<p><strong>ಮಾಗಡಿ</strong>: ‘ಆಗಲೇ ಸಿದ್ದರಾಮಯ್ಯ ಅವರೊಂದಿಗೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದರೆ ಈಗಾಗಲೇ ನಾನು ಎರಡು ಬಾರಿ ಸಚಿವನಾಗಿ ಅಧಿಕಾರ ಅನುಭವಿಸುತ್ತಿದ್ದೆ. 20 ವರ್ಷಗಳಿಂದ ಜೆಡಿಎಸ್ನಲ್ಲಿ ಉಳಿದುಕೊಂಡು ಬಿಟ್ಟೆ. ಹಾಗಾಗಿ ಇನ್ನೂ ಶಾಸಕನಾಗಿ ಉಳಿಯಬೇಕಾಯಿತು’ ಎಂದು ಶಾಸಕ ಎಚ್.ಸಿ. ಬಾಲಕೃಷ್ಣ ಬೇಸರ ವ್ಯಕ್ತ ಪಡಿಸಿದ್ದಾರೆ.</p>.<p>ಪಟ್ಟಣದಲ್ಲಿ ಮಂಗಳವಾರ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ‘ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ. ಪಕ್ಷದ ಹೈಕಮಾಂಡ್, ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಈ ಬಗ್ಗೆ ತೀರ್ಮಾನ ಮಾಡುತ್ತಾರೆ’ ಎಂದರು.</p>.<p>‘ನಾನು ಐದು ಬಾರಿ ಶಾಸಕನಾಗಿದ್ದೇನೆ. ರಾಜಕೀಯವಾಗಿ ನಾನು ಮಾಡಿದ ಒಂದೇ ತಪ್ಪು ಎಂದರೆ ಜೆಡಿಎಸ್ನಲ್ಲಿ 20 ವರ್ಷ ಜೀವನ ಹಾಳು ಮಾಡಿಕೊಂಡೆ’ ಎಂದರು.</p>.<p>‘ಆಗಲೇ ಸಿದ್ದರಾಮಯ್ಯ ಜೊತೆ ಕಾಂಗ್ರೆಸ್ ಸೇರಿದ ಡಾ.ಎಚ್.ಸಿ. ಮಹದೇವಪ್ಪ, ಪಿರಿಯಾಪಟ್ಟಣ ವೆಂಕಟೇಶ್ ಹಾಗೂ ಅನೇಕರು ಸಚಿವರಾಗಿದ್ದಾರೆ. ನಾನು ಸೇರಿದಂತೆ ಕೆಲವರು ಸಿದ್ದರಾಮಯ್ಯ ಜತೆ ಹೋಗದೆ ಎಚ್.ಡಿ. ಕುಮಾರಸ್ವಾಮಿ ಜತೆ ಉಳಿದುಕೊಂಡೆವು. ಹಾಗಾಗಿ ನಮ್ಮ ರಾಜಕೀಯ ಸ್ಥಿತಿ ಹೀಗಾಗಿದೆ’ ಎಂದು ವಿಷಾದಿಸಿದರು.</p>.<p>ಕಲ್ಯಾಗೇಟ್ ಮಂಜುನಾಥ್, ತೇಜು, ಶಾಂತರಾಜು, ರೂಪೇಶ್, ಕಸ್ತೂರಿ ಕಿರಣ್, ತಗ್ಗೀಕುಪ್ಪೆ ರಾಮು, ಮಂಜುನಾಥ್, ಚಿಲಿಪಿಲಿ ಗಂಗರಾಜು, ಅಶ್ವಥ್, ಸಂದೀಪ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಗಡಿ</strong>: ‘ಆಗಲೇ ಸಿದ್ದರಾಮಯ್ಯ ಅವರೊಂದಿಗೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದರೆ ಈಗಾಗಲೇ ನಾನು ಎರಡು ಬಾರಿ ಸಚಿವನಾಗಿ ಅಧಿಕಾರ ಅನುಭವಿಸುತ್ತಿದ್ದೆ. 20 ವರ್ಷಗಳಿಂದ ಜೆಡಿಎಸ್ನಲ್ಲಿ ಉಳಿದುಕೊಂಡು ಬಿಟ್ಟೆ. ಹಾಗಾಗಿ ಇನ್ನೂ ಶಾಸಕನಾಗಿ ಉಳಿಯಬೇಕಾಯಿತು’ ಎಂದು ಶಾಸಕ ಎಚ್.ಸಿ. ಬಾಲಕೃಷ್ಣ ಬೇಸರ ವ್ಯಕ್ತ ಪಡಿಸಿದ್ದಾರೆ.</p>.<p>ಪಟ್ಟಣದಲ್ಲಿ ಮಂಗಳವಾರ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ‘ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ. ಪಕ್ಷದ ಹೈಕಮಾಂಡ್, ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಈ ಬಗ್ಗೆ ತೀರ್ಮಾನ ಮಾಡುತ್ತಾರೆ’ ಎಂದರು.</p>.<p>‘ನಾನು ಐದು ಬಾರಿ ಶಾಸಕನಾಗಿದ್ದೇನೆ. ರಾಜಕೀಯವಾಗಿ ನಾನು ಮಾಡಿದ ಒಂದೇ ತಪ್ಪು ಎಂದರೆ ಜೆಡಿಎಸ್ನಲ್ಲಿ 20 ವರ್ಷ ಜೀವನ ಹಾಳು ಮಾಡಿಕೊಂಡೆ’ ಎಂದರು.</p>.<p>‘ಆಗಲೇ ಸಿದ್ದರಾಮಯ್ಯ ಜೊತೆ ಕಾಂಗ್ರೆಸ್ ಸೇರಿದ ಡಾ.ಎಚ್.ಸಿ. ಮಹದೇವಪ್ಪ, ಪಿರಿಯಾಪಟ್ಟಣ ವೆಂಕಟೇಶ್ ಹಾಗೂ ಅನೇಕರು ಸಚಿವರಾಗಿದ್ದಾರೆ. ನಾನು ಸೇರಿದಂತೆ ಕೆಲವರು ಸಿದ್ದರಾಮಯ್ಯ ಜತೆ ಹೋಗದೆ ಎಚ್.ಡಿ. ಕುಮಾರಸ್ವಾಮಿ ಜತೆ ಉಳಿದುಕೊಂಡೆವು. ಹಾಗಾಗಿ ನಮ್ಮ ರಾಜಕೀಯ ಸ್ಥಿತಿ ಹೀಗಾಗಿದೆ’ ಎಂದು ವಿಷಾದಿಸಿದರು.</p>.<p>ಕಲ್ಯಾಗೇಟ್ ಮಂಜುನಾಥ್, ತೇಜು, ಶಾಂತರಾಜು, ರೂಪೇಶ್, ಕಸ್ತೂರಿ ಕಿರಣ್, ತಗ್ಗೀಕುಪ್ಪೆ ರಾಮು, ಮಂಜುನಾಥ್, ಚಿಲಿಪಿಲಿ ಗಂಗರಾಜು, ಅಶ್ವಥ್, ಸಂದೀಪ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>