ನಮ್ಮ ಪಕ್ಷದ ಪಂಚರತ್ನ ಯೋಜನೆಗಳಲ್ಲಿ ಒಂದಾದ ‘ಜನತಾ ಜಲಧಾರೆ’ ಕಾರ್ಯಕ್ರಮ ರಾಜ್ಯದಲ್ಲಿ ಯಾತ್ರೆ ಮಾಡಿದ ಪರಿಣಾಮ ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದೆ. ಮಕ್ಕಳಿಗೆ ಗುಣಮಟ್ಟದ ಉಚಿತ ಶಿಕ್ಷಣ, ಪ್ರತಿಗ್ರಾಮ ಪಂಚಾಯ್ತಿಯಲ್ಲಿ ಕರ್ನಾಟಕ ಪಬ್ಲಿಕ್ ಹೈಟೆಕ್ ಸರ್ಕಾರಿ ಶಾಲೆ ನಿರ್ಮಾಣ, ಪ್ರತಿ ಮನೆಗೆ ಆರೋಗ್ಯ ಸೇವೆ, ಹೆಣ್ಣು ಮಕ್ಕಳ ಸ್ವಾವಲಂಬಿ ಬದುಕಿಗಾಗಿ ಹಲವಾರು ಯೋಜನೆ, ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗದ ಭರವಸೆ ಹಾಗೂ ಹಲವಾರು ಯೋಜನೆಗಳು ಈ ಪಂಚರತ್ನ ಯೋಜನೆಯಲ್ಲಿವೆ ಎಂದು ತಿಳಿಸಿದರು.