<p><strong>ಕನಕಪುರ</strong>: ಆಸ್ಪತ್ರೆಯಲ್ಲಿ ಬಳಸಿ ಬಿಸಾಡುವ ಅನುಪಯುಕ್ತ ಮೆಡಿಕಲ್ ಬಯೋ ವೇಸ್ಟನ್ನು ಖಾಲಿ ಇರುವ ಜಮೀನಿಗೆ ರಾತ್ರಿ ವೇಳೆ ಸುರಿದು ಬೆಂಕಿ ಹಚ್ಚಿರುವುದು ಕನಕಪುರ ತಾಲ್ಲೂಕಿನ ರಾಯಸಂದ್ರ ಗ್ರಾಮದಲ್ಲಿ ನಡೆದಿದೆ. </p>.<p>ರಾಯಸಂದ್ರ ಗ್ರಾಮದ ಭರತ್ಕುಮಾರ್ ಎಂಬುವರಿಗೆ ಸೇರಿದ ಜಮೀನಿಗೆ ರಾತ್ರಿ ವೇಳೆಯಲ್ಲಿ ಲಾರಿಯಲ್ಲಿ ತ್ಯಾಜ್ಯ ಸುರಿದು ಬೆಂಕಿ ಹಚ್ಚಲಾಗಿದೆ. </p>.<p>ಮೆಡಿಕಲ್ ತ್ಯಾಜ್ಯವನ್ನು ವೈಜ್ಞಾನಿಕವಾಗಿ ಸಂಸ್ಕರಣೆ ಮಾಡಬೇಕು, ಆ ರೀತಿ ಮಾಡಲು ಏಜೆನ್ಸಿ ತೆಗೆದುಕೊಂಡಿರುತ್ತಾರೆ. ಆದರೆ ವೈಜ್ಞಾನಿಕವಾಗಿ ಸಂಸ್ಕರಣೆ ಮಾಡುವುದರಿಂದ ಹೆಚ್ಚಿನ ಹಣ ಖರ್ಚಾಗುತ್ತದೆ ಎಂಬ ಕಾರಣಕ್ಕೆ ಈ ರೀತಿ ಜಮೀನಿಗೆ ತಂದು ಸುರಿಯಲಾಗುತ್ತಿದೆ.</p>.<p>ಜಮೀನಿನಲ್ಲಿ ಹಾಕಿರುವುದಲ್ಲದೆ ರಾತ್ರಿ ವೇಳೆ ಅದಕ್ಕೆ ಬೆಂಕಿ ಹಚ್ಚಿ ಹೋಗಿದ್ದಾರೆ. ಹೀಗಾಗಿ ಕೆಟ್ಟ ವಾಸನೆ ಬರುತ್ತದೆ. ಪರಿಸರ ಮಾಲಿನ್ಯವಾಗುತ್ತಿದೆ. ಇದನ್ನು ತಡೆಗಟ್ಟಬೇಕೆಂದು ಜಮೀನಿನ ಭರತ್ಕುಮಾರ್ ಪೊಲೀಸರು ಮತ್ತು ಪಂಚಾಯಿತಿಗೆ ದೂರು ನೀಡಿದ್ದಾರೆ. </p>.<p>ತ್ಯಾಜ್ಯವನ್ನು ಸುರಿದು ಅದಕ್ಕೆ ಬೆಂಕಿ ಹಚ್ಚಿದ್ದರಿಂದ 5 ತೆಂಗಿನ ಮರಗಳು ಸುಟ್ಟು ಹೋಗಿವೆ. ಆಗಾಗಿ ತ್ಯಾಜ್ಯ ತಂದು ಸುರಿಯುತ್ತಿರುವವನ್ನು ಪತ್ತೆಹಚ್ಚಿ ತಮಗಾಗಿರುವ ನಷ್ಟವನ್ನು ಕೊಡಿಸುವುದಲ್ಲದೆ ಮುಂದೆ ತ್ಯಾಜ್ಯ ಸುರಿಯದಂತೆ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಒತ್ತಾಯಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ</strong>: ಆಸ್ಪತ್ರೆಯಲ್ಲಿ ಬಳಸಿ ಬಿಸಾಡುವ ಅನುಪಯುಕ್ತ ಮೆಡಿಕಲ್ ಬಯೋ ವೇಸ್ಟನ್ನು ಖಾಲಿ ಇರುವ ಜಮೀನಿಗೆ ರಾತ್ರಿ ವೇಳೆ ಸುರಿದು ಬೆಂಕಿ ಹಚ್ಚಿರುವುದು ಕನಕಪುರ ತಾಲ್ಲೂಕಿನ ರಾಯಸಂದ್ರ ಗ್ರಾಮದಲ್ಲಿ ನಡೆದಿದೆ. </p>.<p>ರಾಯಸಂದ್ರ ಗ್ರಾಮದ ಭರತ್ಕುಮಾರ್ ಎಂಬುವರಿಗೆ ಸೇರಿದ ಜಮೀನಿಗೆ ರಾತ್ರಿ ವೇಳೆಯಲ್ಲಿ ಲಾರಿಯಲ್ಲಿ ತ್ಯಾಜ್ಯ ಸುರಿದು ಬೆಂಕಿ ಹಚ್ಚಲಾಗಿದೆ. </p>.<p>ಮೆಡಿಕಲ್ ತ್ಯಾಜ್ಯವನ್ನು ವೈಜ್ಞಾನಿಕವಾಗಿ ಸಂಸ್ಕರಣೆ ಮಾಡಬೇಕು, ಆ ರೀತಿ ಮಾಡಲು ಏಜೆನ್ಸಿ ತೆಗೆದುಕೊಂಡಿರುತ್ತಾರೆ. ಆದರೆ ವೈಜ್ಞಾನಿಕವಾಗಿ ಸಂಸ್ಕರಣೆ ಮಾಡುವುದರಿಂದ ಹೆಚ್ಚಿನ ಹಣ ಖರ್ಚಾಗುತ್ತದೆ ಎಂಬ ಕಾರಣಕ್ಕೆ ಈ ರೀತಿ ಜಮೀನಿಗೆ ತಂದು ಸುರಿಯಲಾಗುತ್ತಿದೆ.</p>.<p>ಜಮೀನಿನಲ್ಲಿ ಹಾಕಿರುವುದಲ್ಲದೆ ರಾತ್ರಿ ವೇಳೆ ಅದಕ್ಕೆ ಬೆಂಕಿ ಹಚ್ಚಿ ಹೋಗಿದ್ದಾರೆ. ಹೀಗಾಗಿ ಕೆಟ್ಟ ವಾಸನೆ ಬರುತ್ತದೆ. ಪರಿಸರ ಮಾಲಿನ್ಯವಾಗುತ್ತಿದೆ. ಇದನ್ನು ತಡೆಗಟ್ಟಬೇಕೆಂದು ಜಮೀನಿನ ಭರತ್ಕುಮಾರ್ ಪೊಲೀಸರು ಮತ್ತು ಪಂಚಾಯಿತಿಗೆ ದೂರು ನೀಡಿದ್ದಾರೆ. </p>.<p>ತ್ಯಾಜ್ಯವನ್ನು ಸುರಿದು ಅದಕ್ಕೆ ಬೆಂಕಿ ಹಚ್ಚಿದ್ದರಿಂದ 5 ತೆಂಗಿನ ಮರಗಳು ಸುಟ್ಟು ಹೋಗಿವೆ. ಆಗಾಗಿ ತ್ಯಾಜ್ಯ ತಂದು ಸುರಿಯುತ್ತಿರುವವನ್ನು ಪತ್ತೆಹಚ್ಚಿ ತಮಗಾಗಿರುವ ನಷ್ಟವನ್ನು ಕೊಡಿಸುವುದಲ್ಲದೆ ಮುಂದೆ ತ್ಯಾಜ್ಯ ಸುರಿಯದಂತೆ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಒತ್ತಾಯಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>