<p><strong>ಹಾರೋಹಳ್ಳಿ:</strong> ಹಾರೋಹಳ್ಳಿ ಕೈಗಾರಿಕಾ ಪ್ರದೇಶದ ಹುಲ್ಲಿಸಿದ್ದೇಗೌಡನದೊಡ್ಡಿ ಗ್ರಾಮದ ಬಳಿಯ ಸರ್ಕಾರಿ ಗೋಮಾಳದ ಖಾಲಿ ಜಾಗದಲ್ಲಿ ಆಕ್ರಮವಾಗಿ ಮಣ್ಣು ಲೂಟಿ ಎಗ್ಗಿಲ್ಲದೆ ನಡೆಯುತ್ತಿದೆ.</p>.<p>ಕೈಗಾರಿಕಾ ಪ್ರದೇಶಕ್ಕೆ ಸೇರಿದ ಖಾಲಿ ಜಾಗದ ಜಮೀನಿನಲ್ಲಿ ಹಗಲು ರಾತ್ರಿ ಎನ್ನದೆ ಯಂತ್ರಗಳ ಮೂಲಕ ನಿರಂತರವಾಗಿ ಮಣ್ಣನ್ನು ಬಗೆಯಲಾಗುತ್ತಿದೆ. ಕಾರ್ಖಾನೆಗಳಿಗೆ ಮಣ್ಣು ಲೂಟಿ ಮಾಡಲಾಗುತ್ತಿದೆ.</p>.<p>ನಿತ್ಯ ನೂರಾರು ಲಾರಿಗಳು ರಸ್ತೆಗಳ ಮೂಲಕ ಸಂಚರಿಸುತ್ತಿವೆ. ನಿಗದಿಪಡಿಸಿದ್ದಕ್ಕಿಂತ ಅಧಿಕ ಪ್ರಮಾಣದಲ್ಲಿ ಮಣ್ಣು ಸಾಗಿಸಲಾಗುತ್ತಿದ್ದು ಅಧಿಕ ಭಾರಕ್ಕೆ ರಸ್ತೆಗಳು ಗುಂಡಿ ಬಿದ್ದು ಹಾಳಾಗಿವೆ. </p>.<p>ಸರಕಾರಿ ಜಾಗದಲ್ಲಿ ಮಣ್ಣು ತೆಗೆದು ಸಾಗಾಟ ಮಾಡಬೇಕಾದರೆ ಸ್ಥಳೀಯ ಆಡಳಿತದಿಂದ ಪರವಾನಿಗೆ ಪಡೆದು, ಮಣ್ಣು ತೆಗೆಯುವ ಪ್ರಮಾಣಕ್ಕೆ ಅನುಗುಣವಾಗಿ ಸರಕಾರಕ್ಕೆ ಹಣ ಸಂದಾಯ ಮಾಡಬೇಕು. ಇದ್ಯಾವುದೂ ಮಾಡದ ಮಣ್ಣುಗಳ್ಳರು ರಾತ್ರಿ ಸಮಯದಲ್ಲಿ ಮಣ್ಣು ಸಾಗಣೆ ದಂಧೆ ಮಾಡುತ್ತಿದ್ದಾರೆ.</p>.<p>ಒಂದು ಟಿಪ್ಪರ್ ಲಾರಿಗೆ ಸುಮಾರು ₹15 ರಿಂದ ₹20 ಸಾವಿರದವರೆಗೂ ಬೆಲೆ ಇದೆ. ಈಗಾಗಲೇ ಸುಮಾರು ನೂರಾರು ಎಕರೆ ಪ್ರದೇಶದ ಮಣ್ಣಿನ ಗುಡ್ಡವನ್ನು ಕೊರೆದು ಲೂಟಿ ಮಾಡಲಾಗಿದೆ.</p>.<p>ಕೈಗಾರಿಕಾ ಪ್ರದೇಶಕ್ಕೆ ಸೇರಿದ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಮಣ್ಣು ತೆಗೆಯುತ್ತಿರುವುದನ್ನು ಕಂದಾಯ, ಇಲಾಖೆ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾರೋಹಳ್ಳಿ:</strong> ಹಾರೋಹಳ್ಳಿ ಕೈಗಾರಿಕಾ ಪ್ರದೇಶದ ಹುಲ್ಲಿಸಿದ್ದೇಗೌಡನದೊಡ್ಡಿ ಗ್ರಾಮದ ಬಳಿಯ ಸರ್ಕಾರಿ ಗೋಮಾಳದ ಖಾಲಿ ಜಾಗದಲ್ಲಿ ಆಕ್ರಮವಾಗಿ ಮಣ್ಣು ಲೂಟಿ ಎಗ್ಗಿಲ್ಲದೆ ನಡೆಯುತ್ತಿದೆ.</p>.<p>ಕೈಗಾರಿಕಾ ಪ್ರದೇಶಕ್ಕೆ ಸೇರಿದ ಖಾಲಿ ಜಾಗದ ಜಮೀನಿನಲ್ಲಿ ಹಗಲು ರಾತ್ರಿ ಎನ್ನದೆ ಯಂತ್ರಗಳ ಮೂಲಕ ನಿರಂತರವಾಗಿ ಮಣ್ಣನ್ನು ಬಗೆಯಲಾಗುತ್ತಿದೆ. ಕಾರ್ಖಾನೆಗಳಿಗೆ ಮಣ್ಣು ಲೂಟಿ ಮಾಡಲಾಗುತ್ತಿದೆ.</p>.<p>ನಿತ್ಯ ನೂರಾರು ಲಾರಿಗಳು ರಸ್ತೆಗಳ ಮೂಲಕ ಸಂಚರಿಸುತ್ತಿವೆ. ನಿಗದಿಪಡಿಸಿದ್ದಕ್ಕಿಂತ ಅಧಿಕ ಪ್ರಮಾಣದಲ್ಲಿ ಮಣ್ಣು ಸಾಗಿಸಲಾಗುತ್ತಿದ್ದು ಅಧಿಕ ಭಾರಕ್ಕೆ ರಸ್ತೆಗಳು ಗುಂಡಿ ಬಿದ್ದು ಹಾಳಾಗಿವೆ. </p>.<p>ಸರಕಾರಿ ಜಾಗದಲ್ಲಿ ಮಣ್ಣು ತೆಗೆದು ಸಾಗಾಟ ಮಾಡಬೇಕಾದರೆ ಸ್ಥಳೀಯ ಆಡಳಿತದಿಂದ ಪರವಾನಿಗೆ ಪಡೆದು, ಮಣ್ಣು ತೆಗೆಯುವ ಪ್ರಮಾಣಕ್ಕೆ ಅನುಗುಣವಾಗಿ ಸರಕಾರಕ್ಕೆ ಹಣ ಸಂದಾಯ ಮಾಡಬೇಕು. ಇದ್ಯಾವುದೂ ಮಾಡದ ಮಣ್ಣುಗಳ್ಳರು ರಾತ್ರಿ ಸಮಯದಲ್ಲಿ ಮಣ್ಣು ಸಾಗಣೆ ದಂಧೆ ಮಾಡುತ್ತಿದ್ದಾರೆ.</p>.<p>ಒಂದು ಟಿಪ್ಪರ್ ಲಾರಿಗೆ ಸುಮಾರು ₹15 ರಿಂದ ₹20 ಸಾವಿರದವರೆಗೂ ಬೆಲೆ ಇದೆ. ಈಗಾಗಲೇ ಸುಮಾರು ನೂರಾರು ಎಕರೆ ಪ್ರದೇಶದ ಮಣ್ಣಿನ ಗುಡ್ಡವನ್ನು ಕೊರೆದು ಲೂಟಿ ಮಾಡಲಾಗಿದೆ.</p>.<p>ಕೈಗಾರಿಕಾ ಪ್ರದೇಶಕ್ಕೆ ಸೇರಿದ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಮಣ್ಣು ತೆಗೆಯುತ್ತಿರುವುದನ್ನು ಕಂದಾಯ, ಇಲಾಖೆ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>