ರಾಮನಗರ: ಚನ್ನಪಟ್ಟಣದ ಅಂಬೇಡ್ಕರ್ ಭವನದಲ್ಲಿ ಗುರುವಾರ ನಡೆದ ಕವಿ ಸಿದ್ಧಲಿಂಗಯ್ಯ ಅವರ ಸ್ಮರಣೆ ಕಾರ್ಯಕ್ರಮದಲ್ಲಿ ಮೂವರು ರಾಜಕೀಯ ವೈರಿಗಳು ಅಕ್ಕಪಕ್ಕ ಕುಳಿತು ಗಮನ ಸೆಳೆದರು.
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಸಂಸದ ಡಿ.ಕೆ. ಸುರೇಶ್ ಹಾಗು ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಹೀಗೆ ಒಟ್ಟಾಗಿ ಕುಳಿತಿದ್ದನ್ನು ಕಂಡು ಜೆಡಿಎಸ್, ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರೂ ಆಶ್ಚರ್ಯಗೊಂಡರು. ಆದರೆ ಈ ಮೂವರು ಒಬ್ಬರಿಗೊಬ್ಬರು ಹೆಚ್ಚೇನು ಮಾತನಾಡಲಿಲ್ಲ.
ಜಿಲ್ಲೆಯ ಕಾರ್ಯಕ್ರಮಗಳಲ್ಲಿ ಈ ಮೂವರು ಒಟ್ಟಿಗೆ ಪಾಲ್ಗೊಂಡಿದ್ದು ಅಪರೂಪ.