<p><strong>ಹಾರೋಹಳ್ಳಿ</strong>: ಶಿಥಿಲ ಶಾಲೆಗಳ ಕುರಿತು ‘ಪ್ರಜಾವಾಣಿ’ಯಲ್ಲಿ ಪ್ರಕಟವಾದ ಸರಣಿ ವರದಿಗಳ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ದುರಸ್ತಿ ಕಾರ್ಯ ಕೈಗೊಳ್ಳಲು ಅನುದಾನ ಬಿಡುಗಡೆಗೊಂಡಿದೆ.</p>.<p>ತಾಲ್ಲೂಕಿನ ಕರ್ನಾಟಕ ಪಬ್ಲಿಕ್ ಶಾಲೆ, ಟಿ ಹೊಸಹಳ್ಳಿ ಹಿರಿಯ ಪ್ರಾಥಮಿಕ ಶಾಲೆ, ತೋಕಸಂದ್ರ ಹಿರಿಯ ಪ್ರಾಥಮಿಕ ಶಾಲೆ ಕುರಿತು ‘ಶಿಥಿಲ ಶಾಲೆ ಸರಣಿ’ ವರದಿಗಳು ಪ್ರಕಟಗೊಂಡಿದ್ದವು. ತಾಲ್ಲೂಕಿನ 9 ಶಾಲೆಗಳ ದುರಸ್ತಿಗೆ ₹1.68ಕೋಟಿ ವೆಚ್ಚದ ಕಾಮಗಾರಿಗೆ ಶಾಸಕ ಇಕ್ಬಾಲ್ ಹುಸೇನ್ ಚಾಲನೆ ನೀಡಿದರು.</p>.<p>ಶಾಸಕ ಇಕ್ಬಾಲ್ ಹುಸೇನ್, ತಾಲ್ಲೂಕಿನ ಕೆಲವು ಸರ್ಕಾರಿ ಶಾಲೆಗಳ ದುರಸ್ತಿ ಬಗ್ಗೆ ಹಲವು ದೂರುಗಳು ಕೇಳಿ ಬಂದಿವೆ. ಸುಧಾರಣೆ ದೃಷ್ಟಿಯಿಂದ ಚಾವಣಿ, ಕಿಟಕಿ, ಬಾಗಿಲು, ನೆಲಕ್ಕೆ ಟೈಲ್ಸ್, ಸುಣ್ಣ ಬಳಿಯುವುದು ಹೀಗೆ ಹಲವು ದುರಸ್ತಿ ಕೆಲಸ ನಡೆಯಲಿದೆ ಎಂದರು. </p>.<p>ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಟರಾಜು, ಗ್ರಾಮೀಣಾಭಿವೃದ್ಧಿ ಇಲಾಖೆ ಚಂದ್ರಶೇಖರ್, ಮುಖಂಡರಾದ ನಾಗರಾಜು, ನಾಗೇಶ್, ಮೋಹನ್ ಹೊಳ್ಳ, ಶಿವಾನಂದ್, ಬೆಣಚುಕಲ್ ದೊಡ್ಡಿ ರುದ್ರೇಶ್,ಕಾಳಮ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾರೋಹಳ್ಳಿ</strong>: ಶಿಥಿಲ ಶಾಲೆಗಳ ಕುರಿತು ‘ಪ್ರಜಾವಾಣಿ’ಯಲ್ಲಿ ಪ್ರಕಟವಾದ ಸರಣಿ ವರದಿಗಳ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ದುರಸ್ತಿ ಕಾರ್ಯ ಕೈಗೊಳ್ಳಲು ಅನುದಾನ ಬಿಡುಗಡೆಗೊಂಡಿದೆ.</p>.<p>ತಾಲ್ಲೂಕಿನ ಕರ್ನಾಟಕ ಪಬ್ಲಿಕ್ ಶಾಲೆ, ಟಿ ಹೊಸಹಳ್ಳಿ ಹಿರಿಯ ಪ್ರಾಥಮಿಕ ಶಾಲೆ, ತೋಕಸಂದ್ರ ಹಿರಿಯ ಪ್ರಾಥಮಿಕ ಶಾಲೆ ಕುರಿತು ‘ಶಿಥಿಲ ಶಾಲೆ ಸರಣಿ’ ವರದಿಗಳು ಪ್ರಕಟಗೊಂಡಿದ್ದವು. ತಾಲ್ಲೂಕಿನ 9 ಶಾಲೆಗಳ ದುರಸ್ತಿಗೆ ₹1.68ಕೋಟಿ ವೆಚ್ಚದ ಕಾಮಗಾರಿಗೆ ಶಾಸಕ ಇಕ್ಬಾಲ್ ಹುಸೇನ್ ಚಾಲನೆ ನೀಡಿದರು.</p>.<p>ಶಾಸಕ ಇಕ್ಬಾಲ್ ಹುಸೇನ್, ತಾಲ್ಲೂಕಿನ ಕೆಲವು ಸರ್ಕಾರಿ ಶಾಲೆಗಳ ದುರಸ್ತಿ ಬಗ್ಗೆ ಹಲವು ದೂರುಗಳು ಕೇಳಿ ಬಂದಿವೆ. ಸುಧಾರಣೆ ದೃಷ್ಟಿಯಿಂದ ಚಾವಣಿ, ಕಿಟಕಿ, ಬಾಗಿಲು, ನೆಲಕ್ಕೆ ಟೈಲ್ಸ್, ಸುಣ್ಣ ಬಳಿಯುವುದು ಹೀಗೆ ಹಲವು ದುರಸ್ತಿ ಕೆಲಸ ನಡೆಯಲಿದೆ ಎಂದರು. </p>.<p>ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಟರಾಜು, ಗ್ರಾಮೀಣಾಭಿವೃದ್ಧಿ ಇಲಾಖೆ ಚಂದ್ರಶೇಖರ್, ಮುಖಂಡರಾದ ನಾಗರಾಜು, ನಾಗೇಶ್, ಮೋಹನ್ ಹೊಳ್ಳ, ಶಿವಾನಂದ್, ಬೆಣಚುಕಲ್ ದೊಡ್ಡಿ ರುದ್ರೇಶ್,ಕಾಳಮ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>