ಬಿಡದಿಯ ನೆಲ್ಲಿಗುಡ್ಡ ಕೆರೆಯಲ್ಲಿ ಜಲಕ್ರೀಡೆಗಳಿಗೆ ಚಾಲನೆ ನೀಡಿದ ಸಚಿವ ರಾಮಲಿಂಗಾ ರೆಡ್ಡಿ ಅವರು ನಂತರ ಕೆರೆಯಲ್ಲಿ ಬೋಟಿಂಗ್ ನಡೆಸಿದರು ಶಾಸಕ ಬಾಲಕೃಷ್ಣ ಹಾಗೂ ಇತರರು ಸಾಥ್ ನೀಡಿದರು
ಬಿಡದಿಯ ನೆಲ್ಲಿಗುಡ್ಡ ಕೆರೆ ರಸ್ತೆಗೆ ಸ್ಥಳಾಂತರಗೊಂಡಿರುವ ಪುರಸಭೆಯ ನೂತನ ಕಚೇರಿ
ರಾಜಧಾನಿ ಬೆಂಗಳೂರಿನಿಂದ 40 ಕಿ.ಮೀ. ವ್ಯಾಪ್ತಿಯವರೆಗೆ ಬಿಎಂಟಿಸಿ ಬಸ್ಗಳ ಕಾರ್ಯಾಚರಣೆ ವಿಸ್ತರಣೆಗೆ ಅನುಮೋದನೆ ನೀಡಲಾಗಿದೆ. ಸದ್ಯದಲ್ಲೇ ರಾಮನಗರಕ್ಕೆ ಬಿಎಂಟಿಸಿ ಬಸ್ ಸೇವೆ ವಿಸ್ತರಣೆಯಾಗಲಿದೆ
– ರಾಮಲಿಂಗಾ ರೆಡ್ಡಿ ಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ
ಬಿಡದಿ ಪಟ್ಟಣವು ಶರವೇಗದಲ್ಲಿ ಅಭಿವೃದ್ಧಿ ಹೊಂದುತ್ತಿದ್ದು ಭವಿಷ್ಯದ ಬೆಂಗಳೂರಾಗಿ ರೂಪುಗೊಳ್ಳುತ್ತಿದೆ. ಅದಕ್ಕೆ ಪೂರಕವಾಗಿ ಶಾಸಕ ಬಾಲಕೃಷ್ಣ ನೇತೃತ್ವದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ
– ಎಸ್. ರವಿ ವಿಧಾನ ಪರಿಷತ್ ಸದಸ್ಯ
ಸಚಿವರು ಶಾಸಕರಿಂದ ಬೋಟಿಂಗ್
ನೆಲ್ಲಿಗುಡ್ಡೆ ಕೆರೆಯಲ್ಲಿ ಪೆಡಲ್ ಬೋಟ್ ಕಯಾಕಿಂಗ್ ಸೈಕಲಿಂಗ್ ಮೋಟಾರ್ ಬೋಟ್ ಹಾಗೂ ಸ್ಪೀಡ್ ಬೋಟ್ ಜಲಕ್ರೀಡೆಗಳಿಗೆ ಚಾಲನೆ ನೀಡಿದ ಸಚಿವ ರಾಮಲಿಂಗಾ ರೆಡ್ಡಿ ಅವರು ನಂತರ ಕೆರೆಯಲ್ಲಿ ಒಂದು ಸುತ್ತು ಬೋಟಿಂಗ್ ನಡೆಸಿದರು. ಶಾಸಕ ಬಾಲಕೃಷ್ಣ ವಿಧಾನ ಪರಿಷತ್ ಸದಸ್ಯ ಬಾಲಕೃಷ್ಣ ಗ್ಯಾರಂಟಿ ಅಧ್ಯಕ್ಷ ಕೆ. ರಾಜು ಜಿಬಿಡಿಎ ಅಧ್ಯಕ್ಷ ಜಿ.ಎನ್. ನಟರಾಜ್ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಪುರಸಭೆ ಸದಸ್ಯರು ಸೇರಿದಂತೆ ಕಾಂಗ್ರೆಸ್ ಮುಖಂಡರು ಸಾಥ್ ನೀಡಿದರು. ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ರವಿಕುಮಾರ್ ಎಸ್ಕೇಪ್ ಟು ಎಕ್ಸ್ಪ್ಲೋರ್ ವ್ಯವಸ್ಥಾಪಕ ಸ್ವಾಮಿ ಹಾಗೂ ಇತರರು ಇದ್ದರು.