ಬಿ.ಜಿ.ಎಸ್. ಗ್ಲೆನಿಗಲ್ಸ್ ಗ್ಲೋಬಲ್ ಹಾಸ್ಪಿಟಲ್ ನ ಹಿರಿಯ ಮೂತ್ರರೋಗ ತಜ್ಞ ಡಾ.ಎಸ್.ನರೇಂದ್ರ ಮಾತನಾಡಿ, ಇಂದಿನ ಆಹಾರ ಪದ್ಧತಿ, ಸಕ್ಕರೆ ರೋಗ ಮತ್ತು ಬಿ.ಪಿ. ಒತ್ತಡದಿಂದ ಕಿಡ್ನಿ ಸಮಸ್ಯೆ, ಕಿಡ್ನಿ ವೈಫಲ್ಯ ಹೆಚ್ಚಾಗುತ್ತಿದೆ. ಮೂತ್ರ ರೋಗದ ಬಗ್ಗೆ ಅರಿವು ಮೂಡಿಸಿಕೊಂಡು, ಜಾಗೃತರಾಗಿ, ಜೀವನ ಶೈಲಿ ಮತ್ತು ಆಹಾರ ಪದ್ಧತಿಯನ್ನು ಬದಲಾಯಿಸಿಕೊಂಡು ಕಾಯಿಲೆ ಬರದಂತೆ ಎಚ್ಚರಿಕೆ ವಹಿಸಬೇಕು. ಜೊತೆಗೆ ಪ್ರಾಥಮಿಕ ಹಂತದಲ್ಲೇ ಕಾಯಿಲೆಯನ್ನು ಗುರುತಿಸಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದರು.