ರಾಮನಗರ: ಚನ್ನಪಟ್ಟಣ ತಾಲ್ಲೂಕಿನಲ್ಲಿ ಉತ್ತಮ ಮಳೆ, ಬೆಳೆಗಳಿಗೆ ಹಾನಿ

ರಾಮನಗರ: ಚನ್ನಪಟ್ಟಣ ತಾಲ್ಲೂಕಿನಾದ್ಯಂತ ಸೋಮವಾರ ರಾತ್ರಿ ಉತ್ತಮ ಮಳೆ ಆಗಿದ್ದು, ವಿರೂಪಾಕ್ಷಿಪುರ ಹಾಗೂ ಬಿ.ವಿ. ಹಳ್ಳಿ ಕೆರೆ ತುಂಬಿ ಕೋಡಿ ಹರಿದವು. ಇದರಿಂದ ಮಳೆ ನೀರು ಸುತ್ತಲಿನ ಜಮೀನುಗಳಿಗೆ ನುಗ್ಗಿದ್ದು, ಬೆಳೆಗಳಿಗೆ ಹಾನಿಯಾಯಿತು.
ಮಳೆಯಿಂದಾಗಿ ರಾಗಿ, ಭತ್ತ, ಬಾಳೆ ಬೆಳೆಗಳಿಗೆ ಹಾನಿಯಾಗಿದೆ. ಸಂಗ್ರಹಿಸಿ ಇಟ್ಟಿದ್ದ ಧಾನ್ಯ ಹಾಗೂ ತೆಂಗಿನಕಾಯಿ, ಗೊಬ್ಬರ ನೀರು ಪಾಲಾಗಿದ್ದು, ರೈತರು ನಷ್ಟ ಅನುಭವಿಸುವಂತೆ ಆಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.