<p><strong>ರಾಮನಗರ</strong>: ಜಿಂದಾಲ್ ಕಂಪನಿಯಿಂದ 20 ಕೋಟಿ ರೂಪಾಯಿ ಮೊತ್ತದ ಚೆಕ್ ಪಡೆದು, ಜಮೀನಿನ ಲೀಸ್ ಕಮ್ ಸೇಲ್ ಕರಾರು ಪತ್ರಕ್ಕೆ ಸಹಿ ಹಾಕಿದ್ದು ಯಾರು ಎಂಬುದನ್ನು ಯಡಿಯೂರಪ್ಪ ಉತ್ತರಿಸಲಿ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು.</p>.<p>ಚನ್ನಪಟ್ಟಣ ತಾಲ್ಲೂಕಿನಇಗ್ಗಲೂರು ಬ್ಯಾರೇಜ್ ಸಮೀಪ ಸೋಮವಾರ ಪತ್ರಕರ್ತರ ಜೊತೆ ಅವರು ಮಾತನಾಡಿದರು.</p>.<p>ಜಿಂದಾಲ್ ಗೆ ಭೂಮಿ ನೀಡುವುದು ಸೇರಿದಂತೆ ಯಾವುದೇ ವಿಷಯದ ಕುರಿತು ಮುಕ್ತ ಚರ್ಚೆಗೆ ನಾವು ಸಿದ್ದರಿದ್ದೇವೆ. ಆದರೆ, ಬಿಜೆಪಿ ಪ್ರತಿಭಟನೆ ಹೆಸರಿನಲ್ಲಿ ವ್ಯರ್ಥ ಕಾಲಹರಣ ಮಾಡುತ್ತಿದೆ ಎಂದು ದೂರಿದರು.</p>.<p>ಯಡಿಯೂರಪ್ಪ ಜಿಂದಾಲ್ ನಿಂದ ಇಪ್ಪತ್ತು ಕೋಟಿ ಹಣದ ಚೆಕ್ ಪಡೆದಿದ್ದನ್ನು ಈ ಹಿಂದೆ ನಾನೇ ದಾಖಲೆ ಬಿಡುಗಡೆ ಮಾಡಿದ್ದೆ ಎಂದು ಈ ವೇಳೆ ನೆನಪು ಮಾಡಿದರು.</p>.<p>ಜಿಂದಾಲ್ ಗೆ ಸಂಬಂಧಿಸಿದಂತೆ ಸ್ಥಳೀಯ ಶಾಸಕರಿಗೆ ಸರಿಯಾದ ಮಾಹಿತಿ ಇಲ್ಲ. ಹೀಗಾಗಿ ಅವರು ಪ್ರತಿಭಟನೆಯ ಮಾತುಗಳನ್ನಾಡಿದ್ದಾರೆ. ಅದು ಸೇರಿದಂತೆ ಐಎಂಎ ಪ್ರಕರಣ , ಬರ ನಿರ್ವಹಣೆ , ಸಾಲ ಮನ್ನ ಮೊದಲಾದ ವಿಷಯಗಳ ಕುರಿತು ವಿಧಾನಸಭೆ ಅಧಿವೇಶನದಲ್ಲಿ ಚರ್ಚಿಸಲು ಸಿದ್ಧನಿದ್ದೇನೆ. ಬಿಜೆಪಿಯವರು ಬರಲಿ ಎಂದು ಆಹ್ವಾನ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ</strong>: ಜಿಂದಾಲ್ ಕಂಪನಿಯಿಂದ 20 ಕೋಟಿ ರೂಪಾಯಿ ಮೊತ್ತದ ಚೆಕ್ ಪಡೆದು, ಜಮೀನಿನ ಲೀಸ್ ಕಮ್ ಸೇಲ್ ಕರಾರು ಪತ್ರಕ್ಕೆ ಸಹಿ ಹಾಕಿದ್ದು ಯಾರು ಎಂಬುದನ್ನು ಯಡಿಯೂರಪ್ಪ ಉತ್ತರಿಸಲಿ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು.</p>.<p>ಚನ್ನಪಟ್ಟಣ ತಾಲ್ಲೂಕಿನಇಗ್ಗಲೂರು ಬ್ಯಾರೇಜ್ ಸಮೀಪ ಸೋಮವಾರ ಪತ್ರಕರ್ತರ ಜೊತೆ ಅವರು ಮಾತನಾಡಿದರು.</p>.<p>ಜಿಂದಾಲ್ ಗೆ ಭೂಮಿ ನೀಡುವುದು ಸೇರಿದಂತೆ ಯಾವುದೇ ವಿಷಯದ ಕುರಿತು ಮುಕ್ತ ಚರ್ಚೆಗೆ ನಾವು ಸಿದ್ದರಿದ್ದೇವೆ. ಆದರೆ, ಬಿಜೆಪಿ ಪ್ರತಿಭಟನೆ ಹೆಸರಿನಲ್ಲಿ ವ್ಯರ್ಥ ಕಾಲಹರಣ ಮಾಡುತ್ತಿದೆ ಎಂದು ದೂರಿದರು.</p>.<p>ಯಡಿಯೂರಪ್ಪ ಜಿಂದಾಲ್ ನಿಂದ ಇಪ್ಪತ್ತು ಕೋಟಿ ಹಣದ ಚೆಕ್ ಪಡೆದಿದ್ದನ್ನು ಈ ಹಿಂದೆ ನಾನೇ ದಾಖಲೆ ಬಿಡುಗಡೆ ಮಾಡಿದ್ದೆ ಎಂದು ಈ ವೇಳೆ ನೆನಪು ಮಾಡಿದರು.</p>.<p>ಜಿಂದಾಲ್ ಗೆ ಸಂಬಂಧಿಸಿದಂತೆ ಸ್ಥಳೀಯ ಶಾಸಕರಿಗೆ ಸರಿಯಾದ ಮಾಹಿತಿ ಇಲ್ಲ. ಹೀಗಾಗಿ ಅವರು ಪ್ರತಿಭಟನೆಯ ಮಾತುಗಳನ್ನಾಡಿದ್ದಾರೆ. ಅದು ಸೇರಿದಂತೆ ಐಎಂಎ ಪ್ರಕರಣ , ಬರ ನಿರ್ವಹಣೆ , ಸಾಲ ಮನ್ನ ಮೊದಲಾದ ವಿಷಯಗಳ ಕುರಿತು ವಿಧಾನಸಭೆ ಅಧಿವೇಶನದಲ್ಲಿ ಚರ್ಚಿಸಲು ಸಿದ್ಧನಿದ್ದೇನೆ. ಬಿಜೆಪಿಯವರು ಬರಲಿ ಎಂದು ಆಹ್ವಾನ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>