ತಿಪ್ಪಗೊಂಡನಹಳ್ಳಿ ಜಲಾಶಯ ಭರ್ತಿಯಾಗಿದ್ದು, ಅಲ್ಲಿಂದ ಅರ್ಕಾವತಿ ನದಿಗೆ ನೀರು ಬಿಡಲಾಗಿದೆ. ಪರಿಣಾಮವಾಗಿ ಮಂಚನಬೆಲೆ ಜಲಾಶಯದ ಒಳಹರಿವು ಹೆಚ್ಚಿದ್ದು, 6 ಸಾವಿರ ಕ್ಯುಸೆಕ್ ನಷ್ಟು ನೀರು ನದಿಗೆ ಹರಿದಿದೆ. ಚನ್ನಪಟ್ಟಣ ತಾಲ್ಲೂಕಿನ ಇಗ್ಗಲೂರು ಬ್ಯಾರೇಜ್ ನಿಂದ ಶಿಂಷಾ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದಿದೆ.