<p><strong>ರಾಮನಗರ:</strong> ಕೇಂದ್ರ ಸರ್ಕಾರವು ಜಾರಿಗೆ ತರಲು ಹೊರಟಿರುವ ಅಗ್ನಿಪಥಯೋಜನೆಯು ಆರ್ಎಸ್ಎಸ್ ಕೂಸು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು.</p>.<p>ಚನ್ನಪಟ್ಟಣದಲ್ಲಿ ಭಾನುವಾರ ಪತ್ರಕರ್ತರ ಜೊತೆ ಅವರು ಮಾತನಾಡಿದರು. ಅಗ್ನಿಪಥ್ ಯೋಜನೆಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರಕ್ಕೆ ಯಾರು ಸಲಹೆ ನೀಡಿದರೋ ಗೊತ್ತಿಲ್ಲ. ಸಂಸತ್ನಲ್ಲಿ ಎಂದೂ ಈ ಬಗ್ಗೆ ಚರ್ಚೆ ನಡೆದಿಲ್ಲ. ಹೊಸತಾಗಿ 10 ಲಕ್ಷ ಸೈನಿಕರನ್ನು ಆಯ್ಕೆ ಮಾಡಿ 4 ವರ್ಷದಲ್ಲಿ ಶೇ 75ರಷ್ಟು ಜನರನ್ನು ಸೇನೆಯಿಂದ ಹೊರಗೆ ಕಳುಹಿಸುತ್ತಾರೆ. ಹಾಗಾದರೆ ನಂತರದಲ್ಲಿ ಅವರ ಪಾಡೇನು? ಎಂದು ಪ್ರಶ್ನಿಸಿದರು.</p>.<p>ಆರ್ಎಸ್ಎಸ್ನವರು ಕವಾಯತು ಮಾಡಿ ಕೆಲವರನ್ನು ಕಾರ್ಯಕರ್ತರೆಂದು ಇಟ್ಟುಕೊಂಡಿದ್ದಾರೆ. ಅವರೆಲ್ಲರನ್ನೂ ಈ ಮೂಲಕ ಸೇನೆಗೆ ಸೇರಿಸಲು ಸಂಚು ನಡೆದಿದೆ. ಹೊಸತಾಗಿ ಆಯ್ಕೆ ಮಾಡುವ 10 ಲಕ್ಷ ಸೈನಿಕರ ಪೈಕಿ 2.5 ಲಕ್ಷ ಮಂದಿಯನ್ನು ಸೇನೆಯಲ್ಲಿಯೇ ಉಳಿಸಿಕೊಂಡು ಆ ಮೂಲಕ ಇಡೀ ಸೇನೆಯನ್ನು ಆರ್ಎಸ್ಎಸ್ ಹಿಡಿತಕ್ಕೆ ತೆಗೆದುಕೊಳ್ಳುವುದು. ಉಳಿದ 7.5 ಲಕ್ಷ ಮಂದಿಯನ್ನು ದೇಶದೆಲ್ಲೆಡೆ ಕಳುಹಿಸಿ ಆ ಮೂಲಕ ಇಡೀ ದೇಶವನ್ನು ಆರ್ಎಸ್ಎಸ್ ವಶಕ್ಕೆ ತೆಗೆದುಕೊಳ್ಳುವ ಹುನ್ನಾರ ಇದ್ದಂತೆ ಇದೆ. ನಾಜಿ ಕಾಲದಲ್ಲೇ ಆರ್ಎಸ್ಎಸ್ ಸಹ ಆರಂಭ ಆಗಿದ್ದು, ಭಾರತದಲ್ಲೂ ನಾಜಿ ಆಡಳಿತ ತರಲು ಹೊರಟಂತೆ ಇದೆ ಎಂದು ಕುಮಾರಸ್ವಾಮಿ ಅನುಮಾನ ವ್ಯಕ್ತಪಡಿಸಿದರು.</p>.<p>ಪರಿಷತ್ ಚುನಾವಣೆಯಲ್ಲಿ ಕೆಲವು ಆಂತರಿಕ ವಿಚಾರಗಳಿಂದ ಜೆಡಿಎಸ್ ಸೋತಿದೆ. ಆದರೆ ಇದಕ್ಕೂ ವಿಧಾನಸಭೆ ಚುನಾವಣೆಗೂ ಸಂಬಂಧ ಇಲ್ಲ. ಆಗಸ್ಟ್ 15ರಿಂದ ರಾಜ್ಯ ಪ್ರವಾಸ ಕೈಗೊಂಡು ಪಕ್ಷ ಬಲವರ್ಧನೆ ಮಾಡುತ್ತೇನೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ:</strong> ಕೇಂದ್ರ ಸರ್ಕಾರವು ಜಾರಿಗೆ ತರಲು ಹೊರಟಿರುವ ಅಗ್ನಿಪಥಯೋಜನೆಯು ಆರ್ಎಸ್ಎಸ್ ಕೂಸು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು.</p>.<p>ಚನ್ನಪಟ್ಟಣದಲ್ಲಿ ಭಾನುವಾರ ಪತ್ರಕರ್ತರ ಜೊತೆ ಅವರು ಮಾತನಾಡಿದರು. ಅಗ್ನಿಪಥ್ ಯೋಜನೆಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರಕ್ಕೆ ಯಾರು ಸಲಹೆ ನೀಡಿದರೋ ಗೊತ್ತಿಲ್ಲ. ಸಂಸತ್ನಲ್ಲಿ ಎಂದೂ ಈ ಬಗ್ಗೆ ಚರ್ಚೆ ನಡೆದಿಲ್ಲ. ಹೊಸತಾಗಿ 10 ಲಕ್ಷ ಸೈನಿಕರನ್ನು ಆಯ್ಕೆ ಮಾಡಿ 4 ವರ್ಷದಲ್ಲಿ ಶೇ 75ರಷ್ಟು ಜನರನ್ನು ಸೇನೆಯಿಂದ ಹೊರಗೆ ಕಳುಹಿಸುತ್ತಾರೆ. ಹಾಗಾದರೆ ನಂತರದಲ್ಲಿ ಅವರ ಪಾಡೇನು? ಎಂದು ಪ್ರಶ್ನಿಸಿದರು.</p>.<p>ಆರ್ಎಸ್ಎಸ್ನವರು ಕವಾಯತು ಮಾಡಿ ಕೆಲವರನ್ನು ಕಾರ್ಯಕರ್ತರೆಂದು ಇಟ್ಟುಕೊಂಡಿದ್ದಾರೆ. ಅವರೆಲ್ಲರನ್ನೂ ಈ ಮೂಲಕ ಸೇನೆಗೆ ಸೇರಿಸಲು ಸಂಚು ನಡೆದಿದೆ. ಹೊಸತಾಗಿ ಆಯ್ಕೆ ಮಾಡುವ 10 ಲಕ್ಷ ಸೈನಿಕರ ಪೈಕಿ 2.5 ಲಕ್ಷ ಮಂದಿಯನ್ನು ಸೇನೆಯಲ್ಲಿಯೇ ಉಳಿಸಿಕೊಂಡು ಆ ಮೂಲಕ ಇಡೀ ಸೇನೆಯನ್ನು ಆರ್ಎಸ್ಎಸ್ ಹಿಡಿತಕ್ಕೆ ತೆಗೆದುಕೊಳ್ಳುವುದು. ಉಳಿದ 7.5 ಲಕ್ಷ ಮಂದಿಯನ್ನು ದೇಶದೆಲ್ಲೆಡೆ ಕಳುಹಿಸಿ ಆ ಮೂಲಕ ಇಡೀ ದೇಶವನ್ನು ಆರ್ಎಸ್ಎಸ್ ವಶಕ್ಕೆ ತೆಗೆದುಕೊಳ್ಳುವ ಹುನ್ನಾರ ಇದ್ದಂತೆ ಇದೆ. ನಾಜಿ ಕಾಲದಲ್ಲೇ ಆರ್ಎಸ್ಎಸ್ ಸಹ ಆರಂಭ ಆಗಿದ್ದು, ಭಾರತದಲ್ಲೂ ನಾಜಿ ಆಡಳಿತ ತರಲು ಹೊರಟಂತೆ ಇದೆ ಎಂದು ಕುಮಾರಸ್ವಾಮಿ ಅನುಮಾನ ವ್ಯಕ್ತಪಡಿಸಿದರು.</p>.<p>ಪರಿಷತ್ ಚುನಾವಣೆಯಲ್ಲಿ ಕೆಲವು ಆಂತರಿಕ ವಿಚಾರಗಳಿಂದ ಜೆಡಿಎಸ್ ಸೋತಿದೆ. ಆದರೆ ಇದಕ್ಕೂ ವಿಧಾನಸಭೆ ಚುನಾವಣೆಗೂ ಸಂಬಂಧ ಇಲ್ಲ. ಆಗಸ್ಟ್ 15ರಿಂದ ರಾಜ್ಯ ಪ್ರವಾಸ ಕೈಗೊಂಡು ಪಕ್ಷ ಬಲವರ್ಧನೆ ಮಾಡುತ್ತೇನೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>