<p><strong>ಚನ್ನಪಟ್ಟಣ</strong>: ತಾಲ್ಲೂಕಿನ ಕೋಮನಹಳ್ಳಿ ಬಳಿ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಕಾರೊಂದು ಸರಕು ಸಾಗಣೆ ವಾಹನಕ್ಕೆ ಹಿಂಬದಿಯಿಂದ ಗುದ್ದಿದ ಪರಿಣಾಮ ಕಾರಿನಲ್ಲಿದ್ದ ದಂಪತಿ ಸಾವನ್ನಪ್ಪಿರುವ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.</p>.<p>ಬೆಂಗಳೂರಿನ ಬಗಲಗುಂಟೆ ಮುನಿಕೊಂಡಪ್ಪ ಲೇಔಟ್ನ ಸೋಮಯ್ಯ (73) ಹಾಗೂ ಅವರ ಪತ್ನಿ ಸರಸ್ವತಿ (65) ಮೃತ ದಂಪತಿ. ಕಾರು ಚಾಲನೆ ಮಾಡುತ್ತಿದ್ದ ಅವರ ಮಗ ಪವನ್ (35) ಗಂಭೀರವಾಗಿ ಗಾಯಗೊಂಡಿದ್ದು ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. </p>.<p>ಈ ಮೂವರು ತಮ್ಮ ಸ್ವಂತ ಊರಾದ ಮಡಿಕೇರಿಗೆ ಕಾರಿನಲ್ಲಿ ಹೊರಟಿದ್ದರು. ಮುಂದೆ ಹೋಗುತ್ತಿದ್ದ ಸರಕು ಸಾಗಾಣೆ ವಾಹನ ಹಿಂದಿಕ್ಕಲು ಹೋಗಿ ಈ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಸೋಮಯ್ಯ ಸ್ಥಳದಲ್ಲೇ ಮೃತಪಟ್ಟರೆ, ಅವರ ಪತ್ನಿ ಸರಸ್ವತಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ನಗರದ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ</strong>: ತಾಲ್ಲೂಕಿನ ಕೋಮನಹಳ್ಳಿ ಬಳಿ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಕಾರೊಂದು ಸರಕು ಸಾಗಣೆ ವಾಹನಕ್ಕೆ ಹಿಂಬದಿಯಿಂದ ಗುದ್ದಿದ ಪರಿಣಾಮ ಕಾರಿನಲ್ಲಿದ್ದ ದಂಪತಿ ಸಾವನ್ನಪ್ಪಿರುವ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.</p>.<p>ಬೆಂಗಳೂರಿನ ಬಗಲಗುಂಟೆ ಮುನಿಕೊಂಡಪ್ಪ ಲೇಔಟ್ನ ಸೋಮಯ್ಯ (73) ಹಾಗೂ ಅವರ ಪತ್ನಿ ಸರಸ್ವತಿ (65) ಮೃತ ದಂಪತಿ. ಕಾರು ಚಾಲನೆ ಮಾಡುತ್ತಿದ್ದ ಅವರ ಮಗ ಪವನ್ (35) ಗಂಭೀರವಾಗಿ ಗಾಯಗೊಂಡಿದ್ದು ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. </p>.<p>ಈ ಮೂವರು ತಮ್ಮ ಸ್ವಂತ ಊರಾದ ಮಡಿಕೇರಿಗೆ ಕಾರಿನಲ್ಲಿ ಹೊರಟಿದ್ದರು. ಮುಂದೆ ಹೋಗುತ್ತಿದ್ದ ಸರಕು ಸಾಗಾಣೆ ವಾಹನ ಹಿಂದಿಕ್ಕಲು ಹೋಗಿ ಈ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಸೋಮಯ್ಯ ಸ್ಥಳದಲ್ಲೇ ಮೃತಪಟ್ಟರೆ, ಅವರ ಪತ್ನಿ ಸರಸ್ವತಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ನಗರದ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>