ಇದಲ್ಲದೆ ಅಂಬೇಡ್ಕರ್ ಭವನ, ತಾಲ್ಲೂಕು ಕಚೇರಿ, ತಾ.ಪಂ. ಕಚೇರಿ, ರೇಷ್ಮೆಗೂಡಿನ ಮಾರುಕಟ್ಟೆ ಆವರಣಕ್ಕೂ ಮಳೆಯ ನೀರು ನುಗ್ಗಿ ಅವಾಂತರ ಸೃಷ್ಟಿಯಾಗುತ್ತಿತ್ತು. ಹಾಗೆಯೆ ಅಂಬೇಡ್ಕರ್ ಭವನದ ಒಳಾಂಗಣಕ್ಕೂ ನೀರು ನುಗ್ಗಿ ಅಲ್ಲಿ ಈಜುಕೊಳದಂತಹ ವಾತಾವರಣ ನಿರ್ಮಾಣವಾಗುತ್ತಿತ್ತು. ಹೆದ್ದಾರಿಯಲ್ಲಿ ಹೊಳೆಯಂತೆ ಹರಿಯುವ ನೀರನ್ನು ಕೆಲವರು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡುತ್ತಿದ್ದರು. ಇದಕ್ಕೆ ಸಾಕಷ್ಟು ಟೀಕೆಗಳು ಎದುರಾಗಿದ್ದವು.