ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನಡೆಸಿದ ನಗರಸಭೆಯ ಕಾಂಗ್ರೆಸ್ ಸದಸ್ಯರಾದ ವಾಸಿಲ್ ಆಲಿಖಾನ್, ಸೈಯದ್ ಸಾಬೀರ್ ಉಲ್ಲಾ ಮತ್ತು ಮಿತನ್ ಮಾತನಾಡಿ, ‘ನಗರದಲ್ಲಿ ವಿಲೇವಾರಿ ಮಾಡದಿರುವ ಕಸವು ರಸ್ತೆಯಲ್ಲೆಲ್ಲಾ ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ. ಇದರಿಂದ ವಾಹನ ಸವಾರರು, ಶಾಲಾ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ನಡೆದಾಡಲು ಸಾಧ್ಯವಾಗದಂಥ ಸ್ಥಿತಿ ನಿರ್ಮಾಣವಾಗಿದೆ. ಈ ಕುರಿತು ಪೌರಾಯುಕ್ತ, ನಗರಸಭೆ ಅಧ್ಯಕ್ಷರ ಗಮನಕ್ಕೆ ತಂದರೂ, ಯಾವುದೇ ಪ್ರಯೋಜನವಾಗಿಲ್ಲ’ ಎಂದು ಆರೋಪಿಸಿದರು.