ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಚ್.ಎನ್. ಅಶೋಕ್ ಮಾತನಾಡಿ "ಜನಾಂಗ, ಸಮುದಾಯದ ವಿಚಾರ ಬಂದಾಗ ಪ್ರತಿಯೊಬ್ಬರೂ ಪಕ್ಷಬೇಧ ಮರೆತು ಒಗ್ಗೂಡಬೇಕು. ಮುಂದಿನ ಸಚಿವಸಂಪುಟ ಸಭೆಯಲ್ಲೇ ಈ ಬಗ್ಗೆ ತೀರ್ಮಾನ ಪ್ರಕಟಿಸಬೇಕು. ಇಲ್ಲವಾದಲ್ಲಿ ಪ್ರತಿಭಟನೆ ನಡೆಸಬೇಕಾಗುತ್ತದೆ' ಎಂದು ಎಚ್ಚರಿಸಿದರು.
ತಾಲ್ಲೂಕು ಪಂಚಾಯಿತಿ ಸದಸ್ಯ ಗಾಣಕಲ್ ನಟರಾಜು ಇದ್ದರು.
ಬಾಲಣ್ಣರನ್ನು ಹಿಂಬಾಲಿಸಿದೆ!
"ಜೆಡಿಎಸ್ ಚಿಹ್ನೆಯಿಂದ ಸ್ಪರ್ಧಿಸಿ ಜಿ.ಪಂ. ಸದಸ್ಯನಾಗಿ ಆಯ್ಕೆಯಾಗಿದ್ದೆ. ಆದರೆ ಸಹೋದರ ಎಚ್.ಸಿ. ಬಾಲಕೃಷ್ಣ ಕಾಂಗ್ರೆಸ್ ಸೇರಿದಾಗ ಅವರನ್ನು ಹಿಂಬಾಲಿಸಿದೆ. ಈಗ ಕಾಂಗ್ರೆಸ್ ಮುಖಂಡರು ನನಗೆ ಬಹುದೊಡ್ಡ ಜವಾಬ್ದಾರಿಯನ್ನೇ ನೀಡಿದ್ದಾರೆ' ಎಂದು ಎಚ್.ಎನ್. ಅಶೋಕ್ ತಮ್ಮ ಪಕ್ಷಾಂತರವನ್ನು ಸಮರ್ಥಿಸಿಕೊಂಡರು.