<p><strong>ಕನಕಪುರ</strong>: ಘನ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣದಲ್ಲಿ ಅಕ್ರಮ ನಡೆಯುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಬುಧವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ಸಾತನೂರು ಹೋಬಳಿ ಕಬ್ಬಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಪೂಜಿನಗರ ಕಾಲೊನಿ ಬಳಿ 10 ಎಕರೆ ಗೋಮಾಳ ಪ್ರದೇಶದಲ್ಲಿ ಕಸ ವಿಲೇವಾರಿ ಘಟಕ ನಿರ್ಮಾಣ ಮಾಡುತ್ತಿದ್ದು ಅಧಿಕಾರಿಗಳು ಪರಿಶೀಲಿಸಿದರು.</p>.<p>ಕಸ ವಿಲೇವಾರಿ ಘಟಕ ನಿರ್ಮಾಣ ನೆಪದಲ್ಲಿ ನರೇಗಾ ಯೋಜನೆ ದುರ್ಬಳಕೆ ಮಾಡಿಕೊಂಡು ಸರ್ಕಾರಿ ಗೋಮಾಳದಲ್ಲಿ ಕೆಲ ರಾಜಕೀಯ ಬಲಾಢ್ಯರು ಅಕ್ರಮವಾಗಿ ಕಲ್ಲು ಗಣಿಗಾರಿಕೆ ಮಾಡುತ್ತಿದ್ದಾರೆ ಎಂದು ರವಿಕುಮಾರ್ ಎಂಬುವರು ದೂರು ನೀಡಿದ್ದರು.</p>.<p>ತಾಲ್ಲೂಕು ಪಂಚಾಯತಿ ಸಹಾಯಕ ನಿರ್ದೇಶಕ ಮೋಹನ್ಬಾಬು, ರಾಜಸ್ವ ನಿರೀಕ್ಷಕ ಕಮಲ್ ಅಲಿ ಪಾಷ, ಕಬ್ಬಾಳು ಗ್ರಾಮ ಪಂಚಾಯತಿ ಪಿಡಿಒ ಲೋಕೇಶ್, ಕರ ವಸೂಲಿಗಾರ ದ್ಯಾವೇಗೌಡ ಉಪಸ್ಥಿತರಿದ್ದರು.</p>.<div><blockquote>ದೂರಿನ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ಅಕ್ರಮ ನಡೆದಿದ್ದರೆ ಕಾನೂನಾತ್ಮಕವಾಗಿ ಕ್ರಮಕೈಗೊಳ್ಳಲಾಗುವುದು.</blockquote><span class="attribution">ನಂದಿನಿ, ಭೂ ವಿಜ್ಞಾನಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ರಾಮನಗರ</span></div>.<div><blockquote>ನೆಪ ಮಾತ್ರಕ್ಕೆ ಸ್ಥಳ ಮಹಜರು ಮಾಡಲಾಗಿದೆ. ನ್ಯಾಯ ನಿರೀಕ್ಷಿಸಲು ಸಾಧ್ಯವಿಲ್ಲ. ಲೋಕಾಯುಕ್ತದಲ್ಲಿ ಪ್ರಕರಣ ದಾಖಲು ಮಾಡುತ್ತೇನೆ.</blockquote><span class="attribution">ಕಂಚನಹಳ್ಳಿ ರವಿಕುಮಾರ, ಸಾಮಾಜಿಕ ಕಾರ್ಯಕರ್ತ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ</strong>: ಘನ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣದಲ್ಲಿ ಅಕ್ರಮ ನಡೆಯುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಬುಧವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ಸಾತನೂರು ಹೋಬಳಿ ಕಬ್ಬಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಪೂಜಿನಗರ ಕಾಲೊನಿ ಬಳಿ 10 ಎಕರೆ ಗೋಮಾಳ ಪ್ರದೇಶದಲ್ಲಿ ಕಸ ವಿಲೇವಾರಿ ಘಟಕ ನಿರ್ಮಾಣ ಮಾಡುತ್ತಿದ್ದು ಅಧಿಕಾರಿಗಳು ಪರಿಶೀಲಿಸಿದರು.</p>.<p>ಕಸ ವಿಲೇವಾರಿ ಘಟಕ ನಿರ್ಮಾಣ ನೆಪದಲ್ಲಿ ನರೇಗಾ ಯೋಜನೆ ದುರ್ಬಳಕೆ ಮಾಡಿಕೊಂಡು ಸರ್ಕಾರಿ ಗೋಮಾಳದಲ್ಲಿ ಕೆಲ ರಾಜಕೀಯ ಬಲಾಢ್ಯರು ಅಕ್ರಮವಾಗಿ ಕಲ್ಲು ಗಣಿಗಾರಿಕೆ ಮಾಡುತ್ತಿದ್ದಾರೆ ಎಂದು ರವಿಕುಮಾರ್ ಎಂಬುವರು ದೂರು ನೀಡಿದ್ದರು.</p>.<p>ತಾಲ್ಲೂಕು ಪಂಚಾಯತಿ ಸಹಾಯಕ ನಿರ್ದೇಶಕ ಮೋಹನ್ಬಾಬು, ರಾಜಸ್ವ ನಿರೀಕ್ಷಕ ಕಮಲ್ ಅಲಿ ಪಾಷ, ಕಬ್ಬಾಳು ಗ್ರಾಮ ಪಂಚಾಯತಿ ಪಿಡಿಒ ಲೋಕೇಶ್, ಕರ ವಸೂಲಿಗಾರ ದ್ಯಾವೇಗೌಡ ಉಪಸ್ಥಿತರಿದ್ದರು.</p>.<div><blockquote>ದೂರಿನ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ಅಕ್ರಮ ನಡೆದಿದ್ದರೆ ಕಾನೂನಾತ್ಮಕವಾಗಿ ಕ್ರಮಕೈಗೊಳ್ಳಲಾಗುವುದು.</blockquote><span class="attribution">ನಂದಿನಿ, ಭೂ ವಿಜ್ಞಾನಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ರಾಮನಗರ</span></div>.<div><blockquote>ನೆಪ ಮಾತ್ರಕ್ಕೆ ಸ್ಥಳ ಮಹಜರು ಮಾಡಲಾಗಿದೆ. ನ್ಯಾಯ ನಿರೀಕ್ಷಿಸಲು ಸಾಧ್ಯವಿಲ್ಲ. ಲೋಕಾಯುಕ್ತದಲ್ಲಿ ಪ್ರಕರಣ ದಾಖಲು ಮಾಡುತ್ತೇನೆ.</blockquote><span class="attribution">ಕಂಚನಹಳ್ಳಿ ರವಿಕುಮಾರ, ಸಾಮಾಜಿಕ ಕಾರ್ಯಕರ್ತ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>