುರ, ಹೊನ್ನಾಗಲದೊಡ್ಡಿ, ಕಡಸಿಕೊಪ್ಪ, ಸೋಟ್ಟೆನಹಳ್ಳಿ, ದೊಡ್ಡ ಕುರುಬಹಳ್ಳಿ, ಚಿಕ್ಕಕುರುಬಹಳ್ಳಿ ಸೇರಿದಂತೆ ಈ ಭಾಗದ ಹಲವು ಗ್ರಾಮಗಳಿಗೆ ಅನುಕೂಲವಾಗಲಿದೆ ಎಂದು ಮೂಲಗಳು ತಿಳಿಸಿವೆ.</p>.<div><blockquote>ಕಾಮಗಾರಿ ಅರ್ಧಕ್ಕೆ ಸ್ಥಗಿತಗೊಂಡಿರುವ ಕುರಿತು ಕೂಡಲೇ ಪರಿಶೀಲನೆ ನಡೆಸಿ, ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಲು ಸಂಬಂಧಪಟ್ಟ ಗುತ್ತಿಗೆದಾರರಿಗೆ ಸೂಚನೆ ನೀಡಲಾಗುವುದು </blockquote><span class="attribution">ಕೊಟ್ರೇಶ್,ಕಾರ್ಯನಿರ್ವಾಹಕ ಎಂಜಿನಿಯರ್, ಕಾವೇರಿ ನೀರಾವರಿ ನಿಗಮ, ಬೆಂಗಳೂರು ದಕ್ಷಿಣ ಜಿಲ್ಲೆ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>