'ನನ್ನನ್ನು ಚನ್ನಪಟ್ಟಣ ಜನತೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ತಿರಸ್ಕಾರ ಮಾಡಿದ್ದಾರೆ. ಹೀಗಾಗಿ ಮುಂದಿನ ಐದು ವರ್ಷ ಚುನಾವಣೆಗೆ ನಿಲ್ಲಬಾರದು ಎಂದು ನಿರ್ಧರಿಸಿದ್ದೆ. ಮೇಲಾಗಿ ನನಗೆ ರಾಜ್ಯ ರಾಜಕಾರಣದಲ್ಲೇ ಆಸಕ್ತಿ ಹೆಚ್ಚು. ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಪಕ್ಷ ಯಾರನ್ನೇ ಅಭ್ಯರ್ಥಿ ಆಗಿಸಿದರೂ ಬಿಜೆಪಿ ಗೆಲುವು ನಿಶ್ಚಿತ. ಇಲ್ಲಿ ಅಭ್ಯರ್ಥಿ ಗೌಣ. ಮೋದಿಯೇ ನಮ್ಮೆಲ್ಲರ ಅಭ್ಯರ್ಥಿ' ಎಂದು ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.