<p><strong>ಹಾರೋಹಳ್ಳಿ:</strong> ಹತ್ತು ದಿನಗಳ ಹಿಂದೆ ಹಗಲು ಹೊತ್ತಿನಲ್ಲಿಯೇ ಮರಳವಾಡಿ ಹೋಬಳಿಯ ಮರಸರಹಳ್ಳಿಯ ಮನೆಯೊಂದರ ಬೀಗ ಮುರಿದು ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಹಾರೋಹಳ್ಳಿ ಪೊಲೀಸರು ಬಂಧಿಸಿದ್ದಾರೆ.</p>.<p>ಬೆಂಗಳೂರು ನಗರ ಜಿಲ್ಲೆ ಆನೆಕಲ್ ತಾಲೂಕಿನ ಗೌರೇನಹಳ್ಳಿ ಗ್ರಾಮದ ಮಂಜುನಾಥ್ (36) ಹಾಗೂ ರಿಯಾಜ್ ಪಾಷಾ ಅಲಿಯಾಸ್ ಕಾಲು (42) ಎಂಬುವರನ್ನು ಬಂಧಿಸಿ 151 ಗ್ರಾಂ ಚಿನ್ನಾಭರಣ, 32 ಗ್ರಾಂ ಬೆಳ್ಳಿ ಸರ ಮತ್ತು ₹18 ಸಾವಿರ ನಗದು, ಕೃತ್ಯಕ್ಕೆ ಬಳಸಿದ ಆಟೊ, ಬೈಕ್ ಸೇರಿದಂತೆ ₹20 ಲಕ್ಷ ಮೌಲ್ಯದ ವಶಪಡಿಸಿಕೊಂಡಿದ್ದಾರೆ. </p>.<p>ಡಿ.11ರಂದು ಮರಳವಾಡಿ ಹೋಬಳಿಯ ಮರಸರಹಳ್ಳಿಯ ಕೃಷ್ಣ ಎಂಬುವರ ಪತ್ನಿ ಹಾಗೂ ಮಗಳು ಮನೆಗೆ ಬೀಗ ಹಾಕಿ ತೋಟಕ್ಕೆ ಹೋದಾಗ ಬೀಗ ಮುರಿದು ಚಿನ್ನಾಭರಣ ಕಳ್ಳತನ ಮಾಡಲಾಗಿತ್ತು. ಹಾರೋಹಳ್ಳಿ ಠಾಣೆಯಲ್ಲಿ ದೂರು ದಾಖಲಾಗಿತ್ತು.ಪ್ರಕರಣ ದಾಖಲಿಸಿಕೊಂಡಿದ್ದ ಹಾರೋಹಳ್ಳಿ ಪೊಲೀಸರು ತನಿಖೆ ಕೈಗೊಂಡಿದ್ದರು.</p>.<p>ಆರೋಪಿಗಳ ಪತ್ತೆ ಬಗ್ಗೆ ಮಾಹಿತಿ ಕಲೆ ಹಾಕಿದ ಪೊಲೀಸರು ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಳ್ಳತನ ಪ್ರಕರಣ ಹೊರಬಂದಿದೆ. ಆರೋಪಿಗಳು ಈ ಹಿಂದೆ ಅರಳಿಮರದದೊಡ್ಡಿ ಗ್ರಾಮದ ಮನೆಯೊಂದರಲ್ಲಿ ಕಳ್ಳತನ ಮಾಡಿರುವ ವಿಷಯವನ್ನು ವಿಚಾರಣೆ ಸಮಯದಲ್ಲಿ ಬಾಯ್ಬಿಟ್ಟಿದ್ದಾರೆ.</p>.<p>ಒಟ್ಟು 2 ಪ್ರಕರಣಗಳನ್ನು ಪತ್ತೆ ಮಾಡುವಲ್ಲಿ ಹಾರೋಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರು ಹಾಗೂ ಉಪ ನಿರೀಕ್ಷಕರುಗಳು ಮತ್ತು ಸಿಬ್ಬಂದಿ ಅಯ್ಯುಬ್ ಪಾಷ, ಅನಂತ್ ಕುಮಾರ್, ಬೋರೇಗೌಡ, ಶಂಕರಲಿಂಗ ಕುಂಬಾರ್, ಶ್ರೀಧರ್ ಕರಣಿ, ಯೋಗೇಶ, ಫೈರೋಜ್ ಪಾಷಾ ರವರುಗಳು ಯಶಸ್ವಿಯಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾರೋಹಳ್ಳಿ:</strong> ಹತ್ತು ದಿನಗಳ ಹಿಂದೆ ಹಗಲು ಹೊತ್ತಿನಲ್ಲಿಯೇ ಮರಳವಾಡಿ ಹೋಬಳಿಯ ಮರಸರಹಳ್ಳಿಯ ಮನೆಯೊಂದರ ಬೀಗ ಮುರಿದು ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಹಾರೋಹಳ್ಳಿ ಪೊಲೀಸರು ಬಂಧಿಸಿದ್ದಾರೆ.</p>.<p>ಬೆಂಗಳೂರು ನಗರ ಜಿಲ್ಲೆ ಆನೆಕಲ್ ತಾಲೂಕಿನ ಗೌರೇನಹಳ್ಳಿ ಗ್ರಾಮದ ಮಂಜುನಾಥ್ (36) ಹಾಗೂ ರಿಯಾಜ್ ಪಾಷಾ ಅಲಿಯಾಸ್ ಕಾಲು (42) ಎಂಬುವರನ್ನು ಬಂಧಿಸಿ 151 ಗ್ರಾಂ ಚಿನ್ನಾಭರಣ, 32 ಗ್ರಾಂ ಬೆಳ್ಳಿ ಸರ ಮತ್ತು ₹18 ಸಾವಿರ ನಗದು, ಕೃತ್ಯಕ್ಕೆ ಬಳಸಿದ ಆಟೊ, ಬೈಕ್ ಸೇರಿದಂತೆ ₹20 ಲಕ್ಷ ಮೌಲ್ಯದ ವಶಪಡಿಸಿಕೊಂಡಿದ್ದಾರೆ. </p>.<p>ಡಿ.11ರಂದು ಮರಳವಾಡಿ ಹೋಬಳಿಯ ಮರಸರಹಳ್ಳಿಯ ಕೃಷ್ಣ ಎಂಬುವರ ಪತ್ನಿ ಹಾಗೂ ಮಗಳು ಮನೆಗೆ ಬೀಗ ಹಾಕಿ ತೋಟಕ್ಕೆ ಹೋದಾಗ ಬೀಗ ಮುರಿದು ಚಿನ್ನಾಭರಣ ಕಳ್ಳತನ ಮಾಡಲಾಗಿತ್ತು. ಹಾರೋಹಳ್ಳಿ ಠಾಣೆಯಲ್ಲಿ ದೂರು ದಾಖಲಾಗಿತ್ತು.ಪ್ರಕರಣ ದಾಖಲಿಸಿಕೊಂಡಿದ್ದ ಹಾರೋಹಳ್ಳಿ ಪೊಲೀಸರು ತನಿಖೆ ಕೈಗೊಂಡಿದ್ದರು.</p>.<p>ಆರೋಪಿಗಳ ಪತ್ತೆ ಬಗ್ಗೆ ಮಾಹಿತಿ ಕಲೆ ಹಾಕಿದ ಪೊಲೀಸರು ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಳ್ಳತನ ಪ್ರಕರಣ ಹೊರಬಂದಿದೆ. ಆರೋಪಿಗಳು ಈ ಹಿಂದೆ ಅರಳಿಮರದದೊಡ್ಡಿ ಗ್ರಾಮದ ಮನೆಯೊಂದರಲ್ಲಿ ಕಳ್ಳತನ ಮಾಡಿರುವ ವಿಷಯವನ್ನು ವಿಚಾರಣೆ ಸಮಯದಲ್ಲಿ ಬಾಯ್ಬಿಟ್ಟಿದ್ದಾರೆ.</p>.<p>ಒಟ್ಟು 2 ಪ್ರಕರಣಗಳನ್ನು ಪತ್ತೆ ಮಾಡುವಲ್ಲಿ ಹಾರೋಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರು ಹಾಗೂ ಉಪ ನಿರೀಕ್ಷಕರುಗಳು ಮತ್ತು ಸಿಬ್ಬಂದಿ ಅಯ್ಯುಬ್ ಪಾಷ, ಅನಂತ್ ಕುಮಾರ್, ಬೋರೇಗೌಡ, ಶಂಕರಲಿಂಗ ಕುಂಬಾರ್, ಶ್ರೀಧರ್ ಕರಣಿ, ಯೋಗೇಶ, ಫೈರೋಜ್ ಪಾಷಾ ರವರುಗಳು ಯಶಸ್ವಿಯಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>