ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆದಾಯಕ್ಕಿಂತ ಶೇ141ರಷ್ಟು ಹೆಚ್ಚು ಅಕ್ರಮ ಆಸ್ತಿ: ರಾಮನಗರ ಉಪವಿಭಾಗಾಧಿಕಾರಿ ಅಮಾನತು

ಆದಾಯಕ್ಕಿಂತಲೂ ಶೇ 141ರಷ್ಟು ಹೆಚ್ಚು ಅಕ್ರಮ ಆಸ್ತಿ
Last Updated 20 ಮಾರ್ಚ್ 2023, 20:04 IST
ಅಕ್ಷರ ಗಾತ್ರ

ರಾಮನಗರ: ಆದಾಯಕ್ಕಿಂತ ಶೇ 141ರಷ್ಟು ಹೆಚ್ಚು ಆಸ್ತಿ ಹೊಂದಿ ರುವ ಆರೋಪ ಮೇಲ್ನೋಟಕ್ಕೆ ಸಾಬೀತಾದ ಹಿನ್ನೆಲೆಯಲ್ಲಿ ಇಲ್ಲಿನ ಉಪ ವಿಭಾಗಾಧಿಕಾರಿ ಸಿ. ಮಂಜು ನಾಥ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಮಂಜುನಾಥ್ ₹4.69 ಕೋಟಿ ಮೊತ್ತದ ಸ್ಥಿರಾಸ್ತಿ ಮತ್ತು ಚರಾಸ್ತಿ ಹೊಂದಿದ್ದು, ₹71 ಲಕ್ಷ ಖರ್ಚು ಮಾಡಿದ್ದಾರೆ. ಅವರ ಒಟ್ಟು ಆದಾಯ ₹2.23 ಕೋಟಿ ಇದ್ದು, ಆದಾಯಕ್ಕಿಂತ ₹3.17 ಕೋಟಿ ಮೊತ್ತದ ಅಧಿಕ ಆಸ್ತಿ ಹೊಂದಿದ್ದಾರೆ. ಶೇ 141.90ರಷ್ಟು ಅಧಿಕ ಆಸ್ತಿ ಅಕ್ರಮವಾಗಿ ಗಳಿಸಿದ್ದಾರೆ ಎಂದು ಎಸಿಬಿ ಅಧಿಕಾರಿಗಳು ಚಾರ್ಜ್‌ ಶೀಟ್‌ ಸಲ್ಲಿಸಿದ್ದರು. ಈ ಆರೋಪ ಮೇಲ್ನೋಟಕ್ಕೆ ಸಾಬೀತಾದ ಹಿನ್ನೆಲೆ
ಯಲ್ಲಿ ಸರ್ಕಾರ ಇದೇ 17ರಂದು ಮಂಜು ನಾಥ್‌ ಅವರನ್ನು ಸೇವೆಯಿಂದ ಅಮಾ ನತುಗೊಳಿಸಿ ಆದೇಶ ಹೊರಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT