ಜಿಲ್ಲೆಯ ರೋಗಿಗಳಿಗೆಂದು ಕೆಂಗೇರಿಯ ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ 600ಕ್ಕೂ ಹೆಚ್ಚು ಬೆಡ್ಗಳನ್ನು ಮೀಸಲಿಡಲಾಗಿತ್ತು. ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸದ್ಯ ಈ ಸಂಖ್ಯೆಯನ್ನು 200ಕ್ಕೆ ಇಳಿಸಲಾಗಿದೆ. ಇಷ್ಟಕ್ಕೂ ಆಮ್ಲಜನಕ ಪೂರೈಕೆ ವ್ಯವಸ್ಥೆ ಇದೆ. ಇದಲ್ಲದೆ ಹಾರೋಹಳ್ಳಿಯ ದಯಾನಂದ ಸಾಗರ್ ಆಸ್ಪತ್ರೆಯ 130, ಜಿಲ್ಲಾ ಕೋವಿಡ್ ಆಸ್ಪತ್ರೆಯ 100 ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ 25–50 ಹಾಸಿಗೆಗಳಿಗೆ ಆಮ್ಲಜನಕ ವ್ಯವಸ್ಥೆ ಇದೆ.