ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಗರ: ಅಭಿಮಾನಿಯ ಅಂತ್ಯಕ್ರಿಯೆಯಲ್ಲಿ ಕುಮಾರಸ್ವಾಮಿ ಭಾಗಿ

Last Updated 17 ಜನವರಿ 2021, 8:15 IST
ಅಕ್ಷರ ಗಾತ್ರ

ರಾಮನಗರ: ತನ್ನ ಅಂತ್ಯಕ್ರಿಯೆಗೆ ಕುಮಾರಸ್ವಾಮಿ ಬರಬೇಕು ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಅಭಿಮಾನಿಯ ಮನೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹಾಗೂ ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಭಾನುವಾರ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದರು.

ರಾಮನಗರ ತಾಲ್ಲೂಕಿನ ಬೊಮ್ಮಚ್ಚನಹಳ್ಳಿ‌‌ ನಿವಾಸಿ, ಆಟೊ ಚಾಲಕ ಜಯರಾಂ ಗ್ಯಾಂಗ್ರೀನ್ ಪೀಡಿತರಾಗಿದ್ದು, ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದರು. 'ಕುಮಾರಣ್ಣ ನನ್ನ ಕುಟುಂಬಕ್ಕೆ ನೆರವಾಗಬೇಕು' ಎಂದು ಅವರು ಡೆತ್ ನೋಟ್ ನಲ್ಲಿ ಕೋರಿದ್ದರು.

' ಜಯರಾಂ ಗ್ಯಾಂಗ್ರೀನ್ ನಿಂದ ಬಳಲಿ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ತಿಳಿದು ಬೇಸರ ಆಯಿತು. ಅವರ ಅಂತಿಮ ಇಚ್ಛೆಯಂತೆ ಇಲ್ಲಿಗೆ ಭೇಟಿ‌ ನೀಡಿದ್ದೇನೆ. ಮೃತರಿಗೆ ಸಣ್ಣ ವಯಸ್ಸಿನ ಅಂಗವಿಕಲ ಮಗ ಇದ್ದಾನೆ. ಆತನ ಭವಿಷ್ಯ ರೂಪಿಸಲು ಅಗತ್ಯವಾದ ನೆರವು ನೀಡುತ್ತೇನೆ' ಎಂದು ಕುಮಾರಸ್ವಾಮಿ ತಿಳಿಸಿದರು.

ಇದೇ ಸಂದರ್ಭ ಮೃತರ ಕುಟುಂಬದವರಿಗೆ‌ ನಿಖಿಲ್ ಕುಮಾರಸ್ವಾಮಿ ಧನಸಹಾಯ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT