<p><strong>ಹಾರೋಹಳ್ಳಿ:</strong> ತಾಲ್ಲೂಕಿನ ರಸ್ತೆ ಜಕ್ಕಸಂದ್ರ ಸಮೀಪದ ಮರಿಗೌಡನದೊಡ್ಡಿಯ ಯುವಕನೊಬ್ಬ ತಂದೆ ಸಾವಿನಿಂದ ಮನನೊಂದು ಸೋಮವಾರ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. </p>.<p>ಮಗನ ಸಾವಿನ ಸುದ್ದಿ ಕೇಳಿದ ಆತನ ತಾಯಿ ಕೂಡ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆದರೆ, ಅವರು ಅಪಾಯದಿಂದ ಪಾರಾಗಿದ್ದಾರೆ. </p>.<p>ಯಡುವನಹಳ್ಳಿ ಬಳಿಯ ಜೈನ್ ಕಾಲೇಜು ಸಮೀಪದ ಮರಕ್ಕೆ ವಿಶಾಲ್ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾನೆ. </p>.<p>ಕೆಲವು ತಿಂಗಳ ಹಿಂದೆ ವಿಶಾಲ್ ಅಪಘಾತಕ್ಕೊಳಗಾಗಿದ್ದ. ಆ ವೇಳೆ ಚಿಕಿತ್ಸೆಗೆ ಹೆಚ್ಚು ಹಣ ಖರ್ಚಾಗಿತ್ತು. ಇದರಿಂದ ಬೇಸರಗೊಂಡಿದ್ದ. ಅಲ್ಲದೆ, ಅದಾದ ಕೆಲವು ದಿನಗಳ ಬಳಿಕ ವಿಶಾಲ್ ತಂದೆಯೂ ನಿಧನರಾಗಿದ್ದರು. ಇದರಿಂದ ಆತ ಸಂಪೂರ್ಣ ಕುಗ್ಗಿ ಹೋಗಿದ್ದ. </p>.<p>ಸೋಮವಾರ ರಾತ್ರಿ ಸ್ನೇಹಿತನಿಗೆ ಮೆಸೇಜ್ ಕಳುಹಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಗನ ಸಾವಿನ ಸುದ್ದಿ ತಿಳಿದ ತಾಯಿಯೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣ ಎಚ್ಚೆತ್ತ ಅಕ್ಕಪಕ್ಕದ ಮನೆಯವರು ಆಸ್ಪತ್ರೆಗೆ ಸೇರಿಸಿದ್ದಾರೆ. ಪ್ರಾಣಾಪಾಯದಿಂದ ಪಾರಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾರೋಹಳ್ಳಿ:</strong> ತಾಲ್ಲೂಕಿನ ರಸ್ತೆ ಜಕ್ಕಸಂದ್ರ ಸಮೀಪದ ಮರಿಗೌಡನದೊಡ್ಡಿಯ ಯುವಕನೊಬ್ಬ ತಂದೆ ಸಾವಿನಿಂದ ಮನನೊಂದು ಸೋಮವಾರ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. </p>.<p>ಮಗನ ಸಾವಿನ ಸುದ್ದಿ ಕೇಳಿದ ಆತನ ತಾಯಿ ಕೂಡ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆದರೆ, ಅವರು ಅಪಾಯದಿಂದ ಪಾರಾಗಿದ್ದಾರೆ. </p>.<p>ಯಡುವನಹಳ್ಳಿ ಬಳಿಯ ಜೈನ್ ಕಾಲೇಜು ಸಮೀಪದ ಮರಕ್ಕೆ ವಿಶಾಲ್ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾನೆ. </p>.<p>ಕೆಲವು ತಿಂಗಳ ಹಿಂದೆ ವಿಶಾಲ್ ಅಪಘಾತಕ್ಕೊಳಗಾಗಿದ್ದ. ಆ ವೇಳೆ ಚಿಕಿತ್ಸೆಗೆ ಹೆಚ್ಚು ಹಣ ಖರ್ಚಾಗಿತ್ತು. ಇದರಿಂದ ಬೇಸರಗೊಂಡಿದ್ದ. ಅಲ್ಲದೆ, ಅದಾದ ಕೆಲವು ದಿನಗಳ ಬಳಿಕ ವಿಶಾಲ್ ತಂದೆಯೂ ನಿಧನರಾಗಿದ್ದರು. ಇದರಿಂದ ಆತ ಸಂಪೂರ್ಣ ಕುಗ್ಗಿ ಹೋಗಿದ್ದ. </p>.<p>ಸೋಮವಾರ ರಾತ್ರಿ ಸ್ನೇಹಿತನಿಗೆ ಮೆಸೇಜ್ ಕಳುಹಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಗನ ಸಾವಿನ ಸುದ್ದಿ ತಿಳಿದ ತಾಯಿಯೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣ ಎಚ್ಚೆತ್ತ ಅಕ್ಕಪಕ್ಕದ ಮನೆಯವರು ಆಸ್ಪತ್ರೆಗೆ ಸೇರಿಸಿದ್ದಾರೆ. ಪ್ರಾಣಾಪಾಯದಿಂದ ಪಾರಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>