<p><strong>ಹಾರೋಹಳ್ಳಿ</strong>: ಪಟ್ಟಣಕ್ಕೆ ಸಮೀಪದ ಚುಳುಕನಗಿರಿ ಬೆಟ್ಟದಲ್ಲಿಅಕ್ರಮವಾಗಿ ಮಣ್ಣು ಅಗೆದು ಮಾರಾಟ ಮಾಡಲಾಗುತ್ತಿದೆ. </p>.<p>ಯಂತ್ರಗಳ್ನು ಬಳಸಿ ಆಳದವರೆಗೆ ಮಣ್ಣು ಅಗೆದು ನಿತ್ಯ ನೂರಾರು ಲಾರಿಗಳಲ್ಲಿ ಹೊರಗೆ ಸಾಗಿಸಲಾಗುತ್ತಿದೆ.</p>.<p>ಮಣ್ಣಿಗೆ ಭಾರಿ ಬೇಡಿಕೆ ಇರುವುದರಿಂದ ತಾಲ್ಲೂಕಿನಲ್ಲಿ ಇದೀಗ ಮಣ್ಣಿನ ವ್ಯವಹಾರ ಬಿರುಸುಗೊಂಡಿದೆ. ಈ ಭಾಗದಲ್ಲಿ ಎಲ್ಲೆಂದರಲ್ಲಿ ಗುಡ್ಡಗಳನ್ನು ಕೊರೆದು ಮಣ್ಣು ಸಾಗಿಸಲಾಗುತ್ತಿದೆ. ಎಲ್ಲೆಡೆ ಮಣ್ಣು ಸಾಗಿಸುವ ವಾಹನಗಳ ಭರಾಟೆ ಜೋರಾಗಿದೆ. </p>.<p>ಸರ್ಕಾರಿ ಜಾಗದಲ್ಲಿ ಮಣ್ಣು ತೆಗೆದು ಸಾಗಾಟ ಮಾಡಬೇಕಾದರೆ ಸ್ಥಳೀಯ ಆಡಳಿತದಿಂದ ಪರವಾನಿಗೆ ಪಡೆಯಬೇಕು. ಮಣ್ಣು ತೆಗೆಯುವ ಪ್ರಮಾಣಕ್ಕೆ ಅನುಗುಣವಾಗಿ ಸರ್ಕಾರಕ್ಕೆ ಹಣ ಸಂದಾಯ ಮಾಡಬೇಕು. ಇದ್ಯಾವುದೂ ಮಾಡದ ಮಣ್ಣುಗಳ್ಳರು ರಾತ್ರಿ ಸಮಯದಲ್ಲಿ ಮಣ್ಣು ಸಾಗಣೆ ದಂಧೆ ಮಾಡುತ್ತಿದ್ದಾರೆ.</p>.<p>ಬೆಟ್ಟ–ಗುಡ್ಡಗಳೇ ಮಣ್ಣು ಅಕ್ರಮ ಸಾಗಣೆದಾರರಿಗೆ ತುತ್ತಾಗುತ್ತಿವೆ. ಈಗಾಗಲೇ ಚುಳುಕನಗಿರಿ ಬೆಟ್ಟದ ತಪ್ಪಲಿನ ಸುತ್ತಮುತ್ತ ಸುಮಾರು ನೂರಾರು ಎಕರೆ ಪ್ರದೇಶದ ಮಣ್ಣಿನ ಗುಡ್ಡವನ್ನು ಕೊರೆದು ಲೂಟಿ ಮಾಡಲಾಗುತ್ತಿದೆ.</p><p>––</p>.<p><strong>ಹಾರೋಹಳ್ಳಿ ತಾಲ್ಲೂಕಿನ ವಿವಿಧೆಡೆ ಚುಳುಕನಗಿರಿ ಬೆಟ್ಟ ಸೇರಿದಂತೆ ಕೈಗಾರಿಕಾ ಪ್ರದೇಶ ಸರ್ಕಾರಿ ಗೋಮಾಳ ಖಾಲಿ ಜಾಗದಲ್ಲಿ ಮಣ್ಣು ದಂಧೆ ಯಾವುದೇ ಭಯವಿಲ್ಲದೆ ನಡೆಯುತ್ತಿದೆ.</strong></p><p><strong>–ನಾಗರಾಜು ಸಮಾಜಿಕ ಕಾರ್ಯಕರ್ತ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾರೋಹಳ್ಳಿ</strong>: ಪಟ್ಟಣಕ್ಕೆ ಸಮೀಪದ ಚುಳುಕನಗಿರಿ ಬೆಟ್ಟದಲ್ಲಿಅಕ್ರಮವಾಗಿ ಮಣ್ಣು ಅಗೆದು ಮಾರಾಟ ಮಾಡಲಾಗುತ್ತಿದೆ. </p>.<p>ಯಂತ್ರಗಳ್ನು ಬಳಸಿ ಆಳದವರೆಗೆ ಮಣ್ಣು ಅಗೆದು ನಿತ್ಯ ನೂರಾರು ಲಾರಿಗಳಲ್ಲಿ ಹೊರಗೆ ಸಾಗಿಸಲಾಗುತ್ತಿದೆ.</p>.<p>ಮಣ್ಣಿಗೆ ಭಾರಿ ಬೇಡಿಕೆ ಇರುವುದರಿಂದ ತಾಲ್ಲೂಕಿನಲ್ಲಿ ಇದೀಗ ಮಣ್ಣಿನ ವ್ಯವಹಾರ ಬಿರುಸುಗೊಂಡಿದೆ. ಈ ಭಾಗದಲ್ಲಿ ಎಲ್ಲೆಂದರಲ್ಲಿ ಗುಡ್ಡಗಳನ್ನು ಕೊರೆದು ಮಣ್ಣು ಸಾಗಿಸಲಾಗುತ್ತಿದೆ. ಎಲ್ಲೆಡೆ ಮಣ್ಣು ಸಾಗಿಸುವ ವಾಹನಗಳ ಭರಾಟೆ ಜೋರಾಗಿದೆ. </p>.<p>ಸರ್ಕಾರಿ ಜಾಗದಲ್ಲಿ ಮಣ್ಣು ತೆಗೆದು ಸಾಗಾಟ ಮಾಡಬೇಕಾದರೆ ಸ್ಥಳೀಯ ಆಡಳಿತದಿಂದ ಪರವಾನಿಗೆ ಪಡೆಯಬೇಕು. ಮಣ್ಣು ತೆಗೆಯುವ ಪ್ರಮಾಣಕ್ಕೆ ಅನುಗುಣವಾಗಿ ಸರ್ಕಾರಕ್ಕೆ ಹಣ ಸಂದಾಯ ಮಾಡಬೇಕು. ಇದ್ಯಾವುದೂ ಮಾಡದ ಮಣ್ಣುಗಳ್ಳರು ರಾತ್ರಿ ಸಮಯದಲ್ಲಿ ಮಣ್ಣು ಸಾಗಣೆ ದಂಧೆ ಮಾಡುತ್ತಿದ್ದಾರೆ.</p>.<p>ಬೆಟ್ಟ–ಗುಡ್ಡಗಳೇ ಮಣ್ಣು ಅಕ್ರಮ ಸಾಗಣೆದಾರರಿಗೆ ತುತ್ತಾಗುತ್ತಿವೆ. ಈಗಾಗಲೇ ಚುಳುಕನಗಿರಿ ಬೆಟ್ಟದ ತಪ್ಪಲಿನ ಸುತ್ತಮುತ್ತ ಸುಮಾರು ನೂರಾರು ಎಕರೆ ಪ್ರದೇಶದ ಮಣ್ಣಿನ ಗುಡ್ಡವನ್ನು ಕೊರೆದು ಲೂಟಿ ಮಾಡಲಾಗುತ್ತಿದೆ.</p><p>––</p>.<p><strong>ಹಾರೋಹಳ್ಳಿ ತಾಲ್ಲೂಕಿನ ವಿವಿಧೆಡೆ ಚುಳುಕನಗಿರಿ ಬೆಟ್ಟ ಸೇರಿದಂತೆ ಕೈಗಾರಿಕಾ ಪ್ರದೇಶ ಸರ್ಕಾರಿ ಗೋಮಾಳ ಖಾಲಿ ಜಾಗದಲ್ಲಿ ಮಣ್ಣು ದಂಧೆ ಯಾವುದೇ ಭಯವಿಲ್ಲದೆ ನಡೆಯುತ್ತಿದೆ.</strong></p><p><strong>–ನಾಗರಾಜು ಸಮಾಜಿಕ ಕಾರ್ಯಕರ್ತ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>