ಅದ್ಧೂರಿ ಅಭಿನಂದನಾ ಕಾರ್ಯಕ್ರಮಕ್ಕೆ ಸಿದ್ಧತೆ
‘ಕೇಂದ್ರ ಸಚಿವರಾದ ಬಳಿಕ ತವರು ಕ್ಷೇತ್ರಕ್ಕೆ ಮೊದಲ ಸಲ ಭೇಟಿ ನೀಡುತ್ತಿರುವ ಕುಮಾರಸ್ವಾಮಿ ಅವರಿಗೆ ಮೈತ್ರಿ ಪಕ್ಷಗಳಿಂದ ಅದ್ಧೂರಿಯಾಗಿ ಅಭಿನಂದನಾ ಸಮಾರಂಭ ಆಯೋಜಿಸಲು ಯೋಜನೆ ರೂಪಿಸಲಾಗಿತ್ತು. ಆದರೆ, ಏಕಾಏಕಿಯಾಗಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಚಾಲನೆ ಮತ್ತು ಉದ್ಘಾಟನಾ ಸಮಾರಂಭವನ್ನು ನಿಗದಿಯಾಗಿದ್ದರಿಂದ ಅಭಿನಂದನಾ ಸಮಾರಂಭವನ್ನು ಮುಂದೂಡಲಾಗಿದೆ. ಎರಡೂ ಪಕ್ಷಗಳ ಜನಪ್ರತಿನಿಧಿಗಳು ಮತ್ತು ಮುಖಂಡರು ಸೇರಿ ಸದ್ಯದಲ್ಲೇ ಅಭಿನಂದನಾ ಸಮಾರಂಭದ ದಿನಾಂಕ ನಿಗದಿಪಡಿಸುತ್ತೇವೆ. ಆ ಸಮಾರಂಭವು ಅಭಿನಂದನೆ ಜೊತೆಗೆ, ಮುಂಬರುವ ಚನ್ನಪಟ್ಟಣ ಉಪ ಚುನಾವಣೆಯ ಚಾಲನೆಯೂ ಆಗಿರಲಿದೆ’ ಎಂದು ಜೆಡಿಎಸ್ ಮುಖಂಡರೊಬ್ಬರು ತಿಳಿಸಿದರು.