ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾಂತ್ರಿಕ ಸಮಸ್ಯೆ: ಕನಕಪುರದಲ್ಲಿ ತುರ್ತು ಭೂಸ್ಪರ್ಶ ಮಾಡಿದ ಹೆಲಿಕಾಪ್ಟರ್

Last Updated 23 ಜುಲೈ 2022, 8:53 IST
ಅಕ್ಷರ ಗಾತ್ರ

ರಾಮನಗರ: ಕನಕಪುರ ನಗರದ ಹೊರವಲಯದಲ್ಲಿರುವ ಎಸ್.ಬಿ. ಕಲ್ಯಾಣ ಮಂಟಪದ ಹಿಂಭಾಗ ಶನಿವಾರ ಬೆಳಿಗ್ಗೆ ಹೆಲಿಕಾಪ್ಟರ್ ಒಂದು ತುರ್ತು ಭೂ ಸ್ಪರ್ಶ ಮಾಡಿತು.

ಬೆಳಿಗ್ಗೆ 9ರ ಸುಮಾರಿಗೆ ಹೆಲಿಕಾಪ್ಟರ್ ಕಲ್ಯಾಣ ಮಂಟಪದ ಹಿಂಭಾಗದ ಮೈದಾನದಲ್ಲಿ ಇಳಿಯಿತು. ಅದರಲ್ಲಿ ಇಬ್ಬರು ಪೈಲಟ್ ಗಳು ಇದ್ದು, ಕೆಲವೊಂದು ತಾಂತ್ರಿಕ ಅಡಚಣೆಗಳನ್ನು ಸರಿಪಡಿಸಿಕೊಂಡು ಮತ್ತೆ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದರು.

ಹೆಲಿಕಾಪ್ಟರ್ ಯಾವ ಸಂಸ್ಥೆಗೆ ಸೇರಿದ್ದೆಂಬ ವಿವರಗಳು ಲಭ್ಯವಾಗಿಲ್ಲ. ಅದನ್ನು ನೋಡುವ ಸಲುವಾಗಿ ಸ್ಥಳದಲ್ಲಿ ನೂರಾರು ಮಂದಿ ಸೇರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT