ಪ್ರತಿಭಟನೆಯ ನೇತೃತ್ವ ವಹಿಸಿದ್ದ ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಮಾತನಾಡಿ, ಸಮಾಜದಲ್ಲಿ ಬೆಳಕು ಕಾಣಬೇಕಾದ ಯುವಕನ ಕಗ್ಗೊಲೆಯನ್ನು ನಾನು ಖಂಡಿಸುತ್ತೇನೆ. ಸಮಾಜಘಾತುಕ ಶಕ್ತಿಗಳ ವಿರುದ್ಧ ಸರ್ಕಾರ ಸಹ ಈಗಾಗಲೇ ಕ್ರಮ ಕೈಗೊಂಡಿದ್ದು, ಆರೋಪಿಗಳನ್ನು ಬಂಧಿಸಿದೆ. ಅಮಾಯಕ ಯುವಕರನ್ನು ಈ ರೀತಿ ಹತ್ಯೆ ಮಾಡುವ ಮೂಲಕ ಸಮಾಜದಲ್ಲಿ ಭಯ ಹುಟ್ಟಿಸುವ ಪ್ರಯತ್ನ ಮಾಡಿರುವುದು ನಾಚಿಕೆಗೇಡಿನ ಸಂಗತಿ. ಹಿಂದೂ ಧರ್ಮದ ಪರವಾಗಿ ಇರುವವರ ಹೋರಾಟ ಮಾಡುವವರನ್ನು ಹತ್ಯೆ ಮಾಡುವ ಮೂಲಕ ಅಂತಹ ಹೋರಾಟವನ್ನು ಹಕ್ಕಿಕ್ಕುವ ಪ್ರಯತ್ನ ಮಾಡಿದವರ ವಿರುದ್ಧ ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಿದೆ’ ಎಂದರು. ಹರ್ಷ ಕುಟುಂಬಕ್ಕೆ ವೈಯಕ್ತಿಕವಾಗಿ ₹1 ಲಕ್ಷ ನೆರವು ನೀಡುವುದಾಗಿ ಅವರು ಘೋಷಿಸಿದರು.