ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ, 'ರಾಜಕೀಯ ಮತ್ತು ಕೃಷಿ ದೃಷ್ಟಿಯಿಂದ ರಾಮನಗರ ನನ್ನ ಕರ್ಮಭೂಮಿ. ಕೇತಗಾನಹಳ್ಳಿಯ ನನ್ನ 'ಕೃಷಿ ಭೂಮಿ'ಗೆ ಬಸವಜಯಂತಿಯ ಈ ಶುಭದಿನದಂದು ಕಪಿಲ, ಸ್ವರ್ಣಕಪಿಲ, ಗಿರ್ ತಳಿಯ ನಾಲ್ಕು ಗೋವುಗಳನ್ನು ಪ್ರೀತಿಪೂರ್ವಕವಾಗಿ ಬರಮಾಡಿಕೊಳ್ಳಲಾಯಿತು. ಹಸುಗಳನ್ನು ನನ್ನ ಕುಟುಂಬ ಭಕ್ತಿಪೂರ್ವಕವಾಗಿ ಪೂಜಿಸಿದ ಸಂಭ್ರಮದ ಕ್ಷಣಗಳಿವು,' ಎಂದಿದ್ದಾರೆ.