ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನತಾ ದರ್ಶನ: ಮುಖ್ಯಮಂತ್ರಿಯಿಂದ ಅಹವಾಲು ಸ್ವೀಕಾರ

Last Updated 17 ಜೂನ್ 2019, 10:02 IST
ಅಕ್ಷರ ಗಾತ್ರ

ರಾಮನಗರ: ಚನ್ನಪಟ್ಟಣ‌ ತಾಲ್ಲೂಕಿನ ಇಗ್ಗಲೂರು ಗ್ರಾಮದ ಚನ್ನಕೇಶವ ದೇಗುಲದಲ್ಲಿ ಪೂಜೆ ಸಲ್ಲಿಸುವ ಮೂಲಕ ಮುಖ್ಯಮಂತ್ರಿ ಎಚ್.ಡಿ.‌ ಕುಮಾರಸ್ವಾಮಿ ಸೋಮವಾರ ಮಧ್ಯಾಹ್ನ ಸ್ವಕ್ಷೇತ್ರದಲ್ಲಿ ಜನತಾ ದರ್ಶನ ಆರಂಭಿಸಿದರು.

ಇಗ್ಗಲೂರು ಬ್ಯಾರೇಜ್ ನಲ್ಲಿ ಏತ ನೀರಾವರಿಯ ಸಿ ಬಿಂದು ಕಾಮಗಾರಿ ವೀಕ್ಷಣೆ ಮಾಡಿದ ಅವರು ಬಳಿಕ ಅವರು ಜನರಿಂದ ಮನವಿ ಸ್ವೀಕರಿಸಿದರು. ಕೆಲವರು ಗ್ರಾಮದ ರಸ್ತೆ, ದೇಗುಲ ಹಾಗೂ ಆಸ್ಪತ್ರೆ ಅಭಿವೃದ್ದಿ ಮಾಡುವಂತೆ ಮನವಿ ಮಾಡಿದರು. ಮುಖ್ಯಮಂತ್ರಿ ಸಾಗಿದ್ದ ಗ್ರಾಮಗಳ ರಸ್ತೆ ಉದ್ದಕ್ಕೂ ಜನರು ನಿಂತು ಮನವಿ ಸಲ್ಲಿಸಿದರು.

ನಂತರ ಅವರು ಅಕ್ಕೂರು, ಹೊಂಗನೂರು ಗ್ರಾಮಗಳಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆಸಲಿದ್ದಾರೆ. ಮಂಗಳವಾರವೂ ಕಾರ್ಯಕ್ರಮ ಮುಂದುವರಿಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT