<p><strong>ಮಾಗಡಿ</strong>: ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಶಾಸಕ ಎಚ್.ಸಿ. ಬಾಲಕೃಷ್ಣ ಭೇಟಿ ನೀಡಿ ಪರಿಶೀಲಿಸಿದರು.<br><br> ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹುಕೋಟಿ ವೆಚ್ಚದಲ್ಲಿ ಸರ್ಕಾರಿ ಆಸ್ಪತ್ರೆ ನವೀಕರಿಸಲಾಗಿದೆ. ಆಸ್ಪತ್ರೆ ನಿಧಿಗೆ ₹25 ಲಕ್ಷ ದೇಣಿಗೆ ನೀಡುತ್ತೇನೆ. ಶ್ರೀಮಂತರು ಉದಾರವಾಗಿ ದೇಣಿಗೆ ನೀಡಬೇಕು. ಆಸ್ಪತ್ರೆಯ ಇತರೆ ಖರ್ಚುಗಳಿಗೆ ನಿಧಿ ಅನುಕೂಲವಾಗಲಿದೆ. ಸ್ವಚ್ಛತೆ ಮತ್ತು ಔಷಧಿ ಬಗ್ಗೆ ಗಮನಹರಿಸುವಂತೆ ಸೂಚಿಸಿದ್ದೇನೆ. ನೂತನ ಸರ್ಕಾರಿ ಆಸ್ಪತ್ರೆ ಕಟ್ಟಡ ಕಟ್ಟಿಸಲು ತೊಂದರೆ ಕೊಡುವವರಿಗೆ ಬುದ್ಧಿ ಹೇಳಬೇಕು ಎಂದರು.</p>.<p>ಸ್ವಚ್ಛತಾ ಸಿಬ್ಬಂದಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಂಡು ನಾವೇ ವೇತನ ಕೊಡುವ ಬಗ್ಗೆ ತೀರ್ಮಾನಿಸಿದ್ದೇವೆ ಎಂದರು.</p>.<p>‘₹5 ಕೋಟಿ ವೆಚ್ಚದಲ್ಲಿ ಹೊಂಬಾಳಮ್ಮನಕೆರೆ ಅಭಿವೃದ್ಧಿಪಡಿಸುವೆ. ಗೌರಮ್ಮನಕೆರೆಯನ್ನು ಬಹಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸುತ್ತಿದ್ದೇವೆ. ಪಟ್ಟಣವನ್ನು ಸರ್ವಾಂಗೀಣವಾಗಿ ಅಭಿವೃದ್ಧಿ ಪಡಿಸುತ್ತೇನೆ’ ಎಂದು ಹೇಳಿದರು.</p>.<p>ತಾಲ್ಲೂಕು ಆಸ್ಪತ್ರೆಯಲ್ಲಿ ನೂತನ ಸ್ಕ್ಯಾನಿಂಗ್ ಯಂತ್ರಕ್ಕೆ ಚಾಲನೆ ನೀಡಲಾಯಿತು.</p>.<p>ನೂತನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪೂಜಾರಿ ಪಾಳ್ಯ ಕೃಷ್ಣಮೂರ್ತಿ, ಕುದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತಿಪ್ಪಸಂದ್ರ ವೆಂಕಟೇಶ್, ಪ್ರಥಮ ದರ್ಜೆ ಗುತ್ತಿಗೆದಾರ ಕೆಂಪರಾಜು, ಪೋಲಿಸ್ ಇನ್ಸ್ಟೆಕ್ಟರ್ ಶ್ರೀನಿವಾಸ್, ಶೈಲಜಾ, ಜಯಮ್ಮ, ವೈದ್ಯರು ಹಾಗೂ ರಕ್ಷ ಸಮಿತಿ ಸದಸ್ಯರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಗಡಿ</strong>: ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಶಾಸಕ ಎಚ್.ಸಿ. ಬಾಲಕೃಷ್ಣ ಭೇಟಿ ನೀಡಿ ಪರಿಶೀಲಿಸಿದರು.<br><br> ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹುಕೋಟಿ ವೆಚ್ಚದಲ್ಲಿ ಸರ್ಕಾರಿ ಆಸ್ಪತ್ರೆ ನವೀಕರಿಸಲಾಗಿದೆ. ಆಸ್ಪತ್ರೆ ನಿಧಿಗೆ ₹25 ಲಕ್ಷ ದೇಣಿಗೆ ನೀಡುತ್ತೇನೆ. ಶ್ರೀಮಂತರು ಉದಾರವಾಗಿ ದೇಣಿಗೆ ನೀಡಬೇಕು. ಆಸ್ಪತ್ರೆಯ ಇತರೆ ಖರ್ಚುಗಳಿಗೆ ನಿಧಿ ಅನುಕೂಲವಾಗಲಿದೆ. ಸ್ವಚ್ಛತೆ ಮತ್ತು ಔಷಧಿ ಬಗ್ಗೆ ಗಮನಹರಿಸುವಂತೆ ಸೂಚಿಸಿದ್ದೇನೆ. ನೂತನ ಸರ್ಕಾರಿ ಆಸ್ಪತ್ರೆ ಕಟ್ಟಡ ಕಟ್ಟಿಸಲು ತೊಂದರೆ ಕೊಡುವವರಿಗೆ ಬುದ್ಧಿ ಹೇಳಬೇಕು ಎಂದರು.</p>.<p>ಸ್ವಚ್ಛತಾ ಸಿಬ್ಬಂದಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಂಡು ನಾವೇ ವೇತನ ಕೊಡುವ ಬಗ್ಗೆ ತೀರ್ಮಾನಿಸಿದ್ದೇವೆ ಎಂದರು.</p>.<p>‘₹5 ಕೋಟಿ ವೆಚ್ಚದಲ್ಲಿ ಹೊಂಬಾಳಮ್ಮನಕೆರೆ ಅಭಿವೃದ್ಧಿಪಡಿಸುವೆ. ಗೌರಮ್ಮನಕೆರೆಯನ್ನು ಬಹಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸುತ್ತಿದ್ದೇವೆ. ಪಟ್ಟಣವನ್ನು ಸರ್ವಾಂಗೀಣವಾಗಿ ಅಭಿವೃದ್ಧಿ ಪಡಿಸುತ್ತೇನೆ’ ಎಂದು ಹೇಳಿದರು.</p>.<p>ತಾಲ್ಲೂಕು ಆಸ್ಪತ್ರೆಯಲ್ಲಿ ನೂತನ ಸ್ಕ್ಯಾನಿಂಗ್ ಯಂತ್ರಕ್ಕೆ ಚಾಲನೆ ನೀಡಲಾಯಿತು.</p>.<p>ನೂತನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪೂಜಾರಿ ಪಾಳ್ಯ ಕೃಷ್ಣಮೂರ್ತಿ, ಕುದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತಿಪ್ಪಸಂದ್ರ ವೆಂಕಟೇಶ್, ಪ್ರಥಮ ದರ್ಜೆ ಗುತ್ತಿಗೆದಾರ ಕೆಂಪರಾಜು, ಪೋಲಿಸ್ ಇನ್ಸ್ಟೆಕ್ಟರ್ ಶ್ರೀನಿವಾಸ್, ಶೈಲಜಾ, ಜಯಮ್ಮ, ವೈದ್ಯರು ಹಾಗೂ ರಕ್ಷ ಸಮಿತಿ ಸದಸ್ಯರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>