<p><strong>ಕನಕಪುರ (ರಾಮನಗರ):</strong> ‘ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಯೋಜನೆಗೆ ಸಂಬಂಧಿಸಿದಂತೆ ಅದೇನು ರಕ್ತಪಾತ ಮಾಡುತ್ತಾರೆ? ಅದಕ್ಕೆಲ್ಲ ನಾವು ಹೆದರುವುದಿಲ್ಲ. ರಾಜಕೀಯಕ್ಕಾಗಿ ಯಾರೇ ವಿರೋಧಿಸಿದರೂ, ನಾವು ಯೋಜನೆಯನ್ನು ಜಾರಿ ಮಾಡೇ ಮಾಡುತ್ತೇವೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.</p><p>‘ಯೋಜನೆ ಜಾರಿಯಾದರೆ ರಕ್ತಪಾತವಾಗಲಿದೆ’ ಎಂಬ ತುಮಕೂರು ಗ್ರಾಮೀಣ ಬಿಜೆಪಿ ಶಾಸಕ ಸುರೇಶ್ ಗೌಡ ಹೇಳಿಕೆ ಕುರಿತು ನಗರದಲ್ಲಿ ಶನಿವಾರ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ‘ಯೋಜನೆಯಲ್ಲಿ ಅವರ ವೈಯಕ್ತಿಕ ವಿಚಾರಗಳಿವೆ. ಅದಕ್ಕಾಗಿ ಪಾದಯಾತ್ರೆ ಮಾಡುತ್ತಿದ್ದಾರೆ’ ಎಂದು ತಿರುಗೇಟು ನೀಡಿದರು.</p><p>‘ಹಿಂದೆ ನಾನು ನೀರಾವರಿ ಸಚಿವ ಹಾಗೂ ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಯೋಜನೆಗೆ ಅನುಮೋದನೆ ಸಿಕ್ಕಿತ್ತು. ಕಾಮಗಾರಿ ಕುರಿತು ಸಮಿತಿ ವರದಿ ಆಧರಿಸಿ ಯೋಜನೆಯನ್ನು ಜಾರಿ ಮಾಡುತ್ತೇವೆ. ನಾವು ಯಾವುದಕ್ಕೂ ಹೆದರುವುದಿಲ್ಲ. ಪ್ರತಿಷ್ಠೆ ಬಿಟ್ಟು ಅಭಿವೃದ್ಧಿ ವಿಚಾರ ಮುಂದಿಟ್ಟುಕೊಂಡು ಹೋಗಬೇಕು’ ಎಂದರು.</p><p>‘ಬ್ಲ್ಯಾಕ್ಮೇಲ್ ಮಾಡಿ ಸರ್ಕಾರವನ್ನು ಹೆದರಿಸುತ್ತೇವೆ ಎನ್ನುವವರಿಗೆ ನಾವು ಹೆದರುವುದಿಲ್ಲ. ಯೋಜನೆಗೆ ಸಂಬಂಧಿಸಿದಂತೆ ಅವರು ಗುತ್ತಿಗೆದಾರರನ್ನು ಕರೆದು ಏನೇನು ಮಾತನಾಡಿದ್ದಾರೆಂದು ಗೊತ್ತಿದೆ. ಅದನ್ನೆಲ್ಲಾ ನಾನು ಬಹಿರಂಗವಾಗಿ ಹೇಳುವುದಿಲ್ಲ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ (ರಾಮನಗರ):</strong> ‘ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಯೋಜನೆಗೆ ಸಂಬಂಧಿಸಿದಂತೆ ಅದೇನು ರಕ್ತಪಾತ ಮಾಡುತ್ತಾರೆ? ಅದಕ್ಕೆಲ್ಲ ನಾವು ಹೆದರುವುದಿಲ್ಲ. ರಾಜಕೀಯಕ್ಕಾಗಿ ಯಾರೇ ವಿರೋಧಿಸಿದರೂ, ನಾವು ಯೋಜನೆಯನ್ನು ಜಾರಿ ಮಾಡೇ ಮಾಡುತ್ತೇವೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.</p><p>‘ಯೋಜನೆ ಜಾರಿಯಾದರೆ ರಕ್ತಪಾತವಾಗಲಿದೆ’ ಎಂಬ ತುಮಕೂರು ಗ್ರಾಮೀಣ ಬಿಜೆಪಿ ಶಾಸಕ ಸುರೇಶ್ ಗೌಡ ಹೇಳಿಕೆ ಕುರಿತು ನಗರದಲ್ಲಿ ಶನಿವಾರ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ‘ಯೋಜನೆಯಲ್ಲಿ ಅವರ ವೈಯಕ್ತಿಕ ವಿಚಾರಗಳಿವೆ. ಅದಕ್ಕಾಗಿ ಪಾದಯಾತ್ರೆ ಮಾಡುತ್ತಿದ್ದಾರೆ’ ಎಂದು ತಿರುಗೇಟು ನೀಡಿದರು.</p><p>‘ಹಿಂದೆ ನಾನು ನೀರಾವರಿ ಸಚಿವ ಹಾಗೂ ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಯೋಜನೆಗೆ ಅನುಮೋದನೆ ಸಿಕ್ಕಿತ್ತು. ಕಾಮಗಾರಿ ಕುರಿತು ಸಮಿತಿ ವರದಿ ಆಧರಿಸಿ ಯೋಜನೆಯನ್ನು ಜಾರಿ ಮಾಡುತ್ತೇವೆ. ನಾವು ಯಾವುದಕ್ಕೂ ಹೆದರುವುದಿಲ್ಲ. ಪ್ರತಿಷ್ಠೆ ಬಿಟ್ಟು ಅಭಿವೃದ್ಧಿ ವಿಚಾರ ಮುಂದಿಟ್ಟುಕೊಂಡು ಹೋಗಬೇಕು’ ಎಂದರು.</p><p>‘ಬ್ಲ್ಯಾಕ್ಮೇಲ್ ಮಾಡಿ ಸರ್ಕಾರವನ್ನು ಹೆದರಿಸುತ್ತೇವೆ ಎನ್ನುವವರಿಗೆ ನಾವು ಹೆದರುವುದಿಲ್ಲ. ಯೋಜನೆಗೆ ಸಂಬಂಧಿಸಿದಂತೆ ಅವರು ಗುತ್ತಿಗೆದಾರರನ್ನು ಕರೆದು ಏನೇನು ಮಾತನಾಡಿದ್ದಾರೆಂದು ಗೊತ್ತಿದೆ. ಅದನ್ನೆಲ್ಲಾ ನಾನು ಬಹಿರಂಗವಾಗಿ ಹೇಳುವುದಿಲ್ಲ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>