<p><strong>ರಾಮನಗರ</strong>: ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡಲಾಗುತ್ತಿರುವ ಗೌರವ ಧನವನ್ನು ಹೆಚ್ಚಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಭರವಸೆ ನೀಡಿದರು.</p>.<p>ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಜೆಡಿಎಸ್ ವತಿಯಿಂದ ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಕಾರ್ಯಕರ್ತರು, ವಿವಿಧ ಇಲಾಖೆಯ ಡಿ ಗ್ರೂಪ್ ನೌಕರರಿಗೆ ದಿನಸಿ ಕಿಟ್ ಮತ್ತು ವೇಪೋರೈಸರ್ ವಿತರಿಸಿ ಮಾತನಾಡಿದರು.</p>.<p>ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಾತನಾಡಿ, ಮುಂದೆ ಮೂರನೇ ಅಲೆ ಬರುವ ಅಪಾಯ ಇದೆ. ಅಷ್ಟರೊಳಗೆ ಪ್ರತಿಯೊಬ್ಬರಿಗೂ ಕೋವಿಡ್ ಲಸಿಕೆ ಸಿಗಬೇಕು ಎಂಬುದು ತಮ್ಮ ಆಶಯ. ಈ ನಿಟ್ಟಿನಲ್ಲಿ ಮುಂದಿನ ವಾರದಿಂದ ರಾಮನಗರ ತಾಲ್ಲೂಕಿನಲ್ಲಿ ಕೋವಿಡ್ ಲಸಿಕೆ ಅಭಿಯಾನ ಹಮ್ಮಿಕೊಳ್ಳಲಾಗುವುದು ಎಂದು<br />ತಿಳಿಸಿದರು.</p>.<p>ಜೆಡಿಎಸ್ ಮುಖಂಡ ರಾಜಶೇಖರ್, ಬಿ. ಉಮೇಶ್, ಗೂಳಿ ಗೌಡ, ಜಯಕುಮಾರ್, ಮಾವಿನ ಸಸಿ ವೆಂಕಟೇಶ್, ಕೃಷ್ಣ, ಪಾಂಡುರಂಗ, ದೊರೆಸ್ವಾಮಿ<br />ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ</strong>: ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡಲಾಗುತ್ತಿರುವ ಗೌರವ ಧನವನ್ನು ಹೆಚ್ಚಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಭರವಸೆ ನೀಡಿದರು.</p>.<p>ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಜೆಡಿಎಸ್ ವತಿಯಿಂದ ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಕಾರ್ಯಕರ್ತರು, ವಿವಿಧ ಇಲಾಖೆಯ ಡಿ ಗ್ರೂಪ್ ನೌಕರರಿಗೆ ದಿನಸಿ ಕಿಟ್ ಮತ್ತು ವೇಪೋರೈಸರ್ ವಿತರಿಸಿ ಮಾತನಾಡಿದರು.</p>.<p>ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಾತನಾಡಿ, ಮುಂದೆ ಮೂರನೇ ಅಲೆ ಬರುವ ಅಪಾಯ ಇದೆ. ಅಷ್ಟರೊಳಗೆ ಪ್ರತಿಯೊಬ್ಬರಿಗೂ ಕೋವಿಡ್ ಲಸಿಕೆ ಸಿಗಬೇಕು ಎಂಬುದು ತಮ್ಮ ಆಶಯ. ಈ ನಿಟ್ಟಿನಲ್ಲಿ ಮುಂದಿನ ವಾರದಿಂದ ರಾಮನಗರ ತಾಲ್ಲೂಕಿನಲ್ಲಿ ಕೋವಿಡ್ ಲಸಿಕೆ ಅಭಿಯಾನ ಹಮ್ಮಿಕೊಳ್ಳಲಾಗುವುದು ಎಂದು<br />ತಿಳಿಸಿದರು.</p>.<p>ಜೆಡಿಎಸ್ ಮುಖಂಡ ರಾಜಶೇಖರ್, ಬಿ. ಉಮೇಶ್, ಗೂಳಿ ಗೌಡ, ಜಯಕುಮಾರ್, ಮಾವಿನ ಸಸಿ ವೆಂಕಟೇಶ್, ಕೃಷ್ಣ, ಪಾಂಡುರಂಗ, ದೊರೆಸ್ವಾಮಿ<br />ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>