<p><strong>ರಾಮನಗರ/ಕನಕಪುರ:</strong> ಹೃದಯಾಘಾತ ಪ್ರಕರಣಗಳು ಇತ್ತೀಚೆಗೆ ಹೆಚ್ಚು ವರದಿಯಾಗುತ್ತಿದ್ದು, ಜಿಲ್ಲೆಯಲ್ಲಿ ಒಂದು ವಾರದ ಅಂತರದಲ್ಲಿ ಕೃಷಿ ಕಾರ್ಮಿಕ ಮತ್ತು ಛಾಯಾಗ್ರಾಹಕರೊಬ್ಬರು ಮೃತಪಟ್ಟಿದ್ದಾರೆ.</p>.<p><strong>ಕೃಷಿ ಕಾರ್ಮಿಕ: </strong>ಕನಕಪುರ ತಾಲ್ಲೂಕಿನ ಕೂತಗಾನಹಳ್ಳಿಯ ಇರುಳಿಗರ ಕಾಲೊನಿಯ ಧರ್ಮಯ್ಯ (38) ಅವರು ಗುರುವಾರ ಹೃದಯಾಘಾತದಿಂದಾಗಿ ಮೃತಪಟ್ಟಿದ್ದಾರೆ. ಕೃಷಿ ಕೂಲಿ ಕಾರ್ಮಿಕರಾದ ಅವರಿಗೆ ಪತ್ನಿ, ಪುತ್ರಿ ಹಾಗೂ ಇಬ್ಬರು ಪುತ್ರಿಯರಿದ್ದಾರೆ.</p>.<p>ಧರ್ಮಯ್ಯ ಅವರಿಗೆ ಮಧ್ಯರಾತ್ರಿ ಎದೆನೋವು ಕಾಣಿಸಿಕೊಂಡಿತ್ತು. ಕುಟುಂಬದವರು ಸ್ಥಳೀಯ ಆಸ್ಪತ್ರೆಗೆ ತೋರಿಸಿ, ನಂತರ ಹಾರೋಹಳ್ಳಿಯಲ್ಲಿರುವ ದಯಾನಂದ ಸಾಗರ್ ಆಸ್ಪತ್ರೆಗೆ ಕರೆತಂದಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ನಸುಕಿನಲ್ಲಿ 3 ಗಂಟೆ ಸುಮಾರಿಗೆ ಕೊನೆಯುಸಿರೆಳೆದರು ಎಂದು ಮೂಲಗಳು ತಿಳಿಸಿವೆ.</p>.<p><strong>ಛಾಯಾಗ್ರಾಹಕ ಸಾವು:</strong> ರಾಮನಗರದ ಕೆಂಪೇಗೌಡನದೊಡ್ಡಿಯ ಛಾಯಾಗ್ರಾಹಕ ಯೋಗಾನಂದ (47) ಅವರು ಹೃದಯಾಘಾತದಿಂದಾಗಿ ಇತ್ತೀಚೆಗೆ ಸಾವನ್ನಪ್ಪಿದ್ದಾರೆ. ಮೂಲತಃ ತಾಲ್ಲೂಕಿನ ಜಾಲಮಂಗಲದ ಗ್ರಾಮದವರಾದ ಅವರು ಕೆಂಪೇಗೌಡನದೊಡ್ಡಿಯಲ್ಲಿ ನೆಲೆಸಿದ್ದರು. ಅವರಿಗೆ ತಂದೆ–ತಾಯಿ, ಪತ್ನಿ ಹಾಗೂ ಇಬ್ಬರು ಪುತ್ರರಿದ್ದಾರೆ.</p>.<p>ಜುಲೈ 17ರಂದು ರಾತ್ರಿ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಕುಟುಂಬದವರು ಜಿಲ್ಲಾಸ್ಪತ್ರೆಗೆ ತೋರಿಸಿ, ನಂತರ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮಾರನೇಯ ದಿನ ಕೊನೆಯುಸಿರೆಳೆದರು ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ/ಕನಕಪುರ:</strong> ಹೃದಯಾಘಾತ ಪ್ರಕರಣಗಳು ಇತ್ತೀಚೆಗೆ ಹೆಚ್ಚು ವರದಿಯಾಗುತ್ತಿದ್ದು, ಜಿಲ್ಲೆಯಲ್ಲಿ ಒಂದು ವಾರದ ಅಂತರದಲ್ಲಿ ಕೃಷಿ ಕಾರ್ಮಿಕ ಮತ್ತು ಛಾಯಾಗ್ರಾಹಕರೊಬ್ಬರು ಮೃತಪಟ್ಟಿದ್ದಾರೆ.</p>.<p><strong>ಕೃಷಿ ಕಾರ್ಮಿಕ: </strong>ಕನಕಪುರ ತಾಲ್ಲೂಕಿನ ಕೂತಗಾನಹಳ್ಳಿಯ ಇರುಳಿಗರ ಕಾಲೊನಿಯ ಧರ್ಮಯ್ಯ (38) ಅವರು ಗುರುವಾರ ಹೃದಯಾಘಾತದಿಂದಾಗಿ ಮೃತಪಟ್ಟಿದ್ದಾರೆ. ಕೃಷಿ ಕೂಲಿ ಕಾರ್ಮಿಕರಾದ ಅವರಿಗೆ ಪತ್ನಿ, ಪುತ್ರಿ ಹಾಗೂ ಇಬ್ಬರು ಪುತ್ರಿಯರಿದ್ದಾರೆ.</p>.<p>ಧರ್ಮಯ್ಯ ಅವರಿಗೆ ಮಧ್ಯರಾತ್ರಿ ಎದೆನೋವು ಕಾಣಿಸಿಕೊಂಡಿತ್ತು. ಕುಟುಂಬದವರು ಸ್ಥಳೀಯ ಆಸ್ಪತ್ರೆಗೆ ತೋರಿಸಿ, ನಂತರ ಹಾರೋಹಳ್ಳಿಯಲ್ಲಿರುವ ದಯಾನಂದ ಸಾಗರ್ ಆಸ್ಪತ್ರೆಗೆ ಕರೆತಂದಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ನಸುಕಿನಲ್ಲಿ 3 ಗಂಟೆ ಸುಮಾರಿಗೆ ಕೊನೆಯುಸಿರೆಳೆದರು ಎಂದು ಮೂಲಗಳು ತಿಳಿಸಿವೆ.</p>.<p><strong>ಛಾಯಾಗ್ರಾಹಕ ಸಾವು:</strong> ರಾಮನಗರದ ಕೆಂಪೇಗೌಡನದೊಡ್ಡಿಯ ಛಾಯಾಗ್ರಾಹಕ ಯೋಗಾನಂದ (47) ಅವರು ಹೃದಯಾಘಾತದಿಂದಾಗಿ ಇತ್ತೀಚೆಗೆ ಸಾವನ್ನಪ್ಪಿದ್ದಾರೆ. ಮೂಲತಃ ತಾಲ್ಲೂಕಿನ ಜಾಲಮಂಗಲದ ಗ್ರಾಮದವರಾದ ಅವರು ಕೆಂಪೇಗೌಡನದೊಡ್ಡಿಯಲ್ಲಿ ನೆಲೆಸಿದ್ದರು. ಅವರಿಗೆ ತಂದೆ–ತಾಯಿ, ಪತ್ನಿ ಹಾಗೂ ಇಬ್ಬರು ಪುತ್ರರಿದ್ದಾರೆ.</p>.<p>ಜುಲೈ 17ರಂದು ರಾತ್ರಿ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಕುಟುಂಬದವರು ಜಿಲ್ಲಾಸ್ಪತ್ರೆಗೆ ತೋರಿಸಿ, ನಂತರ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮಾರನೇಯ ದಿನ ಕೊನೆಯುಸಿರೆಳೆದರು ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>