<p><strong>ಕನಕಪುರ:</strong> ಉಪ ಮುಖ್ಯಮಂತ್ರಿಗಳ ತವರು ಕ್ಷೇತ್ರದಲ್ಲೇ, ವಸತಿ ಯೋಜನೆಯಲ್ಲಿ ಭ್ರಷ್ಟಾಚಾರ ನಡೆದಿದ್ದು, ಇದರ ಬಗ್ಗೆ ಸ್ವತಃ ಡಿಸಿಎಂ ಸೂಕ್ತ ತನಿಖೆ ನಡೆಸಬೇಕೆಂದು ಶ್ರೀರಾಮ ಸೇನೆ ದಕ್ಷಿಣ ಕರ್ನಾಟಕ ಪ್ರಮುಖ ಸುಂದರೇಶ್ ನರಗಲ್ ಆಗ್ರಹಿಸಿದರು.</p>.<p>ಇಲ್ಲಿನ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಶ್ರೀರಾಮ ಸೇನೆ ವತಿಯಿಂದ ವಸತಿ ಯೋಜನೆ ಅಡಿ ನಡೆದಿರುವ ಅಕ್ರಮದ ವಿರುದ್ಧ ತನಿಖೆ ನಡೆಸುವಂತೆ ಒತ್ತಾಯಿಸಿ ಬುಧವಾರ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿ ಮಾತನಾಡಿದರು.</p>.<p>ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ನಗರಸಭೆ ವ್ಯಾಪ್ತಿಯಲ್ಲಿ 1881 ಮನೆಗಳು ಮಂಜೂರಾಗಿದ್ದು, ಈ ಯೋಜನೆಯು ನೈಜ ಫಲಾನುಭವಿಗಳಿಗೆ ತಲುಪಿಲ್ಲ. ಯೋಜನೆಯಲ್ಲಿ ಶ್ರೀಮಂತರಿಗೆ ಮನೆಗಳನ್ನು ಕಟ್ಟಿಕೊಡಲಾಗುತ್ತಿದೆ ಎಂದು ಆರೋಪಿಸಿದರು.</p>.<p>ಯೋಜನೆಯಡಿ ಮನೆಗಳನ್ನು ನಿರ್ಮಾಣ ಮಾಡುತ್ತಿರುವ ಗುತ್ತಿಗೆದಾರರು ಕ್ರಮಬದ್ಧವಾಗಿ ಮತ್ತು ಗುಣಮಟ್ಟದಲ್ಲಿ ಕಾಮಗಾರಿಗಳನ್ನು ಮಾಡದೆ ಹಲವು ಮನೆಗಳನ್ನು ಪ್ರಾರಂಭಿಸಿ ಅರ್ಧಕ್ಕೆ ನಿಲ್ಲಿಸಿದ್ದಾರೆ, ಸಣ್ಣಪುಟ್ಟ ಗುಡಿಸಲು, ಮನೆಗಳಲ್ಲಿ ವಾಸವಿದ್ದ ಜನತೆ ಈಗ ತೀರ ಬೀದಿಗೆ ಬಿದ್ದಿದ್ದಾರೆ ಎಂದು ದೂರಿದರು.</p>.<p>ದಲಿತರು ಹಾಗೂ ಹಿಂದುಳಿದ ವರ್ಗದ ಬಡವರಿಗೆ ಅನ್ಯಾಯವಾಗುತ್ತಿದೆ. ಈ ಅಕ್ರಮದ ವಿರುದ್ಧ ಶ್ರೀರಾಮ ಸೇನೆ ವತಿಯಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಧರಣಿ ನಡೆಸಲು ತೀರ್ಮಾನಿಸಲಾಗಿತ್ತು, ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಪ್ರತಿಭಟನಾ ಧರಣಿಯನ್ನು ಕೈಬಿಟ್ಟಿದ್ದು ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಗುತ್ತಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಬಡವರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದರು. <br><br> ಒಂದು ತಿಂಗಳ ಅವಧಿಯಲ್ಲಿ ಸರ್ಕಾರವು ಈ ಪ್ರಕರಣವನ್ನು ಸಿಬಿಐ ಇಲ್ಲವೇ ಇಡಿಗೆ ವಹಿಸಿ ತನಿಖೆ ನಡೆಸಬೇಕು. ಅರ್ಹ ಫಲಾನುಭವಿಗಳಿಗೆ ಶೀಘ್ರವಾಗಿ ಮನೆ ನಿರ್ಮಾಣ ಮಾಡಿಕೊಡಬೇಕು. ಅಕ್ರಮ ನಡೆಸಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಬೇಕು ಎಂದು ಮನವಿ ಪತ್ರದಲ್ಲಿ ಒತ್ತಾಯಿಸಲಾಗಿದೆ.</p>.<p>ಶ್ರೀರಾಮ ಸೇನೆ ಉಪಾಧ್ಯಕ್ಷ ಅರುಣ್, ಕಾರ್ಯದರ್ಶಿ ನವೀನ್, ತಾಲ್ಲೂಕು ಅಧ್ಯಕ್ಷ ಮಹೇಶ್ ಗೌಡ, ಪದಾಧಿಕಾರಿಗಳಾದ ದುರ್ಗೇಶ್, ರಾಜೇಶ್, ಕುಮಾರ್, ಶರತ್, ಸುಹಾಸ್, ಶೇಖರ್ ಸೇರಿದಂತೆ ಸಂಘಟನೆಯ ಮುಖಂಡರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ:</strong> ಉಪ ಮುಖ್ಯಮಂತ್ರಿಗಳ ತವರು ಕ್ಷೇತ್ರದಲ್ಲೇ, ವಸತಿ ಯೋಜನೆಯಲ್ಲಿ ಭ್ರಷ್ಟಾಚಾರ ನಡೆದಿದ್ದು, ಇದರ ಬಗ್ಗೆ ಸ್ವತಃ ಡಿಸಿಎಂ ಸೂಕ್ತ ತನಿಖೆ ನಡೆಸಬೇಕೆಂದು ಶ್ರೀರಾಮ ಸೇನೆ ದಕ್ಷಿಣ ಕರ್ನಾಟಕ ಪ್ರಮುಖ ಸುಂದರೇಶ್ ನರಗಲ್ ಆಗ್ರಹಿಸಿದರು.</p>.<p>ಇಲ್ಲಿನ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಶ್ರೀರಾಮ ಸೇನೆ ವತಿಯಿಂದ ವಸತಿ ಯೋಜನೆ ಅಡಿ ನಡೆದಿರುವ ಅಕ್ರಮದ ವಿರುದ್ಧ ತನಿಖೆ ನಡೆಸುವಂತೆ ಒತ್ತಾಯಿಸಿ ಬುಧವಾರ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿ ಮಾತನಾಡಿದರು.</p>.<p>ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ನಗರಸಭೆ ವ್ಯಾಪ್ತಿಯಲ್ಲಿ 1881 ಮನೆಗಳು ಮಂಜೂರಾಗಿದ್ದು, ಈ ಯೋಜನೆಯು ನೈಜ ಫಲಾನುಭವಿಗಳಿಗೆ ತಲುಪಿಲ್ಲ. ಯೋಜನೆಯಲ್ಲಿ ಶ್ರೀಮಂತರಿಗೆ ಮನೆಗಳನ್ನು ಕಟ್ಟಿಕೊಡಲಾಗುತ್ತಿದೆ ಎಂದು ಆರೋಪಿಸಿದರು.</p>.<p>ಯೋಜನೆಯಡಿ ಮನೆಗಳನ್ನು ನಿರ್ಮಾಣ ಮಾಡುತ್ತಿರುವ ಗುತ್ತಿಗೆದಾರರು ಕ್ರಮಬದ್ಧವಾಗಿ ಮತ್ತು ಗುಣಮಟ್ಟದಲ್ಲಿ ಕಾಮಗಾರಿಗಳನ್ನು ಮಾಡದೆ ಹಲವು ಮನೆಗಳನ್ನು ಪ್ರಾರಂಭಿಸಿ ಅರ್ಧಕ್ಕೆ ನಿಲ್ಲಿಸಿದ್ದಾರೆ, ಸಣ್ಣಪುಟ್ಟ ಗುಡಿಸಲು, ಮನೆಗಳಲ್ಲಿ ವಾಸವಿದ್ದ ಜನತೆ ಈಗ ತೀರ ಬೀದಿಗೆ ಬಿದ್ದಿದ್ದಾರೆ ಎಂದು ದೂರಿದರು.</p>.<p>ದಲಿತರು ಹಾಗೂ ಹಿಂದುಳಿದ ವರ್ಗದ ಬಡವರಿಗೆ ಅನ್ಯಾಯವಾಗುತ್ತಿದೆ. ಈ ಅಕ್ರಮದ ವಿರುದ್ಧ ಶ್ರೀರಾಮ ಸೇನೆ ವತಿಯಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಧರಣಿ ನಡೆಸಲು ತೀರ್ಮಾನಿಸಲಾಗಿತ್ತು, ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಪ್ರತಿಭಟನಾ ಧರಣಿಯನ್ನು ಕೈಬಿಟ್ಟಿದ್ದು ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಗುತ್ತಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಬಡವರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದರು. <br><br> ಒಂದು ತಿಂಗಳ ಅವಧಿಯಲ್ಲಿ ಸರ್ಕಾರವು ಈ ಪ್ರಕರಣವನ್ನು ಸಿಬಿಐ ಇಲ್ಲವೇ ಇಡಿಗೆ ವಹಿಸಿ ತನಿಖೆ ನಡೆಸಬೇಕು. ಅರ್ಹ ಫಲಾನುಭವಿಗಳಿಗೆ ಶೀಘ್ರವಾಗಿ ಮನೆ ನಿರ್ಮಾಣ ಮಾಡಿಕೊಡಬೇಕು. ಅಕ್ರಮ ನಡೆಸಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಬೇಕು ಎಂದು ಮನವಿ ಪತ್ರದಲ್ಲಿ ಒತ್ತಾಯಿಸಲಾಗಿದೆ.</p>.<p>ಶ್ರೀರಾಮ ಸೇನೆ ಉಪಾಧ್ಯಕ್ಷ ಅರುಣ್, ಕಾರ್ಯದರ್ಶಿ ನವೀನ್, ತಾಲ್ಲೂಕು ಅಧ್ಯಕ್ಷ ಮಹೇಶ್ ಗೌಡ, ಪದಾಧಿಕಾರಿಗಳಾದ ದುರ್ಗೇಶ್, ರಾಜೇಶ್, ಕುಮಾರ್, ಶರತ್, ಸುಹಾಸ್, ಶೇಖರ್ ಸೇರಿದಂತೆ ಸಂಘಟನೆಯ ಮುಖಂಡರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>