<p><strong>ಹಾರೋಹಳ್ಳಿ:</strong> ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಎನ್ಸಿಇಆರ್ ಬೆಂಗಳೂರಿನಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಬಾಲ ವೈಜ್ಞಾನಿಕ ಪ್ರದರ್ಶನದಲ್ಲಿ ಭಾಗವಹಿಸಿದ್ದ ತಾಲ್ಲೂಕಿನ ಸರ್ಕಾರಿ ಶಾಲೆಯ ಮೂವರು ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. </p><p>ತ್ಯಾಜ್ಯ ನಿರ್ವಹಣೆ ವಿಭಾಗದಲ್ಲಿ ಬನವಾಸಿ ಶಾಲೆಯ ವಿದ್ಯಾರ್ಥಿನಿ ಸಿಂಚನ ಹಾಗೂ ಸಂಪನ್ಮೂಲ ನಿರ್ವಹಣೆಯಲ್ಲಿ ಕಲ್ಲನಕುಪ್ಪೆ ಶಾಲೆಯ ವಿದ್ಯಾರ್ಥಿ ಸಂತೋಷ್ ಪ್ರಥಮ ಸ್ಥಾನಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಾರಿಗೆ ಮತ್ತು ಸಂಪರ್ಕ ವಿಭಾಗದಲ್ಲಿ ಕಲ್ಲನಕುಪ್ಪೆ ಶಾಲೆಯ ವಿದ್ಯಾರ್ಥಿ ಭಾಸ್ಕರ್ ಮೂರ್ತಿ ಮೂರನೇ ಸ್ಥಾನ ಪಡೆದಿದ್ದಾರೆ.</p><p>ಅಪಾಯಕಾರಿ ತ್ಯಾಜ್ಯ ವಿಂಗಡಣೆ ಸಾಧನದಿಂದ ಪೌರ ಕಾರ್ಮಿಕರಿಗೆ ಹೆಚ್ಚಿನ ಉಪಯೋಗವಾಗಲಿದೆ. ಸಾರಿಗೆ ಮತ್ತು ಸಂಪರ್ಕ ವಿಭಾಗದ ಸಾಧನ ಅಪಘಾತ ನಿಯಂತ್ರಿಸಬಲ್ಲದು. ಸಂಪನ್ಮೂಲ ನಿರ್ವಹಣೆಯ ಮತ್ತೊಂದು ಸಾಧನ ಕೃಷಿ ಮತ್ತು ಮನೆಯಲ್ಲಿ ನೀರು ಮತ್ತು ವಿದ್ಯುತ್ ಶಕ್ತಿ ಉಳಿತಾಯ ಮತ್ತು ನಿರ್ವಹಣೆಗೆ ನೆರವಾಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾರೋಹಳ್ಳಿ:</strong> ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಎನ್ಸಿಇಆರ್ ಬೆಂಗಳೂರಿನಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಬಾಲ ವೈಜ್ಞಾನಿಕ ಪ್ರದರ್ಶನದಲ್ಲಿ ಭಾಗವಹಿಸಿದ್ದ ತಾಲ್ಲೂಕಿನ ಸರ್ಕಾರಿ ಶಾಲೆಯ ಮೂವರು ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. </p><p>ತ್ಯಾಜ್ಯ ನಿರ್ವಹಣೆ ವಿಭಾಗದಲ್ಲಿ ಬನವಾಸಿ ಶಾಲೆಯ ವಿದ್ಯಾರ್ಥಿನಿ ಸಿಂಚನ ಹಾಗೂ ಸಂಪನ್ಮೂಲ ನಿರ್ವಹಣೆಯಲ್ಲಿ ಕಲ್ಲನಕುಪ್ಪೆ ಶಾಲೆಯ ವಿದ್ಯಾರ್ಥಿ ಸಂತೋಷ್ ಪ್ರಥಮ ಸ್ಥಾನಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಾರಿಗೆ ಮತ್ತು ಸಂಪರ್ಕ ವಿಭಾಗದಲ್ಲಿ ಕಲ್ಲನಕುಪ್ಪೆ ಶಾಲೆಯ ವಿದ್ಯಾರ್ಥಿ ಭಾಸ್ಕರ್ ಮೂರ್ತಿ ಮೂರನೇ ಸ್ಥಾನ ಪಡೆದಿದ್ದಾರೆ.</p><p>ಅಪಾಯಕಾರಿ ತ್ಯಾಜ್ಯ ವಿಂಗಡಣೆ ಸಾಧನದಿಂದ ಪೌರ ಕಾರ್ಮಿಕರಿಗೆ ಹೆಚ್ಚಿನ ಉಪಯೋಗವಾಗಲಿದೆ. ಸಾರಿಗೆ ಮತ್ತು ಸಂಪರ್ಕ ವಿಭಾಗದ ಸಾಧನ ಅಪಘಾತ ನಿಯಂತ್ರಿಸಬಲ್ಲದು. ಸಂಪನ್ಮೂಲ ನಿರ್ವಹಣೆಯ ಮತ್ತೊಂದು ಸಾಧನ ಕೃಷಿ ಮತ್ತು ಮನೆಯಲ್ಲಿ ನೀರು ಮತ್ತು ವಿದ್ಯುತ್ ಶಕ್ತಿ ಉಳಿತಾಯ ಮತ್ತು ನಿರ್ವಹಣೆಗೆ ನೆರವಾಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>