ಶ್ರೀರಂಗ ಏತ ನೀರಾವರಿ ಯೋಜನೆ ಮೂಲಕ 83 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಎಕ್ಸ್ ಪ್ರೆಸ್ ಕೆನಾಲ್ ಕಾಮಗಾರಿ ಅಗತ್ಯವಾಗಿದೆ. ಹೇಮಾವತಿ ಜಲಾಶಯ ತುಂಬಿದರು ಕೂಡ ಕಾಲುವೆ ಮೂಲಕ ಶ್ರೀರಂಗ ಏತ ನೀರಾವರಿ ಪಂಪ್ ಹೌಸ್ ಬಳಿಗೆ ಅಗತ್ಯವಾಗಿ ಬೇಕಾಗಿರುವ ನೀರು ಹರಿಯುತ್ತಿಲ್ಲ. 70 ಕಿಲೋ ಮೀಟರ್ ಬಳಿ 1600 ಕ್ಯೂಸೆಕ್ಸ್ ನೀರು ಬರುತ್ತಿದೆ. ಅಲ್ಲಿಂದ ಕೆನಾಲ್ ಮೂಲಕ ನಮಗೆ ಅಗತ್ಯವಾಗಿ ಬೇಕಾಗಿರುವ 170 ಕ್ಯೂಸೆಕ್ ನೀರು ಸತತ ಎರಡು ತಿಂಗಳು ಹರಿದಾಗ ಮಾತ್ರ ನಮಗೆ ಸಿಗಬೇಕಾದ ಮೂರು ಟಿಎಂಸಿ ನೀರು ಲಭ್ಯವಾಗುತ್ತದೆ. ಇಲ್ಲವಾದರೆ ಕೆನಾಲ್ ಮೂಲಕ ನಮ್ಮ ಪಾಲಿನ ನೀರು ಸಿಗುವುದಿಲ್ಲ
––ವೆಂಕಟೇಶ್, ತಾ.ಪಂ.ಮಾಜಿ ಸದಸ್ಯರು
ಕೂಡಲೇ ಕಾರ್ಯಪ್ರವೃತ್ತರಾಗಬೇಕು
ಮಳೆಗಾಲದಲ್ಲಿ ಕೆರೆಗಳಿಗೆ ನೀರು ತುಂಬಿಸಲು ನಮ್ಮ ಪಾಲಿನ ಹೇಮಾವತಿ ನೀರು ಹರಿದು ಬರುತ್ತಿಲ್ಲ. ಇದನ್ನು ಜನಪ್ರತಿನಿಧಿಗಳು ಗಮನಿಸಿ ಕೂಡಲೇ ಜಲಸಂಪನ್ಮೂಲ ಸಚಿವರ ಬಳಿ ನಿಯೋಗದಲ್ಲಿ ತೆರಳಿ ವಾಸ್ತವ ಸ್ಥಿತಿಯನ್ನು ಗಮನಕ್ಕೆ ತರಬೇಕು. ಎಕ್ಸ್ ಪ್ರೆಸ್ ಕೆನಾಲ್ ಕಾಮಗಾರಿ ಆರಂಭಿಸಲು ಒಪ್ಪಿಗೆ ಪಡೆದರೆ ಮುಂದಿನ ವರ್ಷವಾದರೂ ಮಾಗಡಿ ತಾಲ್ಲೂಕಿನ ಕೆರೆಗಳಿಗೆ ಹೇಮಾವತಿ ನೀರು ತುಂಬಿಸುವ ಕನಸು ನನಸಾಗಲಿದೆ.