ಚನ್ನಪಟ್ಟಣದಲ್ಲಿ ಶನಿವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು ‘ಮಂಡ್ಯದಲ್ಲಿ ಈಗ ನೂರಾರು ಅಕ್ರಮ ಗಣಿಗಳಿವೆ ಎಂದು ಅಲ್ಲಿನ ಸಚಿವರು ಹೇಳಿದ್ದಾರೆ. ಅವರು ಬಿಜೆಪಿ ಸರ್ಕಾರದಲ್ಲಿ ಮಂತ್ರಿಯಾಗಿ, ಜಿಲ್ಲಾ ಉಸ್ತುವಾರಿ ಸಚಿವರಾಗಿ ಒಂದೂವರೆ ವರ್ಷ ಕಳೆದಿದೆ. ಅವರಿಗೆ ಮಾಹಿತಿ ಇರಲಿಲ್ಲವಾ? ಹಾಗಾದರೆ ಅವರು ಅಸಮರ್ಥರ?’ ಎಂದು ಪ್ರಶ್ನಿಸಿದರು. ‘ನಾನು ಮುಖ್ಯಮಂತ್ರಿ ಆಗಿದ್ದಾಗ ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆಗೆ ಅವಕಾಶ ಕೊಟ್ಟಿರಲಿಲ್ಲ. ಪ್ರಧಾನಿ ನರೇಂದ್ರ ಮೋದಿ ದೇಶಕ್ಕೆ ಪಾಠ ಹೇಳುತ್ತಾರೆ. ಮೊದಲು ಅದು ಕರ್ನಾಟಕದಲ್ಲಿ ಜಾರಿ ಆಗಲಿ’ ಎಂದು ಒತ್ತಾಯಿಸಿದರು.