ತಾಲ್ಲೂಕಿನ ಕೂಟಗಲ್ನಲ್ಲಿ ಶುಕ್ರವಾರ ಗ್ರಾಮ ಪಂಚಾಯಿತಿ ಚುನಾವಣೆಯ ಕಾಂಗ್ರೆಸ್ ಪೂರ್ವಭಾವಿ ಸಭೆ ಸಂದರ್ಭ ಅವರು ಪತ್ರಕರ್ತರ ಜೊತೆ ಮಾತನಾಡಿದರು. ‘ಮಾಜಿ ಮುಖ್ಯಮಂತ್ರಿ ಆದವರು ಅಧಿಕಾರಿಗಳನ್ನು ತಮ್ಮ ಮನೆ ಬಾಗಿಲಿಗೆ ಕರೆಯಿಸಿಕೊಂಡು ಕೆಲಸ ಮಾಡಿಕೊಳ್ಳಬೇಕು. ಕಾಂಗ್ರೆಸ್ನಲ್ಲೂ ಅನೇಕ ಮಾಜಿ ಮುಖ್ಯಮಂತ್ರಿಗಳಿದ್ದು, ಅವರೆಂದೂ ಹೀಗೆ ನಡೆದುಕೊಂಡಿಲ್ಲ. ಆದರೆ ಕುಮಾರಸ್ವಾಮಿಯೇ ಪ್ರತಿಯೊಂದನ್ನುಬಿಜೆಪಿ ಸಚಿವರ ಮನೆ ಬಾಗಿಲಿಗೆ ಹೋಗಿ ಬರುತ್ತಿರುವುದು ಶೋಭೆಯಲ್ಲ’ ಎಂದರು.